ಚಾಮರಾಜನಗರ : ಕಾಮಗೆರೆಯ ಹೋಲಿಕ್ರಾಸ್ ಆಸ್ಪತ್ರೆಯು ಈ ಭಾಗದ ಜನರಿಗೆ ಅತ್ಯುತ್ತಮ ಸೇವೆ ನೀಡುತ್ತಿದೆ ಎಂದು ಮಾಜಿ ಶಾಸಕಿ ಪರಿಮಳಾ ನಾಗಪ್ಪ ಹೇಳಿದರು.
ಜಿಲ್ಲೆಯ ಕೊಳ್ಳೆಗಾಲ ತಾಲ್ಲೂಕಿನ ಕಾಮಗೆರೆಯಲ್ಲಿರುವ ಹೋಲಿಕ್ರಾಸ್ ನರ್ಸಿಂಗ್ ಕಾಲೇಜಿನ ರಜತಮಹೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಹಾವು ಕಚ್ಚುವ ಪ್ರಕರಣ, ಅಪಘಾತ ಸೇರಿದಂತೆ ಯಾವುದೇ ಪ್ರಕರಣ ನಡೆದರೂ ಮೊದಲು ಜನ ಹೋಲಿಕ್ರಾಸ್ ಆಸ್ಪತ್ರೆಯೆಡೆಗೆ ಬರುತ್ತಾರೆ. ಇಲ್ಲಿನ ಸಿಬ್ಬಂದಿ ಸೇವಾ ಮನೋಭಾವದಿಂದಲೇ ನೋಡುತ್ತಾರೆ. ಇದರಿಂದಲೇ ಈ ಸಂಸ್ಥೆ ಬಗ್ಗೆ ಜನರಲ್ಲೂ ಸದಾಭಿಪ್ರಾಯವಿದೆ ಎಂದು ನುಡಿದರು.
ಮಕ್ಕಳ ತಜ್ಞ ಡಾ.ಶಿವು ಮಾತನಾಡಿ, ಈ ಭಾಗದಲ್ಲಿ ನಾನು ಕೆಲಸ ಮಾಡಿದ್ದೇನೆ. ಚಿಕಿತ್ಸೆ ವಿಚಾರದಲ್ಲಿ ಹೋಲಿಕ್ರಾಸ್ ಸಂಸ್ಥೆಯ ಸಿಬ್ಬಂದಿ ಸೇವೆ ಸ್ಮರಣೀಯ. ಇಂಥ ಮನೋಭಾವದಿಂದಲೇ ಯಾವುದೇ ಸಂಸ್ಥೆ ಬೆಳೆಯಲು ಸಾಧ್ಯ ಎಂದು ಹೇಳಿದರು.
ಕೊಳ್ಳೇಗಾಲ ಪಿಎಸ್ಐ ಬಿ.ಸಿ.ಮಂಜುನಾಥ್ ಮಾತನಾಡಿ, ಗ್ರಾಮಾಂತರ ವ್ಯಾಪ್ತಿಯಲ್ಲಿ ಯಾವುದೇ ತುರ್ತು ಪ್ರಕರಣವಿದ್ದಾಗ ನಾವು ಹೋಲಿಕ್ರಾಸ್ ಸಂಸ್ಥೆ ಸಂಪರ್ಕಿಸುತ್ತೇವೆ. ಮೊದಲು ಇಲ್ಲಿ ಸೇವೆ ಪಡೆದವರು ನಂತರ ಬೇರೆ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆ ಹೋಗುತ್ತಾರೆ. ಪೊಲೀಸ್ ಇಲಾಖೆಯ ಹೆಚ್ಚಿನ ಪ್ರಕರಣಗಳಿಗೆ ಇಲ್ಲಿಯೇ ಚಿಕಿತ್ಸೆ ಸಿಗುವುದನ್ನು ನಾನೇ ನೋಡಿದ್ದೇನೆ ಎಂದು ಶ್ಲಾಘಿಸಿದರ
ಕಾರ್ಯಕ್ರಮದಲ್ಲಿ ಮೈಸೂರು ಬಿಷಪ್ ಥಾಮಸ್ ವಾಜಪಿಳ್ಳೈ, ಆರೋಗ್ಯ ವಿವಿ ಸೆನೆಟ್ ಸದಸ್ಯರಾದ ಡಾ.ಬಿಂದು ಮ್ಯಾಥ್ಯು, ಕಾಂಗ್ರೆಸ್ ಮುಖಂಡ ಪುಟ್ಟರಾಜು, ಶಿನಿಜೋಸ್, ಫಾದರ್ ಶಾಂತರಾಜ್, ಪ್ರಾಂಶುಪಾಲರಾದ ಲೂಸಿ ಜಾನ್ ಮತ್ತಿತರರು ಹಾಜರಿದ್ದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…