ಚಾಮರಾಜನಗರ : ಕಾಮಗೆರೆಯ ಹೋಲಿಕ್ರಾಸ್ ಆಸ್ಪತ್ರೆಯು ಈ ಭಾಗದ ಜನರಿಗೆ ಅತ್ಯುತ್ತಮ ಸೇವೆ ನೀಡುತ್ತಿದೆ ಎಂದು ಮಾಜಿ ಶಾಸಕಿ ಪರಿಮಳಾ ನಾಗಪ್ಪ ಹೇಳಿದರು.
ಜಿಲ್ಲೆಯ ಕೊಳ್ಳೆಗಾಲ ತಾಲ್ಲೂಕಿನ ಕಾಮಗೆರೆಯಲ್ಲಿರುವ ಹೋಲಿಕ್ರಾಸ್ ನರ್ಸಿಂಗ್ ಕಾಲೇಜಿನ ರಜತಮಹೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಹಾವು ಕಚ್ಚುವ ಪ್ರಕರಣ, ಅಪಘಾತ ಸೇರಿದಂತೆ ಯಾವುದೇ ಪ್ರಕರಣ ನಡೆದರೂ ಮೊದಲು ಜನ ಹೋಲಿಕ್ರಾಸ್ ಆಸ್ಪತ್ರೆಯೆಡೆಗೆ ಬರುತ್ತಾರೆ. ಇಲ್ಲಿನ ಸಿಬ್ಬಂದಿ ಸೇವಾ ಮನೋಭಾವದಿಂದಲೇ ನೋಡುತ್ತಾರೆ. ಇದರಿಂದಲೇ ಈ ಸಂಸ್ಥೆ ಬಗ್ಗೆ ಜನರಲ್ಲೂ ಸದಾಭಿಪ್ರಾಯವಿದೆ ಎಂದು ನುಡಿದರು.
ಮಕ್ಕಳ ತಜ್ಞ ಡಾ.ಶಿವು ಮಾತನಾಡಿ, ಈ ಭಾಗದಲ್ಲಿ ನಾನು ಕೆಲಸ ಮಾಡಿದ್ದೇನೆ. ಚಿಕಿತ್ಸೆ ವಿಚಾರದಲ್ಲಿ ಹೋಲಿಕ್ರಾಸ್ ಸಂಸ್ಥೆಯ ಸಿಬ್ಬಂದಿ ಸೇವೆ ಸ್ಮರಣೀಯ. ಇಂಥ ಮನೋಭಾವದಿಂದಲೇ ಯಾವುದೇ ಸಂಸ್ಥೆ ಬೆಳೆಯಲು ಸಾಧ್ಯ ಎಂದು ಹೇಳಿದರು.
ಕೊಳ್ಳೇಗಾಲ ಪಿಎಸ್ಐ ಬಿ.ಸಿ.ಮಂಜುನಾಥ್ ಮಾತನಾಡಿ, ಗ್ರಾಮಾಂತರ ವ್ಯಾಪ್ತಿಯಲ್ಲಿ ಯಾವುದೇ ತುರ್ತು ಪ್ರಕರಣವಿದ್ದಾಗ ನಾವು ಹೋಲಿಕ್ರಾಸ್ ಸಂಸ್ಥೆ ಸಂಪರ್ಕಿಸುತ್ತೇವೆ. ಮೊದಲು ಇಲ್ಲಿ ಸೇವೆ ಪಡೆದವರು ನಂತರ ಬೇರೆ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆ ಹೋಗುತ್ತಾರೆ. ಪೊಲೀಸ್ ಇಲಾಖೆಯ ಹೆಚ್ಚಿನ ಪ್ರಕರಣಗಳಿಗೆ ಇಲ್ಲಿಯೇ ಚಿಕಿತ್ಸೆ ಸಿಗುವುದನ್ನು ನಾನೇ ನೋಡಿದ್ದೇನೆ ಎಂದು ಶ್ಲಾಘಿಸಿದರ
ಕಾರ್ಯಕ್ರಮದಲ್ಲಿ ಮೈಸೂರು ಬಿಷಪ್ ಥಾಮಸ್ ವಾಜಪಿಳ್ಳೈ, ಆರೋಗ್ಯ ವಿವಿ ಸೆನೆಟ್ ಸದಸ್ಯರಾದ ಡಾ.ಬಿಂದು ಮ್ಯಾಥ್ಯು, ಕಾಂಗ್ರೆಸ್ ಮುಖಂಡ ಪುಟ್ಟರಾಜು, ಶಿನಿಜೋಸ್, ಫಾದರ್ ಶಾಂತರಾಜ್, ಪ್ರಾಂಶುಪಾಲರಾದ ಲೂಸಿ ಜಾನ್ ಮತ್ತಿತರರು ಹಾಜರಿದ್ದರು.
ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…
ಬೆಂಗಳೂರು : ಡಿ.ಕೆ.ಶಿವಕುಮಾರ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…
ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…
ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…
ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…