ವೀರನಹೊಸಹಳ್ಳಿ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ಅನೇಕೂರು ವನ್ಯಜೀವಿ ವಲಯದಲ್ಲಿ ಗುಂಡೇಟಿನಿಂದ ಕಾಡುಕೋಣ ಸಾವಿಗೀಡಾಗಿರುವ ಘಟನೆ ನಡೆದಿದೆ.
ದೇವಮಟ್ಟ ಶಾಖೆಯ ಸಿಂಗನೂರು ಗಸ್ತಿನ ಮೈಸೂರು- ಗೋಣಿಕೊಪ್ಪ ಹೆದ್ದಾರಿಯ ರಸ್ತೆ ಬದಿಯಲ್ಲಿ ಮಂಗಳವಾರ ಬೆಳಿಗ್ಗೆ ಅಂದಾಜು 8 ವರ್ಷದ ಕಾಡುಕೋಣ ಅನುಮಾನಾಸ್ಪದವಾಗಿ ಮೃತಪಟ್ಟಿದೆ.
ಸ್ಥಳಕ್ಕೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು, ಅರಣ್ಯಾಧಿಕಾರಿಗಳು, ಪಶುವೈದ್ಯಾಧಿಕಾರಿಗಳು, ವಲಯ ಅರಣ್ಯಾಧಿಕಾರಿ, ದೇವಮಚ್ಚಿ, ಶಾಖೆ, ಎಸ್.ಟಿ.ಪಿ.ಎಫ್. ಸಿಬ್ಬಂದಿ ಹಾಗೂ ಅರಣ್ಯ ರಕ್ಷಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ನಂತರ ಗುಂಡೇಟಿನಿಂದ ಕಾಡುಕೋಣ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ನಂತರ ಕಾಡುಕೋಣದ ಮರಣೋತ್ತರ ಪರೀಕ್ಷೆ ನಡೆಸಿದ್ದು, ಆರೋಪಿಗಳ ಪತ್ತೆಗಾಗಿ ತನಿಖೆ ಕೈಗೊಳ್ಳಲಾಗಿದೆ ಎಂದು ಇಲಾಖೆಯವರು ತಿಳಿಸಿದ್ದಾರೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…