ಮೈಸೂರು: ಹುಣಸೂರಿನ ಚಿಕ್ಕ ಬೀಚನಹಳ್ಳಿಯಲ್ಲಿ ಮಹಿಳೆಯನ್ನು ಬಲಿ ಪಡೆದು, ಇಬ್ಬರನ್ನು ಗಾಯಗೊಳಿಸಿದ ವಕ್ರದಂತ ಆನೆಯನ್ನು ಅರಣ್ಯ ಇಲಾಖೆ ಸೆರೆ ಹಿಡಿದು ಹೆಚ್ಚಿನ ಅಪಾಯ ತಪ್ಪಿಸಿದೆ. ಈ ಪುಂಡಾನೆಯನ್ನು ಅರಣ್ಯ ಸಿಬ್ಬಂದಿ ಸಾಕಾನೆಗಳ ಸಹಾಯದಿಂದ ಸೆರೆ ಹಿಡಿದು ದುಬಾರೆ ಆನೆ ಕ್ಯಾಂಪಿನ ಕ್ರಾಲ್ನಲ್ಲಿ ಬಂಧಿಯಾಗಿಸಿ, ಗ್ರಾಮಸ್ಥರ ಆತಂಕವನ್ನು ದೂರ ಮಾಡಿದ್ದಾರೆ.
ಬಿಳಿಕೆರೆ ಬಳಿಯ ಅರಬಿತಿಟ್ಟು ಅರಣ್ಯ ಪ್ರದೇಶದಲ್ಲಿ ಬೀಡು ಬಿಟ್ಟಿರುವ ಎರಡು ಸಲಗಗಳ ಸೆರೆ ಹಿಡಿಯಲು ಅಭಿಮನ್ಯು, ಭೀಮಾ, ಮಹೇಂದ್ರ, ಗಣೇಶ ಮತ್ತು ಪ್ರಶಾಂತ ಸಾಕಾನೆಗಳೊಂದಿಗೆ ಮುಂಜಾನೆಯೇ ಆಗಮಿಸಿದ್ದ ಪ್ರಾದೇಶಿಕ ಅರಣ್ಯ ವಿಭಾಗದ ಡಿಸಿಎಫ್ ಹಾಗೂ ಎಲಿಫೆಂಟ್ ಟಾಸ್ಕ್ಪೋರ್ಸ್ನ ಮುಖ್ಯಸ್ಥೆ ಸೀಮಾ ನೇತೃತ್ವದ ತಂಡ. ತಕ್ಷಣವೇ ಸಾಕಾನೆಗಳೊಂದಿಗೆ ಸ್ಥಳಕ್ಕಾಗಮಿಸಿ ಪುಂಡಾನೆಯನ್ನು ಸೆರೆ ಹಿಡಿಯಲು ಮುಂದಾದರು.
ಈ ವೇಳೆ, ಅಕ್ಕ-ಪಕ್ಕದ ಗ್ರಾಮದ ಸಾವಿರಾರು ಮಂದಿ ಸ್ಥಳದಲ್ಲಿ ನೆರೆದು, ಸಲಗವನ್ನು ಅಟ್ಟಾಡಿಸುತ್ತಿದ್ದರು. ಗ್ರಾಮಸ್ಥರನ್ನು ಸಮಾಧಾನ ಪಡಿಸಿ ಆನೆ ಸೆರೆ ಹಿಡಿಯಲು ಕಾರ್ಯಚರಣೆ ಆರಂಭಿಸಿದರು.ಓಡಾಡಿಸಿದ ಪುಂಡಾನೆ : ಸಾಕಾನೆಗಳನ್ನು ಕಂಡ ಸಲಗ ಚಿಕ್ಕಬೀಚನಹಳ್ಳಿ, ದೊಡ್ಡಬೀಚನಹಳ್ಳಿ, ಹಳ್ಳದಮನುಗನಹಳ್ಳಿಯ ಜಮೀನುಗಳಲ್ಲಿ ಅಡ್ಡಾಡುತ್ತಾ ಆಟವಾಡಿಸಿತು. ಇತ್ತ ಜನರಂತೂ ಕೇಕೆ ಹಾಕುತ್ತಾ, ಮುನ್ನುಗ್ಗುತ್ತಿದ್ದರಿಂದ ಕಾರ್ಯಾಚರಣೆಗೆ ಅಡಚಣೆಯಾಗುತ್ತಿತ್ತು. ಅರಣ್ಯ ಸಿಬ್ಬಂದಿ ಅತ್ತಿಂದಿತ್ತ ಜನರ ನಡುವೆಯೇ ಓಡಾಡುತ್ತಲೇ ಅರವಳಿಕೆ ಚುಚ್ಚುಮದ್ದು ನೀಡುವ ಪ್ರಥಮ ಪ್ರಯತ್ನ ವಿಫಲವಾಯಿತಾದರೂ ಮಧ್ಯಾಹ್ನ ೨.೩೦ರ ವೇಳೆಗೆ ಎಚ್.ಡಿ.ಕೋಟೆ ತಾಲೂಕಿನ ಹಳ್ಳದ ಮನುಗನಹಳ್ಳಿಯ ವಾಸುರವರ ತೋಟದಲ್ಲಿ ಅರವಳಿಕೆ ಚುಚ್ಚುಮದ್ದಿನಿಂದ ಪ್ರಜ್ಞೆ ತಪ್ಪಿ ನೆಲಕ್ಕುರುಳಿತು.
ಬೆಂಗಳೂರು: ಹೊಸ ವರ್ಷದ ಆಚರಣೆಗೆ ಜನ ಪ್ರವಾಸಿ ತಾಣಗಳತ್ತ ಮುಖ ಮಾಡಿದ್ದಾರೆ. ಕರ್ನಾಟಕದ ಪ್ರವಾಸಿ ತಾಣಗಳು ಜನ ಜಂಗುಳಿಯಿಂದ ತುಂಬಿ…
ಮೈಸೂರು: ಅರಮನೆ ಬಳಿ ಹೀಲಿಯಂ ಸಿಲಿಂಡರ್ ಸ್ಫೋಟ ಸಂಭವಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯೆ ನೀಡಿದ್ದು,…
ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ. ನ್ಯಾಯಾಲಯದ ಆದೇಶವನ್ನು ಮೀರಿ…
ಹನೂರು: ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಬರುತ್ತಿದ್ದು, ಇಂದು…
ಚಾಮರಾಜನಗರ: ತಾಲ್ಲೂಕಿನ ಅಮಚವಾಡಿ ಗ್ರಾಮದಲ್ಲಿ ಸಿಡಿಮದ್ದು ಸಿಡಿದು ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಸಿಡಿಮದ್ದು ಸಿಡಿದು ಪೆದ್ದಿ ಅಲಿಯಾಸ್…
ಎಚ್.ಡಿ.ಕೋಟೆ -ಗದ್ದಿಗೆ ಮುಖ್ಯ ರಸ್ತೆಯಲ್ಲಿರುವ ಪೈಲ್ವಾನ್ ಕಾಲೋನಿ ಗ್ರಾಮದಲ್ಲಿರುವ ನೀರು ಕಾಲುವೆಗೆ ತಡೆಗೋಡೆ ಇಲ್ಲಿದೇ ತೀವ್ರ ತೊಂದರೆಯಾಗಿದೆ. ಎಚ್.ಡಿ.ಕೋಟೆ ಮತ್ತು…