ಜಿಲ್ಲೆಗಳು

ಕಾವೇರಿ ನೀರಾವರಿ ನಿಗಮ ಇಲಾಖೆಯಿಂದ ಕಳಪೆ ಕಾಮಗಾರಿ

ಯಳಂದೂರು : ತಾಲ್ಲೂಕಿನ ಗಣಿಗನೂರು ಗ್ರಾಮದಲ್ಲಿ ಕೇವಲ ೧೫ ದಿನಗಳಿಂದಷ್ಟೆ ಸುರಿದಿದ್ದ ಬಾರಿ ಮಳಗೆ ತಾಲ್ಲೂಕಿನ ಹಲವು ಗ್ರಾಮಗಳು ಜಲಾವೃತವಾಗಿತ್ತು ಅದರಂತೆ ಗಣಿಗನೂರು ಗ್ರಾಮದಲ್ಲಿ ಸುವರ್ಣಾವತಿ ನದಿ ತಟದ ಮೇಲೆ ಇರುವ ಪರಿಣಾಮ ಗ್ರಾಮಕ್ಕೆ ನೀರು ನುಗ್ಗಿತ್ತು ಪರಿಣಾಮ ತಾಲ್ಲೂಕು ಆಡಳಿತ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ವರದಿ ತಯಾರಿಸಿ ಪರಹಾರವನ್ನು ವಿತರಣೆ ಮಾಡಲಾಗಿತ್ತು.

ಈ ಸಂದರ್ಭದಲ್ಲಿ ರಾಜ್ಯ ಕಂದಾಯ ಇಲಾಖೆ ಸಚಿವರಾದ ಆರ್. ಅಶೋಕ್ ಅವರು ಸ್ಥಳ ಪರಿಶೀಲಿಸಿ ಪರಹಾರ ಚೆಕ್ ವಿತರಣೆ ಮಾಡಿದ್ದರು ಹಾಗೂ ನದಿಯ ನೀರು ಗ್ರಾಮಕ್ಕೆ ನುಗ್ಗದಂತೆ ಶಾಸ್ವತ ಪರಿಹಾರಕ್ಕಾಗಿ ಕಾಲುವೆ ನಿರ್ಮಾಣಕ್ಕಾಗಿ 50 ಲಕ್ಷ ವೆಚ್ಚದಲ್ಲಿ ಕಾಲುವೆ ನಿರ್ಮಾಣ ಮಾಡಿ ಶಾಸ್ವತ ಪರಿಹಾರ ಒದಗಿಸುವ ಕ್ರಮಕ್ಕಾಗಿ ಶೀಘ್ರವಾಗಿ ಕಾಮಗಾರಿಗೆ ಅನುಮೋದಿಸಲಾಗಿತ್ತು ಆದರೆ ಕಾಮಗಾರಿ ನಡೆಸುವ ಭರದಲ್ಲಿ ಟೆಂಡರ್ ಗುತ್ತಿಗೆದಾರ ಮತ್ತು ನೀರಾವರಿ ಇಲಾಖೆಯ ಇಂಜಿನಿಯರ್ ರವರ ನಿರ್ಲಕ್ಷ್ಯ ಮತ್ತು ಲಾಭಂಶ ಪಡೆಯುವ ಉದ್ದೇಶದಿಂದ ಅತ್ಯಂತ ಕಳಪೆಗಾರಿಯನ್ನು ನಡೆಸಿ ಹೋಗಿದ್ದರು ಆದರೆ ಕೆಲಸ ಮುಗಿಸಿ ಹೋದ 15 ದಿನದಲ್ಲೆ ಕೆಲಸ ನಡೆಸಿದ ಸ್ಥಳದ ನಿಜ ಬಣ್ಣ ಬಯಲಾಗಿ ಗ್ರಾಮಸ್ಥರ ಕೆಂಗಣ್ಣಿಗೆ ಗುರಿಯಾಗಿ ಕಳಪೆ ಗುಣಮಟ್ಟ ಕಾಮಗಾರಿ ನಡೆಸಿರುವವರ ವಿರುದ್ಧದ ಸೂಕ್ತ ಕ್ರಮವನ್ನು ಕೈಗೊಂಡು ಕಾಲುವೆ ಕೆಲಸವನ್ನು ರಿ ಟೆಂಡರ್ ಮಾಡಿ ಅಚ್ಚುಕಟ್ಟಾಗಿ ಕೆಲಸ ಮಾಡಿಕೊಡಬೇಕೆಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ
ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಚಿರು, ಓಮಿನಿ ಕುಮಾರ್, ಪ್ರಭುಸ್ವಾಮಿ ರಂಗಸ್ವಾಮಿ, ಚಂದ್ರು, ರಮೇಶ್ ನಾಯಕ, ಸೇರಿದಂತೆ ಗ್ರಾಮದ ಯಾಜಮಾನರುಗಳು ಹಾಜರಿದ್ದು.

andolanait

Recent Posts

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ: ಮಹದೇಶ್ವರನಿಗೆ ಎಣ್ಣೆಮಜ್ಜನ ಸೇವೆ, ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…

2 hours ago

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಂಜುಂಡೇಶ್ವರ ಸನ್ನಿಧಿಗೆ ಹರಿದು ಬಂದ ಭಕ್ತಸಾಗರ

ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…

4 hours ago

ಸುಂಟಿಕೊಪ್ಪ: ನೂತನ ಪೊಲೀಸ್‌ ವಸತಿ ಗೃಹ ಉದ್ಘಾಟಿಸಿದ ಸಚಿವ ಪರಮೇಶ್ವರ್‌

ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ‌ ವೆಚ್ಚದಲ್ಲಿ…

4 hours ago

ನಂಜುಂಡೇಶ್ವರನ ದೇವಸ್ಥಾನದಲ್ಲಿ ಇನ್ಮುಂದೆ ದಿನ 24 ಗಂಟೆಯೂ ಪ್ರಸಾದ ವಿತರಣೆ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…

4 hours ago

ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತ ದೇಹ ಪತ್ತೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…

4 hours ago

ಫೆ.17ರಂದು ಬಾಂಗ್ಲಾ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್‌ ಪ್ರಮಾಣವಚನ ಸ್ವೀಕಾರ: ಪ್ರಧಾನಿ ಮೋದಿಗೆ ಆಹ್ವಾನ

ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್‌ ರೆಹಮಾನ್‌ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ…

6 hours ago