ಜಿಲ್ಲೆಗಳು

ಹುಣಸೂರಿನಲ್ಲಿ ಮಹಿಳೆ ಬಲಿ ಪಡೆದಿದ್ದ ಕಾಡಾನೆ ಕೊನೆಗೂ ಸೆರೆ

ಮೈಸೂರು: ಹುಣಸೂರಿನ ಚಿಕ್ಕ ಬೀಚನಹಳ್ಳಿಯಲ್ಲಿ ಮಹಿಳೆಯನ್ನು ಬಲಿ ಪಡೆದು, ಇಬ್ಬರನ್ನು ಗಾಯಗೊಳಿಸಿದ ವಕ್ರದಂತ ಆನೆಯನ್ನು ಅರಣ್ಯ ಇಲಾಖೆ ಸೆರೆ ಹಿಡಿದು ಹೆಚ್ಚಿನ ಅಪಾಯ ತಪ್ಪಿಸಿದೆ. ಈ ಪುಂಡಾನೆಯನ್ನು ಅರಣ್ಯ ಸಿಬ್ಬಂದಿ ಸಾಕಾನೆಗಳ ಸಹಾಯದಿಂದ ಸೆರೆ ಹಿಡಿದು ದುಬಾರೆ ಆನೆ ಕ್ಯಾಂಪಿನ ಕ್ರಾಲ್‌ನಲ್ಲಿ ಬಂಧಿಯಾಗಿಸಿ, ಗ್ರಾಮಸ್ಥರ ಆತಂಕವನ್ನು ದೂರ ಮಾಡಿದ್ದಾರೆ.

ಬಿಳಿಕೆರೆ ಬಳಿಯ ಅರಬಿತಿಟ್ಟು ಅರಣ್ಯ ಪ್ರದೇಶದಲ್ಲಿ ಬೀಡು ಬಿಟ್ಟಿರುವ ಎರಡು ಸಲಗಗಳ ಸೆರೆ ಹಿಡಿಯಲು ಅಭಿಮನ್ಯು, ಭೀಮಾ, ಮಹೇಂದ್ರ, ಗಣೇಶ ಮತ್ತು ಪ್ರಶಾಂತ ಸಾಕಾನೆಗಳೊಂದಿಗೆ ಮುಂಜಾನೆಯೇ ಆಗಮಿಸಿದ್ದ ಪ್ರಾದೇಶಿಕ ಅರಣ್ಯ ವಿಭಾಗದ ಡಿಸಿಎಫ್ ಹಾಗೂ ಎಲಿಫೆಂಟ್ ಟಾಸ್ಕ್ಪೋರ್ಸ್ನ ಮುಖ್ಯಸ್ಥೆ ಸೀಮಾ ನೇತೃತ್ವದ ತಂಡ. ತಕ್ಷಣವೇ ಸಾಕಾನೆಗಳೊಂದಿಗೆ ಸ್ಥಳಕ್ಕಾಗಮಿಸಿ ಪುಂಡಾನೆಯನ್ನು ಸೆರೆ ಹಿಡಿಯಲು ಮುಂದಾದರು.

ಈ ವೇಳೆ, ಅಕ್ಕ-ಪಕ್ಕದ ಗ್ರಾಮದ ಸಾವಿರಾರು ಮಂದಿ ಸ್ಥಳದಲ್ಲಿ ನೆರೆದು, ಸಲಗವನ್ನು ಅಟ್ಟಾಡಿಸುತ್ತಿದ್ದರು. ಗ್ರಾಮಸ್ಥರನ್ನು ಸಮಾಧಾನ ಪಡಿಸಿ ಆನೆ ಸೆರೆ ಹಿಡಿಯಲು ಕಾರ್ಯಚರಣೆ ಆರಂಭಿಸಿದರು.ಓಡಾಡಿಸಿದ ಪುಂಡಾನೆ : ಸಾಕಾನೆಗಳನ್ನು ಕಂಡ ಸಲಗ ಚಿಕ್ಕಬೀಚನಹಳ್ಳಿ, ದೊಡ್ಡಬೀಚನಹಳ್ಳಿ, ಹಳ್ಳದಮನುಗನಹಳ್ಳಿಯ ಜಮೀನುಗಳಲ್ಲಿ ಅಡ್ಡಾಡುತ್ತಾ ಆಟವಾಡಿಸಿತು. ಇತ್ತ ಜನರಂತೂ ಕೇಕೆ ಹಾಕುತ್ತಾ, ಮುನ್ನುಗ್ಗುತ್ತಿದ್ದರಿಂದ ಕಾರ್ಯಾಚರಣೆಗೆ ಅಡಚಣೆಯಾಗುತ್ತಿತ್ತು. ಅರಣ್ಯ ಸಿಬ್ಬಂದಿ ಅತ್ತಿಂದಿತ್ತ ಜನರ ನಡುವೆಯೇ ಓಡಾಡುತ್ತಲೇ ಅರವಳಿಕೆ ಚುಚ್ಚುಮದ್ದು ನೀಡುವ ಪ್ರಥಮ ಪ್ರಯತ್ನ ವಿಫಲವಾಯಿತಾದರೂ ಮಧ್ಯಾಹ್ನ ೨.೩೦ರ ವೇಳೆಗೆ ಎಚ್.ಡಿ.ಕೋಟೆ ತಾಲೂಕಿನ ಹಳ್ಳದ ಮನುಗನಹಳ್ಳಿಯ ವಾಸುರವರ ತೋಟದಲ್ಲಿ ಅರವಳಿಕೆ ಚುಚ್ಚುಮದ್ದಿನಿಂದ ಪ್ರಜ್ಞೆ ತಪ್ಪಿ ನೆಲಕ್ಕುರುಳಿತು.

andolanait

Recent Posts

ಶಿಷ್ಯವೇತನಕ್ಕೆ ಸಂಶೋಧಕರ ಆಗ್ರಹ : ಭಾನುವಾರ ಸಭೆ

ಮೈಸೂರು : ಶಿಷ್ಯವೇತನಕ್ಕೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರು ನಡೆಸುತ್ತಿರುವ ಹೋರಾಟವನ್ನು ತೀವ್ರಗೊಳಿಸಲು ಭಾನುವಾರ ಬೆಳಿಗ್ಗೆ 11ಕ್ಕೆ ವಿಶ್ವವಿದ್ಯಾನಿಲಯದ ಕ್ರಾಫರ್ಡ್…

8 hours ago

ನಿರ್ಮಾಣ ಹಂತದಲ್ಲಿದ್ದ ಹನುಮನ ದೇಗುಲದ ಛಾವಣಿ ಕುಸಿತ ; 7 ಭಕ್ತರು ಸಾವು

ಮುಂಬೈ : ಇಲ್ಲಿನ ಪರ್ಭಾನಿಯಲ್ಲಿರುವ ನಿರ್ಮಾಣ ಹಂತದ ಹನುಮನ ದೇವಾಲಯದ ಛಾವಣಿ ಕುಸಿದು 7 ಭಕ್ತರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ…

10 hours ago

ಚೂರಿ ಇರಿತ ಆರೋಪ : ಐವರ ವಿರುದ್ಧ ಪ್ರಕರಣ

ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ…

12 hours ago

ಹನೂರು | ಪೊನ್ನಾಚಿ ಗ್ರಾಮದ ಬಳಿ ಬೋನಿಗೆ ಬಿದ್ದ ಚಿರತೆ

ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…

13 hours ago

ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ ಸಮಸ್ಯೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…

16 hours ago

ಕದನ ವಿರಾಮದ ನಡುವೆ ಮತ್ತೆ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ: 5 ಮಂದಿ ಸಾವು

ಬೈರುತ್:‌ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್‌ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…

16 hours ago