ಜಿಲ್ಲೆಗಳು

ಕಾರ್ತಿಕ ಮಾಸ, ಅಮಾವಾಸ್ಯೆ ಪ್ರಯುಕ್ತ ಭಕ್ತಾದಿಗಳಿಗೆ ಅನ್ನಸಂತರ್ಪಣೆ

ಹನೂರು : ಮಲೆ ಮಹದೇಶ್ವರ ಸ್ವಾಮಿ ಭಕ್ತಾದಿಗಳು ಕಾರ್ತೀಕ ಮಾಸ ಹಾಗೂ ಅಮಾವಾಸ್ಯೆ ದಿನದಂದು ನಾಗಮಲೆ ಮಹದೇಶ್ವರ ಸ್ವಾಮಿ ಸೇವಾ ಸಮಿತಿ ವತಿಯಿಂದ ಶ್ರೀ ಕ್ಷೇತ್ರ ನಾಗಮಲೆಯಲ್ಲಿ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಿದ್ದರು.

ನಾಗಮಲೆ ಶ್ರೀಕ್ಷೇತ್ರದಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ ಸಹ ಕಾರ್ತೀಕ ಮಾಸದ ಅಮಾವಾಸ್ಯೆ ಪ್ರಯುಕ್ತ ಭಕ್ತಾದಿಗಳಿಗೆ ಅನ್ನದಾಸೋಹವನ್ನು ಶ್ರೀ ನಾಗಮಲೆ ಗ್ರೂಪ್ಸ್. ಮೈಸೂರು, ಬೆಂಗಳೂರು ಮತ್ತು ನಂಜನಗೂಡು ರವರ ವತಿಯಿಂದ ನೆರವೇರಿಸಲಾಯಿತು.
ಅನ್ನದಾನಕ್ಕೆ ಅಗತ್ಯವಾದ ದವಸ ದಾನ್ಯಗಳನ್ನು ರಾತ್ರಿಯಿಂದಲೇ ಸಿದ್ದಪಡಿಸಿಕೊಂಡು ಬೆಳಿಗ್ಗೆ 6.00ಗಂಟೆಗ ನಾಗಮಲೆ ಮಹದೇಶ್ವರ ಸ್ವಾಮಿಗೆ ಪ್ರಥಮ ಪೂಜೆ ಅಭಿಷೇಕಗಳನ್ನು ಸಲ್ಲಿಸಿ, 8.00 ಗಂಟೆಯಿಂದಲೇ ಅನ್ನದಾನವನ್ನು ಪ್ರಾರಂಭಿಸಲಾಯಿತು.
ಬೆಟ್ಟ ಗುಡ್ಡಗಳನ್ನು ಹತ್ತಿ ಸುತ್ತಿ ಸುಸ್ತಾಗಿ ಬಂದಿದ್ದ ಭಕ್ತಾದಿಗಳು ಸ್ವಾಮಿಯ ಪ್ರಸಾದವನ್ನು ಸೇವಿಸಿ ಸಂತೃಪ್ತರಾದರು. ಸಂಜೆ 5.00ಗಂಟೆಯವರೆಗೂ ನಡೆದ ದಾಸೋಹದಲ್ಲಿ ಸುಮಾರು 2000ಕ್ಕೂ ಹೆಚ್ಚು ಜನ ಭಕ್ತಾದಿಗಳು ಪ್ರಸಾದವನ್ನು ಸೇವಿಸಿ,ಪುನೀತರಾದರು.  ಈ ಸಂದರ್ಭದಲ್ಲಿ ಶ್ರೀ ನಾಗಮಲೆ ಗ್ರೂಪ್ಸ್ ನ ಎಲ್ಲಾ ಸದಸ್ಯರುಗಳು ಹಾಜರಿದ್ದರು.

andolanait

Recent Posts

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

3 mins ago

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

24 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

24 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

24 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

24 hours ago