ಮೈಸೂರು: ಹುಣಸೂರಿನ ಚಿಕ್ಕ ಬೀಚನಹಳ್ಳಿಯಲ್ಲಿ ಮಹಿಳೆಯನ್ನು ಬಲಿ ಪಡೆದು, ಇಬ್ಬರನ್ನು ಗಾಯಗೊಳಿಸಿದ ವಕ್ರದಂತ ಆನೆಯನ್ನು ಅರಣ್ಯ ಇಲಾಖೆ ಸೆರೆ ಹಿಡಿದು ಹೆಚ್ಚಿನ ಅಪಾಯ ತಪ್ಪಿಸಿದೆ. ಈ ಪುಂಡಾನೆಯನ್ನು ಅರಣ್ಯ ಸಿಬ್ಬಂದಿ ಸಾಕಾನೆಗಳ ಸಹಾಯದಿಂದ ಸೆರೆ ಹಿಡಿದು ದುಬಾರೆ ಆನೆ ಕ್ಯಾಂಪಿನ ಕ್ರಾಲ್ನಲ್ಲಿ ಬಂಧಿಯಾಗಿಸಿ, ಗ್ರಾಮಸ್ಥರ ಆತಂಕವನ್ನು ದೂರ ಮಾಡಿದ್ದಾರೆ.
ಬಿಳಿಕೆರೆ ಬಳಿಯ ಅರಬಿತಿಟ್ಟು ಅರಣ್ಯ ಪ್ರದೇಶದಲ್ಲಿ ಬೀಡು ಬಿಟ್ಟಿರುವ ಎರಡು ಸಲಗಗಳ ಸೆರೆ ಹಿಡಿಯಲು ಅಭಿಮನ್ಯು, ಭೀಮಾ, ಮಹೇಂದ್ರ, ಗಣೇಶ ಮತ್ತು ಪ್ರಶಾಂತ ಸಾಕಾನೆಗಳೊಂದಿಗೆ ಮುಂಜಾನೆಯೇ ಆಗಮಿಸಿದ್ದ ಪ್ರಾದೇಶಿಕ ಅರಣ್ಯ ವಿಭಾಗದ ಡಿಸಿಎಫ್ ಹಾಗೂ ಎಲಿಫೆಂಟ್ ಟಾಸ್ಕ್ಪೋರ್ಸ್ನ ಮುಖ್ಯಸ್ಥೆ ಸೀಮಾ ನೇತೃತ್ವದ ತಂಡ. ತಕ್ಷಣವೇ ಸಾಕಾನೆಗಳೊಂದಿಗೆ ಸ್ಥಳಕ್ಕಾಗಮಿಸಿ ಪುಂಡಾನೆಯನ್ನು ಸೆರೆ ಹಿಡಿಯಲು ಮುಂದಾದರು.
ಈ ವೇಳೆ, ಅಕ್ಕ-ಪಕ್ಕದ ಗ್ರಾಮದ ಸಾವಿರಾರು ಮಂದಿ ಸ್ಥಳದಲ್ಲಿ ನೆರೆದು, ಸಲಗವನ್ನು ಅಟ್ಟಾಡಿಸುತ್ತಿದ್ದರು. ಗ್ರಾಮಸ್ಥರನ್ನು ಸಮಾಧಾನ ಪಡಿಸಿ ಆನೆ ಸೆರೆ ಹಿಡಿಯಲು ಕಾರ್ಯಚರಣೆ ಆರಂಭಿಸಿದರು.ಓಡಾಡಿಸಿದ ಪುಂಡಾನೆ : ಸಾಕಾನೆಗಳನ್ನು ಕಂಡ ಸಲಗ ಚಿಕ್ಕಬೀಚನಹಳ್ಳಿ, ದೊಡ್ಡಬೀಚನಹಳ್ಳಿ, ಹಳ್ಳದಮನುಗನಹಳ್ಳಿಯ ಜಮೀನುಗಳಲ್ಲಿ ಅಡ್ಡಾಡುತ್ತಾ ಆಟವಾಡಿಸಿತು. ಇತ್ತ ಜನರಂತೂ ಕೇಕೆ ಹಾಕುತ್ತಾ, ಮುನ್ನುಗ್ಗುತ್ತಿದ್ದರಿಂದ ಕಾರ್ಯಾಚರಣೆಗೆ ಅಡಚಣೆಯಾಗುತ್ತಿತ್ತು. ಅರಣ್ಯ ಸಿಬ್ಬಂದಿ ಅತ್ತಿಂದಿತ್ತ ಜನರ ನಡುವೆಯೇ ಓಡಾಡುತ್ತಲೇ ಅರವಳಿಕೆ ಚುಚ್ಚುಮದ್ದು ನೀಡುವ ಪ್ರಥಮ ಪ್ರಯತ್ನ ವಿಫಲವಾಯಿತಾದರೂ ಮಧ್ಯಾಹ್ನ ೨.೩೦ರ ವೇಳೆಗೆ ಎಚ್.ಡಿ.ಕೋಟೆ ತಾಲೂಕಿನ ಹಳ್ಳದ ಮನುಗನಹಳ್ಳಿಯ ವಾಸುರವರ ತೋಟದಲ್ಲಿ ಅರವಳಿಕೆ ಚುಚ್ಚುಮದ್ದಿನಿಂದ ಪ್ರಜ್ಞೆ ತಪ್ಪಿ ನೆಲಕ್ಕುರುಳಿತು.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…