ಜಿಲ್ಲೆಗಳು

ಕಾಮಗೆರೆಯ ಹೋಲಿಕ್ರಾಸ್ ಆಸ್ಪತ್ರೆಯು ಜನರಿಗೆ ಅತ್ಯುತ್ತಮ ಸೇವೆ ನೀಡುತ್ತಿದೆ : ಮಾಜಿ ಶಾಸಕಿ ಪರಿಮಳಾ ನಾಗಪ್ಪ

ಚಾಮರಾಜನಗರ : ಕಾಮಗೆರೆಯ ಹೋಲಿಕ್ರಾಸ್ ಆಸ್ಪತ್ರೆಯು ಈ ಭಾಗದ ಜನರಿಗೆ ಅತ್ಯುತ್ತಮ ಸೇವೆ ನೀಡುತ್ತಿದೆ ಎಂದು ಮಾಜಿ ಶಾಸಕಿ ಪರಿಮಳಾ ನಾಗಪ್ಪ ಹೇಳಿದರು.

ಕಾಲೇಜಿನ ರಜತಮಹೋತ್ಸವ ಕಾರ್ಯಕ್ರಮದ ಚಿತ್ರ

ಜಿಲ್ಲೆಯ ಕೊಳ್ಳೆಗಾಲ ತಾಲ್ಲೂಕಿನ ಕಾಮಗೆರೆಯಲ್ಲಿರುವ  ಹೋಲಿಕ್ರಾಸ್ ನರ್ಸಿಂಗ್ ಕಾಲೇಜಿನ ರಜತಮಹೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಹಾವು ಕಚ್ಚುವ ಪ್ರಕರಣ, ಅಪಘಾತ ಸೇರಿದಂತೆ ಯಾವುದೇ ಪ್ರಕರಣ ನಡೆದರೂ ಮೊದಲು ಜನ ಹೋಲಿಕ್ರಾಸ್ ಆಸ್ಪತ್ರೆಯೆಡೆಗೆ ಬರುತ್ತಾರೆ. ಇಲ್ಲಿನ ಸಿಬ್ಬಂದಿ ಸೇವಾ ಮನೋಭಾವದಿಂದಲೇ ನೋಡುತ್ತಾರೆ. ಇದರಿಂದಲೇ ಈ ಸಂಸ್ಥೆ ಬಗ್ಗೆ ಜನರಲ್ಲೂ ಸದಾಭಿಪ್ರಾಯವಿದೆ ಎಂದು ನುಡಿದರು.

ರಜತಮಹೋತ್ಸವ ಕಾರ್ಯಕ್ರಮದಲ್ಲಿನ ಗಣ್ಯರು

ಮಕ್ಕಳ ತಜ್ಞ ಡಾ.ಶಿವು ಮಾತನಾಡಿ, ಈ ಭಾಗದಲ್ಲಿ ನಾನು ಕೆಲಸ ಮಾಡಿದ್ದೇನೆ. ಚಿಕಿತ್ಸೆ ವಿಚಾರದಲ್ಲಿ ಹೋಲಿಕ್ರಾಸ್ ಸಂಸ್ಥೆಯ ಸಿಬ್ಬಂದಿ ಸೇವೆ ಸ್ಮರಣೀಯ. ಇಂಥ ಮನೋಭಾವದಿಂದಲೇ ಯಾವುದೇ ಸಂಸ್ಥೆ ಬೆಳೆಯಲು ಸಾಧ್ಯ ಎಂದು ಹೇಳಿದರು.

ರಜತಮಹೋತ್ಸವ ಕಾರ್ಯಕ್ರಮದಲ್ಲಿನ ಗಣ್ಯರು

ಕೊಳ್ಳೇಗಾಲ ಪಿಎಸ್‌ಐ ಬಿ.ಸಿ.ಮಂಜುನಾಥ್ ಮಾತನಾಡಿ, ಗ್ರಾಮಾಂತರ ವ್ಯಾಪ್ತಿಯಲ್ಲಿ ಯಾವುದೇ ತುರ್ತು ಪ್ರಕರಣವಿದ್ದಾಗ ನಾವು ಹೋಲಿಕ್ರಾಸ್ ಸಂಸ್ಥೆ ಸಂಪರ್ಕಿಸುತ್ತೇವೆ. ಮೊದಲು ಇಲ್ಲಿ ಸೇವೆ ಪಡೆದವರು ನಂತರ ಬೇರೆ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆ ಹೋಗುತ್ತಾರೆ. ಪೊಲೀಸ್ ಇಲಾಖೆಯ ಹೆಚ್ಚಿನ ಪ್ರಕರಣಗಳಿಗೆ ಇಲ್ಲಿಯೇ ಚಿಕಿತ್ಸೆ ಸಿಗುವುದನ್ನು ನಾನೇ ನೋಡಿದ್ದೇನೆ ಎಂದು ಶ್ಲಾಘಿಸಿದರ

ಕಾರ್ಯಕ್ರಮದಲ್ಲಿ  ಮೈಸೂರು ಬಿಷಪ್ ಥಾಮಸ್ ವಾಜಪಿಳ್ಳೈ, ಆರೋಗ್ಯ ವಿವಿ ಸೆನೆಟ್ ಸದಸ್ಯರಾದ ಡಾ.ಬಿಂದು ಮ್ಯಾಥ್ಯು, ಕಾಂಗ್ರೆಸ್ ಮುಖಂಡ ಪುಟ್ಟರಾಜು, ಶಿನಿಜೋಸ್, ಫಾದರ್ ಶಾಂತರಾಜ್, ಪ್ರಾಂಶುಪಾಲರಾದ ಲೂಸಿ ಜಾನ್ ಮತ್ತಿತರರು ಹಾಜರಿದ್ದರು.

andolanait

Recent Posts

ಕಾಕ್ರೋಚ್‌ ಪ್ರತಿಭಟನೆ ; ವಿದ್ಯಾರ್ಥಿಗಳ ರಕ್ಷಣೆಗೆ ಪೊಲೀಸ್‌ ವ್ಯಾನ್‌ ತಡೆದ ಜೇನ್‌-ಝಿ ಕಿಡ್‌

ಮುಂಬೈ : ನೀಟ್‌ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…

18 mins ago

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

13 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

13 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

13 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

13 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

13 hours ago