ಜಿಲ್ಲೆಗಳು

ಕಾವೇರಿ ನೀರಾವರಿ ನಿಗಮ ಇಲಾಖೆಯಿಂದ ಕಳಪೆ ಕಾಮಗಾರಿ

ಯಳಂದೂರು : ತಾಲ್ಲೂಕಿನ ಗಣಿಗನೂರು ಗ್ರಾಮದಲ್ಲಿ ಕೇವಲ ೧೫ ದಿನಗಳಿಂದಷ್ಟೆ ಸುರಿದಿದ್ದ ಬಾರಿ ಮಳಗೆ ತಾಲ್ಲೂಕಿನ ಹಲವು ಗ್ರಾಮಗಳು ಜಲಾವೃತವಾಗಿತ್ತು ಅದರಂತೆ ಗಣಿಗನೂರು ಗ್ರಾಮದಲ್ಲಿ ಸುವರ್ಣಾವತಿ ನದಿ ತಟದ ಮೇಲೆ ಇರುವ ಪರಿಣಾಮ ಗ್ರಾಮಕ್ಕೆ ನೀರು ನುಗ್ಗಿತ್ತು ಪರಿಣಾಮ ತಾಲ್ಲೂಕು ಆಡಳಿತ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ವರದಿ ತಯಾರಿಸಿ ಪರಹಾರವನ್ನು ವಿತರಣೆ ಮಾಡಲಾಗಿತ್ತು.

ಈ ಸಂದರ್ಭದಲ್ಲಿ ರಾಜ್ಯ ಕಂದಾಯ ಇಲಾಖೆ ಸಚಿವರಾದ ಆರ್. ಅಶೋಕ್ ಅವರು ಸ್ಥಳ ಪರಿಶೀಲಿಸಿ ಪರಹಾರ ಚೆಕ್ ವಿತರಣೆ ಮಾಡಿದ್ದರು ಹಾಗೂ ನದಿಯ ನೀರು ಗ್ರಾಮಕ್ಕೆ ನುಗ್ಗದಂತೆ ಶಾಸ್ವತ ಪರಿಹಾರಕ್ಕಾಗಿ ಕಾಲುವೆ ನಿರ್ಮಾಣಕ್ಕಾಗಿ 50 ಲಕ್ಷ ವೆಚ್ಚದಲ್ಲಿ ಕಾಲುವೆ ನಿರ್ಮಾಣ ಮಾಡಿ ಶಾಸ್ವತ ಪರಿಹಾರ ಒದಗಿಸುವ ಕ್ರಮಕ್ಕಾಗಿ ಶೀಘ್ರವಾಗಿ ಕಾಮಗಾರಿಗೆ ಅನುಮೋದಿಸಲಾಗಿತ್ತು ಆದರೆ ಕಾಮಗಾರಿ ನಡೆಸುವ ಭರದಲ್ಲಿ ಟೆಂಡರ್ ಗುತ್ತಿಗೆದಾರ ಮತ್ತು ನೀರಾವರಿ ಇಲಾಖೆಯ ಇಂಜಿನಿಯರ್ ರವರ ನಿರ್ಲಕ್ಷ್ಯ ಮತ್ತು ಲಾಭಂಶ ಪಡೆಯುವ ಉದ್ದೇಶದಿಂದ ಅತ್ಯಂತ ಕಳಪೆಗಾರಿಯನ್ನು ನಡೆಸಿ ಹೋಗಿದ್ದರು ಆದರೆ ಕೆಲಸ ಮುಗಿಸಿ ಹೋದ 15 ದಿನದಲ್ಲೆ ಕೆಲಸ ನಡೆಸಿದ ಸ್ಥಳದ ನಿಜ ಬಣ್ಣ ಬಯಲಾಗಿ ಗ್ರಾಮಸ್ಥರ ಕೆಂಗಣ್ಣಿಗೆ ಗುರಿಯಾಗಿ ಕಳಪೆ ಗುಣಮಟ್ಟ ಕಾಮಗಾರಿ ನಡೆಸಿರುವವರ ವಿರುದ್ಧದ ಸೂಕ್ತ ಕ್ರಮವನ್ನು ಕೈಗೊಂಡು ಕಾಲುವೆ ಕೆಲಸವನ್ನು ರಿ ಟೆಂಡರ್ ಮಾಡಿ ಅಚ್ಚುಕಟ್ಟಾಗಿ ಕೆಲಸ ಮಾಡಿಕೊಡಬೇಕೆಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ
ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಚಿರು, ಓಮಿನಿ ಕುಮಾರ್, ಪ್ರಭುಸ್ವಾಮಿ ರಂಗಸ್ವಾಮಿ, ಚಂದ್ರು, ರಮೇಶ್ ನಾಯಕ, ಸೇರಿದಂತೆ ಗ್ರಾಮದ ಯಾಜಮಾನರುಗಳು ಹಾಜರಿದ್ದು.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

8 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

12 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

12 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

12 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

12 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

13 hours ago