ಜಿಲ್ಲೆಗಳು

ಹುಣಸೂರಿನಲ್ಲಿ ಮಹಿಳೆ ಬಲಿ ಪಡೆದಿದ್ದ ಕಾಡಾನೆ ಕೊನೆಗೂ ಸೆರೆ

ಮೈಸೂರು: ಹುಣಸೂರಿನ ಚಿಕ್ಕ ಬೀಚನಹಳ್ಳಿಯಲ್ಲಿ ಮಹಿಳೆಯನ್ನು ಬಲಿ ಪಡೆದು, ಇಬ್ಬರನ್ನು ಗಾಯಗೊಳಿಸಿದ ವಕ್ರದಂತ ಆನೆಯನ್ನು ಅರಣ್ಯ ಇಲಾಖೆ ಸೆರೆ ಹಿಡಿದು ಹೆಚ್ಚಿನ ಅಪಾಯ ತಪ್ಪಿಸಿದೆ. ಈ ಪುಂಡಾನೆಯನ್ನು ಅರಣ್ಯ ಸಿಬ್ಬಂದಿ ಸಾಕಾನೆಗಳ ಸಹಾಯದಿಂದ ಸೆರೆ ಹಿಡಿದು ದುಬಾರೆ ಆನೆ ಕ್ಯಾಂಪಿನ ಕ್ರಾಲ್‌ನಲ್ಲಿ ಬಂಧಿಯಾಗಿಸಿ, ಗ್ರಾಮಸ್ಥರ ಆತಂಕವನ್ನು ದೂರ ಮಾಡಿದ್ದಾರೆ.

ಬಿಳಿಕೆರೆ ಬಳಿಯ ಅರಬಿತಿಟ್ಟು ಅರಣ್ಯ ಪ್ರದೇಶದಲ್ಲಿ ಬೀಡು ಬಿಟ್ಟಿರುವ ಎರಡು ಸಲಗಗಳ ಸೆರೆ ಹಿಡಿಯಲು ಅಭಿಮನ್ಯು, ಭೀಮಾ, ಮಹೇಂದ್ರ, ಗಣೇಶ ಮತ್ತು ಪ್ರಶಾಂತ ಸಾಕಾನೆಗಳೊಂದಿಗೆ ಮುಂಜಾನೆಯೇ ಆಗಮಿಸಿದ್ದ ಪ್ರಾದೇಶಿಕ ಅರಣ್ಯ ವಿಭಾಗದ ಡಿಸಿಎಫ್ ಹಾಗೂ ಎಲಿಫೆಂಟ್ ಟಾಸ್ಕ್ಪೋರ್ಸ್ನ ಮುಖ್ಯಸ್ಥೆ ಸೀಮಾ ನೇತೃತ್ವದ ತಂಡ. ತಕ್ಷಣವೇ ಸಾಕಾನೆಗಳೊಂದಿಗೆ ಸ್ಥಳಕ್ಕಾಗಮಿಸಿ ಪುಂಡಾನೆಯನ್ನು ಸೆರೆ ಹಿಡಿಯಲು ಮುಂದಾದರು.

ಈ ವೇಳೆ, ಅಕ್ಕ-ಪಕ್ಕದ ಗ್ರಾಮದ ಸಾವಿರಾರು ಮಂದಿ ಸ್ಥಳದಲ್ಲಿ ನೆರೆದು, ಸಲಗವನ್ನು ಅಟ್ಟಾಡಿಸುತ್ತಿದ್ದರು. ಗ್ರಾಮಸ್ಥರನ್ನು ಸಮಾಧಾನ ಪಡಿಸಿ ಆನೆ ಸೆರೆ ಹಿಡಿಯಲು ಕಾರ್ಯಚರಣೆ ಆರಂಭಿಸಿದರು.ಓಡಾಡಿಸಿದ ಪುಂಡಾನೆ : ಸಾಕಾನೆಗಳನ್ನು ಕಂಡ ಸಲಗ ಚಿಕ್ಕಬೀಚನಹಳ್ಳಿ, ದೊಡ್ಡಬೀಚನಹಳ್ಳಿ, ಹಳ್ಳದಮನುಗನಹಳ್ಳಿಯ ಜಮೀನುಗಳಲ್ಲಿ ಅಡ್ಡಾಡುತ್ತಾ ಆಟವಾಡಿಸಿತು. ಇತ್ತ ಜನರಂತೂ ಕೇಕೆ ಹಾಕುತ್ತಾ, ಮುನ್ನುಗ್ಗುತ್ತಿದ್ದರಿಂದ ಕಾರ್ಯಾಚರಣೆಗೆ ಅಡಚಣೆಯಾಗುತ್ತಿತ್ತು. ಅರಣ್ಯ ಸಿಬ್ಬಂದಿ ಅತ್ತಿಂದಿತ್ತ ಜನರ ನಡುವೆಯೇ ಓಡಾಡುತ್ತಲೇ ಅರವಳಿಕೆ ಚುಚ್ಚುಮದ್ದು ನೀಡುವ ಪ್ರಥಮ ಪ್ರಯತ್ನ ವಿಫಲವಾಯಿತಾದರೂ ಮಧ್ಯಾಹ್ನ ೨.೩೦ರ ವೇಳೆಗೆ ಎಚ್.ಡಿ.ಕೋಟೆ ತಾಲೂಕಿನ ಹಳ್ಳದ ಮನುಗನಹಳ್ಳಿಯ ವಾಸುರವರ ತೋಟದಲ್ಲಿ ಅರವಳಿಕೆ ಚುಚ್ಚುಮದ್ದಿನಿಂದ ಪ್ರಜ್ಞೆ ತಪ್ಪಿ ನೆಲಕ್ಕುರುಳಿತು.

andolanait

Recent Posts

ಯಾಲಕ್ಕೂರು, ಸುತ್ತಲಿನ ಗ್ರಾಮಗಳಿಗೆ ಬಂತು ಸಾರಿಗೆ ಬಸ್ಸು!

ಚಾಮರಾಜನಗರ: ತಾಲ್ಲೂಕಿನ ಯಾಲಕ್ಕೂರು ಹಾಗೂ ಸುತ್ತಮುತ್ತಲಿನ ಆರು ಗ್ರಾಮಗಳಿಗೆ ಸಾರಿಗೆ ಬಸ್ಸೇ ಇಲ್ಲ ಎಂದು ‘ಆಂದೋಲನ ಪತ್ರಿಕೆ’ಯಲ್ಲಿ ಈಚೆಗೆ ಪ್ರಕಟವಾಗಿದ್ದ…

57 mins ago

ಓದುಗರ ಪತ್ರ: ಬಿಸಿಲಲ್ಲೋ ಅಣ್ಣಾ..!

ಬಿಸಿಲಲ್ಲೋ ಅಣ್ಣ ಇದು ಬರಿ ಬಿಸಿಲಲ್ಲೋ ! ಯಾರು ಹೆಸರಿಟ್ಟರೋ? ಇದಕ್ಕೆ ‘ನಿಲ್ಲೋ ಎಲ್ಲೋ’ ನಿಂತಲ್ಲಿ ನಿಲ್ಲಲು, ಕುಂತಲ್ಲಿ ಕೂರಲು…

1 hour ago

ಓದುಗರ ಪತ್ರ: ಸರ್ಕಾರಿ ಶಾಲೆಗಳ ಅಭಿವೃದ್ಧಿ ಸ್ವಾಗತಾರ್ಹ

ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳ ಬಲವರ್ಧನೆಗೆ ಸರ್ಕಾರ ಮುಂದಾಗಿರುವುದು ಅತ್ಯಂತ ಸಂತೋಷ ಮತ್ತು ಹೆಮ್ಮೆಯ ಸಂಗತಿ. ಮೂಲಸೌಕರ್ಯದ…

1 hour ago

ಓದುಗರ ಪತ್ರ: ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗುವ ಇಂಟರ್ನಲ್ಸ್ ಅಂಕಗಳು

ಮಕ್ಕಳು ಬೋರ್ಡ್ ಪರೀಕ್ಷೆಗಳಲ್ಲಿ ಅಂಕಗಳನ್ನು ತೆಗೆಯುವ ಅರ್ಹತೆ ಇದ್ದರೂ, ಇಂಟರ್ನಲ್ಸ್ ಮಾರ್ಕ್ಸ್(ಆಂತರಿಕ ಅಂಕ) ಎಂಬ ಭೂತದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇತ್ತೀಚೆಗೆ…

1 hour ago

ನಾವಿಕನೇ ಇಲ್ಲದ ಕೊಡಗು ಪ್ರವಾಸೋದ್ಯಮ ಇಲಾಖೆ..!

ಪುನೀತ್ ಮಡಿಕೇರಿ ಇಲಾಖೆಯಲ್ಲಿ ಸಿಬ್ಬಂದಿ ನೇಮಕಕ್ಕೆ ಪ್ರವಾಸೋದ್ಯಮಿಗಳ ಆಗ್ರಹ  ಮಡಿಕೇರಿ: ಕೊಡಗಿನಲ್ಲಿ ಪ್ರವಾಸೋದ್ಯಮ ಇಲಾಖೆಯನ್ನು ಮುನ್ನಡೆಸಲು ನಾವಿಕನೇ ಇಲ್ಲದಾಗಿದ್ದು, ಕಳೆದ ಒಂದು ವರ್ಷದಿಂದ…

1 hour ago