ಮೈಸೂರು: ಹುಣಸೂರಿನ ಚಿಕ್ಕ ಬೀಚನಹಳ್ಳಿಯಲ್ಲಿ ಮಹಿಳೆಯನ್ನು ಬಲಿ ಪಡೆದು, ಇಬ್ಬರನ್ನು ಗಾಯಗೊಳಿಸಿದ ವಕ್ರದಂತ ಆನೆಯನ್ನು ಅರಣ್ಯ ಇಲಾಖೆ ಸೆರೆ ಹಿಡಿದು ಹೆಚ್ಚಿನ ಅಪಾಯ ತಪ್ಪಿಸಿದೆ. ಈ ಪುಂಡಾನೆಯನ್ನು ಅರಣ್ಯ ಸಿಬ್ಬಂದಿ ಸಾಕಾನೆಗಳ ಸಹಾಯದಿಂದ ಸೆರೆ ಹಿಡಿದು ದುಬಾರೆ ಆನೆ ಕ್ಯಾಂಪಿನ ಕ್ರಾಲ್ನಲ್ಲಿ ಬಂಧಿಯಾಗಿಸಿ, ಗ್ರಾಮಸ್ಥರ ಆತಂಕವನ್ನು ದೂರ ಮಾಡಿದ್ದಾರೆ.
ಬಿಳಿಕೆರೆ ಬಳಿಯ ಅರಬಿತಿಟ್ಟು ಅರಣ್ಯ ಪ್ರದೇಶದಲ್ಲಿ ಬೀಡು ಬಿಟ್ಟಿರುವ ಎರಡು ಸಲಗಗಳ ಸೆರೆ ಹಿಡಿಯಲು ಅಭಿಮನ್ಯು, ಭೀಮಾ, ಮಹೇಂದ್ರ, ಗಣೇಶ ಮತ್ತು ಪ್ರಶಾಂತ ಸಾಕಾನೆಗಳೊಂದಿಗೆ ಮುಂಜಾನೆಯೇ ಆಗಮಿಸಿದ್ದ ಪ್ರಾದೇಶಿಕ ಅರಣ್ಯ ವಿಭಾಗದ ಡಿಸಿಎಫ್ ಹಾಗೂ ಎಲಿಫೆಂಟ್ ಟಾಸ್ಕ್ಪೋರ್ಸ್ನ ಮುಖ್ಯಸ್ಥೆ ಸೀಮಾ ನೇತೃತ್ವದ ತಂಡ. ತಕ್ಷಣವೇ ಸಾಕಾನೆಗಳೊಂದಿಗೆ ಸ್ಥಳಕ್ಕಾಗಮಿಸಿ ಪುಂಡಾನೆಯನ್ನು ಸೆರೆ ಹಿಡಿಯಲು ಮುಂದಾದರು.
ಈ ವೇಳೆ, ಅಕ್ಕ-ಪಕ್ಕದ ಗ್ರಾಮದ ಸಾವಿರಾರು ಮಂದಿ ಸ್ಥಳದಲ್ಲಿ ನೆರೆದು, ಸಲಗವನ್ನು ಅಟ್ಟಾಡಿಸುತ್ತಿದ್ದರು. ಗ್ರಾಮಸ್ಥರನ್ನು ಸಮಾಧಾನ ಪಡಿಸಿ ಆನೆ ಸೆರೆ ಹಿಡಿಯಲು ಕಾರ್ಯಚರಣೆ ಆರಂಭಿಸಿದರು.ಓಡಾಡಿಸಿದ ಪುಂಡಾನೆ : ಸಾಕಾನೆಗಳನ್ನು ಕಂಡ ಸಲಗ ಚಿಕ್ಕಬೀಚನಹಳ್ಳಿ, ದೊಡ್ಡಬೀಚನಹಳ್ಳಿ, ಹಳ್ಳದಮನುಗನಹಳ್ಳಿಯ ಜಮೀನುಗಳಲ್ಲಿ ಅಡ್ಡಾಡುತ್ತಾ ಆಟವಾಡಿಸಿತು. ಇತ್ತ ಜನರಂತೂ ಕೇಕೆ ಹಾಕುತ್ತಾ, ಮುನ್ನುಗ್ಗುತ್ತಿದ್ದರಿಂದ ಕಾರ್ಯಾಚರಣೆಗೆ ಅಡಚಣೆಯಾಗುತ್ತಿತ್ತು. ಅರಣ್ಯ ಸಿಬ್ಬಂದಿ ಅತ್ತಿಂದಿತ್ತ ಜನರ ನಡುವೆಯೇ ಓಡಾಡುತ್ತಲೇ ಅರವಳಿಕೆ ಚುಚ್ಚುಮದ್ದು ನೀಡುವ ಪ್ರಥಮ ಪ್ರಯತ್ನ ವಿಫಲವಾಯಿತಾದರೂ ಮಧ್ಯಾಹ್ನ ೨.೩೦ರ ವೇಳೆಗೆ ಎಚ್.ಡಿ.ಕೋಟೆ ತಾಲೂಕಿನ ಹಳ್ಳದ ಮನುಗನಹಳ್ಳಿಯ ವಾಸುರವರ ತೋಟದಲ್ಲಿ ಅರವಳಿಕೆ ಚುಚ್ಚುಮದ್ದಿನಿಂದ ಪ್ರಜ್ಞೆ ತಪ್ಪಿ ನೆಲಕ್ಕುರುಳಿತು.
ಇದು ಮಾಹಿತಿ ತಂತ್ರಜ್ಞಾನದ ಕ್ರಾಂತಿಯ ಯುಗ. ಅರವತ್ತರ ದಶಕದಲ್ಲಿ ಕೃಷಿ ಕ್ಷೇತ್ರದಲ್ಲಿ ಜಾರಿಗೆ ತಂದ ಜಪಾನ್ ಮಾದರಿಯ ನಾಟಿ, ಕಳೆಕೀಳುವ…
ನವೀನ್ ಡಿಸೋಜ ಮಡಿಕೇರಿ: ಫೆ.೨೮ರಿಂದ ಮಾ.೧೭ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯ ೧೮ ಪರೀಕ್ಷಾ ಕೇಂದ್ರಗಳಲ್ಲಿ ೫,೨೫೫ ವಿದ್ಯಾರ್ಥಿಗಳು…
ಎಸ್.ನಾಗಸುಂದರ್ ೫೦ ಸಾವಿರ ರೂ.ಗಳಿಂದ ೧೫ ಲಕ್ಷ ರೂ.ವರೆಗೆ ಬೆಲೆಬಾಳುವ ರಾಸುಗಳ ಪ್ರದರ್ಶನ ಪಾಂಡವಪುರ: ತಾಲ್ಲೂಕಿನ ಬೇಬಿಬೆಟ್ಟದಲ್ಲಿ ನಡೆಯುತ್ತಿರುವ ಭಾರೀ…
ಭಾರತಿ ಬಿ.ವಿ. ಕದ್ದುಮುಚ್ಚಿ ನಮ್ಮ ಮನೆಯ ಗರಾಜಿಗೆ ಅಂಟಿದಂತಿದ್ದ ಕೋಣೆಯಲ್ಲಿ ಮರಿ ಹಾಕಿ ಬೀಡುಬಿಟ್ಟ ಮೊದಲಲ್ಲಿ ನಮಗೆ ಹೆದರುತ್ತಿದ್ದ ಬೆಕ್ಕು…
ಅಜಯ್ ಕುಮಾರ್ ಎಂ.ಗುಂಬಳ್ಳಿ ಮಾರಿಹಬ್ಬವೆಂದರೆ ಎಲ್ಲಾ ಕೋಮಿನ ಜನ ಸೇರಿ ನಡೆಸುತ್ತಾರೆ. ಅವರವರೇ ದೇವರ ಕೈಂಕರ್ಯಗಳನ್ನು ವಿಭಾಗಿಸಿಕೊಂಡು ಹಬ್ಬ ಮಾಡುತ್ತಾರೆ…
ಅಕ್ಷತಾ ಏಕಲವ್ಯ ದ್ರೋಣರನ್ನು ಗುರುಗಳೆಂದು ಒಪ್ಪಿ, ಮರೆಯಲ್ಲೇ ನಿಂತು ಬಿಲ್ವಿದ್ಯೆ ಪ್ರವೀಣನಾದರೂ ದ್ರೋಣರು ಒಪ್ಪಿಕೊಂಡದ್ದು ಅರ್ಜುನನ ಮೇಲಿನ ಶಿಷ್ಯ ಪ್ರೀತಿಯನ್ನು!…