ಜಿಲ್ಲೆಗಳು

ಹುಣಸೂರಿನಲ್ಲಿ ಮಹಿಳೆ ಬಲಿ ಪಡೆದಿದ್ದ ಕಾಡಾನೆ ಕೊನೆಗೂ ಸೆರೆ

ಮೈಸೂರು: ಹುಣಸೂರಿನ ಚಿಕ್ಕ ಬೀಚನಹಳ್ಳಿಯಲ್ಲಿ ಮಹಿಳೆಯನ್ನು ಬಲಿ ಪಡೆದು, ಇಬ್ಬರನ್ನು ಗಾಯಗೊಳಿಸಿದ ವಕ್ರದಂತ ಆನೆಯನ್ನು ಅರಣ್ಯ ಇಲಾಖೆ ಸೆರೆ ಹಿಡಿದು ಹೆಚ್ಚಿನ ಅಪಾಯ ತಪ್ಪಿಸಿದೆ. ಈ ಪುಂಡಾನೆಯನ್ನು ಅರಣ್ಯ ಸಿಬ್ಬಂದಿ ಸಾಕಾನೆಗಳ ಸಹಾಯದಿಂದ ಸೆರೆ ಹಿಡಿದು ದುಬಾರೆ ಆನೆ ಕ್ಯಾಂಪಿನ ಕ್ರಾಲ್‌ನಲ್ಲಿ ಬಂಧಿಯಾಗಿಸಿ, ಗ್ರಾಮಸ್ಥರ ಆತಂಕವನ್ನು ದೂರ ಮಾಡಿದ್ದಾರೆ.

ಬಿಳಿಕೆರೆ ಬಳಿಯ ಅರಬಿತಿಟ್ಟು ಅರಣ್ಯ ಪ್ರದೇಶದಲ್ಲಿ ಬೀಡು ಬಿಟ್ಟಿರುವ ಎರಡು ಸಲಗಗಳ ಸೆರೆ ಹಿಡಿಯಲು ಅಭಿಮನ್ಯು, ಭೀಮಾ, ಮಹೇಂದ್ರ, ಗಣೇಶ ಮತ್ತು ಪ್ರಶಾಂತ ಸಾಕಾನೆಗಳೊಂದಿಗೆ ಮುಂಜಾನೆಯೇ ಆಗಮಿಸಿದ್ದ ಪ್ರಾದೇಶಿಕ ಅರಣ್ಯ ವಿಭಾಗದ ಡಿಸಿಎಫ್ ಹಾಗೂ ಎಲಿಫೆಂಟ್ ಟಾಸ್ಕ್ಪೋರ್ಸ್ನ ಮುಖ್ಯಸ್ಥೆ ಸೀಮಾ ನೇತೃತ್ವದ ತಂಡ. ತಕ್ಷಣವೇ ಸಾಕಾನೆಗಳೊಂದಿಗೆ ಸ್ಥಳಕ್ಕಾಗಮಿಸಿ ಪುಂಡಾನೆಯನ್ನು ಸೆರೆ ಹಿಡಿಯಲು ಮುಂದಾದರು.

ಈ ವೇಳೆ, ಅಕ್ಕ-ಪಕ್ಕದ ಗ್ರಾಮದ ಸಾವಿರಾರು ಮಂದಿ ಸ್ಥಳದಲ್ಲಿ ನೆರೆದು, ಸಲಗವನ್ನು ಅಟ್ಟಾಡಿಸುತ್ತಿದ್ದರು. ಗ್ರಾಮಸ್ಥರನ್ನು ಸಮಾಧಾನ ಪಡಿಸಿ ಆನೆ ಸೆರೆ ಹಿಡಿಯಲು ಕಾರ್ಯಚರಣೆ ಆರಂಭಿಸಿದರು.ಓಡಾಡಿಸಿದ ಪುಂಡಾನೆ : ಸಾಕಾನೆಗಳನ್ನು ಕಂಡ ಸಲಗ ಚಿಕ್ಕಬೀಚನಹಳ್ಳಿ, ದೊಡ್ಡಬೀಚನಹಳ್ಳಿ, ಹಳ್ಳದಮನುಗನಹಳ್ಳಿಯ ಜಮೀನುಗಳಲ್ಲಿ ಅಡ್ಡಾಡುತ್ತಾ ಆಟವಾಡಿಸಿತು. ಇತ್ತ ಜನರಂತೂ ಕೇಕೆ ಹಾಕುತ್ತಾ, ಮುನ್ನುಗ್ಗುತ್ತಿದ್ದರಿಂದ ಕಾರ್ಯಾಚರಣೆಗೆ ಅಡಚಣೆಯಾಗುತ್ತಿತ್ತು. ಅರಣ್ಯ ಸಿಬ್ಬಂದಿ ಅತ್ತಿಂದಿತ್ತ ಜನರ ನಡುವೆಯೇ ಓಡಾಡುತ್ತಲೇ ಅರವಳಿಕೆ ಚುಚ್ಚುಮದ್ದು ನೀಡುವ ಪ್ರಥಮ ಪ್ರಯತ್ನ ವಿಫಲವಾಯಿತಾದರೂ ಮಧ್ಯಾಹ್ನ ೨.೩೦ರ ವೇಳೆಗೆ ಎಚ್.ಡಿ.ಕೋಟೆ ತಾಲೂಕಿನ ಹಳ್ಳದ ಮನುಗನಹಳ್ಳಿಯ ವಾಸುರವರ ತೋಟದಲ್ಲಿ ಅರವಳಿಕೆ ಚುಚ್ಚುಮದ್ದಿನಿಂದ ಪ್ರಜ್ಞೆ ತಪ್ಪಿ ನೆಲಕ್ಕುರುಳಿತು.

andolanait

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

4 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

4 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

4 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

4 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

4 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

4 hours ago