ಜಿಲ್ಲೆಗಳು

ಕಾರ್ತಿಕ ಮಾಸ, ಅಮಾವಾಸ್ಯೆ ಪ್ರಯುಕ್ತ ಭಕ್ತಾದಿಗಳಿಗೆ ಅನ್ನಸಂತರ್ಪಣೆ

ಹನೂರು : ಮಲೆ ಮಹದೇಶ್ವರ ಸ್ವಾಮಿ ಭಕ್ತಾದಿಗಳು ಕಾರ್ತೀಕ ಮಾಸ ಹಾಗೂ ಅಮಾವಾಸ್ಯೆ ದಿನದಂದು ನಾಗಮಲೆ ಮಹದೇಶ್ವರ ಸ್ವಾಮಿ ಸೇವಾ ಸಮಿತಿ ವತಿಯಿಂದ ಶ್ರೀ ಕ್ಷೇತ್ರ ನಾಗಮಲೆಯಲ್ಲಿ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಿದ್ದರು.

ನಾಗಮಲೆ ಶ್ರೀಕ್ಷೇತ್ರದಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ ಸಹ ಕಾರ್ತೀಕ ಮಾಸದ ಅಮಾವಾಸ್ಯೆ ಪ್ರಯುಕ್ತ ಭಕ್ತಾದಿಗಳಿಗೆ ಅನ್ನದಾಸೋಹವನ್ನು ಶ್ರೀ ನಾಗಮಲೆ ಗ್ರೂಪ್ಸ್. ಮೈಸೂರು, ಬೆಂಗಳೂರು ಮತ್ತು ನಂಜನಗೂಡು ರವರ ವತಿಯಿಂದ ನೆರವೇರಿಸಲಾಯಿತು.
ಅನ್ನದಾನಕ್ಕೆ ಅಗತ್ಯವಾದ ದವಸ ದಾನ್ಯಗಳನ್ನು ರಾತ್ರಿಯಿಂದಲೇ ಸಿದ್ದಪಡಿಸಿಕೊಂಡು ಬೆಳಿಗ್ಗೆ 6.00ಗಂಟೆಗ ನಾಗಮಲೆ ಮಹದೇಶ್ವರ ಸ್ವಾಮಿಗೆ ಪ್ರಥಮ ಪೂಜೆ ಅಭಿಷೇಕಗಳನ್ನು ಸಲ್ಲಿಸಿ, 8.00 ಗಂಟೆಯಿಂದಲೇ ಅನ್ನದಾನವನ್ನು ಪ್ರಾರಂಭಿಸಲಾಯಿತು.
ಬೆಟ್ಟ ಗುಡ್ಡಗಳನ್ನು ಹತ್ತಿ ಸುತ್ತಿ ಸುಸ್ತಾಗಿ ಬಂದಿದ್ದ ಭಕ್ತಾದಿಗಳು ಸ್ವಾಮಿಯ ಪ್ರಸಾದವನ್ನು ಸೇವಿಸಿ ಸಂತೃಪ್ತರಾದರು. ಸಂಜೆ 5.00ಗಂಟೆಯವರೆಗೂ ನಡೆದ ದಾಸೋಹದಲ್ಲಿ ಸುಮಾರು 2000ಕ್ಕೂ ಹೆಚ್ಚು ಜನ ಭಕ್ತಾದಿಗಳು ಪ್ರಸಾದವನ್ನು ಸೇವಿಸಿ,ಪುನೀತರಾದರು.  ಈ ಸಂದರ್ಭದಲ್ಲಿ ಶ್ರೀ ನಾಗಮಲೆ ಗ್ರೂಪ್ಸ್ ನ ಎಲ್ಲಾ ಸದಸ್ಯರುಗಳು ಹಾಜರಿದ್ದರು.

andolanait

Recent Posts

ಕನ್ನಡಿಗರ ರಕ್ಷಣೆಗೆ ಕ್ರಮ ಕೈಗೊಳ್ಳಿ: ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇರಾನ್‌-ಇಸ್ರೇಲ್‌ ನಡುವಿನ ಸಂಘರ್ಷ ಏರ್ಪಟ್ಟಿರುವ ಪರಿಣಾಮ ಕನ್ನಡಿಗರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ…

6 hours ago

ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲ: ಸಂಸದ ಯದುವೀರ್‌ ಒಡೆಯರ್‌

ನಾಪೋಕ್ಲು: ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ವಾಗ್ದಾಳಿ…

7 hours ago

ಹನೂರು: ಶಾಲೆಗೆ ನೂತನ ಕಟ್ಟಡ ನಿರ್ಮಿಸುವಂತೆ ಆಗ್ರಹ: ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಶಿಕ್ಷಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಳಸಿಕೆರೆ ಗ್ರಾಮದ…

7 hours ago

ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ: ವಿಪಕ್ಷ ನಾಯಕ ಆರ್.‌ಅಶೋಕ್‌

ಬೆಂಗಳೂರು: ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು…

7 hours ago

ನಾಳೆ ರಕ್ತ ಚಂದ್ರಗ್ರಹಣ: ಕೊಡಗಿನ ವಿವಿಧ ದೇವಾಲಯಗಳಲ್ಲಿ ಪೂಜಾ ಸಮಯ ಬದಲು

ಕೊಡಗು: ನಾಳೆ ವರ್ಷದ ಮೊದಲ ಚಂದ್ರಗ್ರಹಣ ಹೋಳಿ ಹುಣ್ಣಿಮೆಯ ದಿನದಂದು ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ಪೂಜಾ…

7 hours ago

ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ.!

ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನು ಸ್ಥಳೀಯರ ಆಶಯಗಳಿಗೆ ವಿರುದ್ಧವಾಗಿ ಮದ್ದೂರು…

7 hours ago