ಮೈಸೂರು: ಚಲನಚಿತ್ರ ನಟ, ನಿರ್ದೇಶಕ ಹಾಗೂ ನಿರ್ಮಾಪಕ ಆಸ್ಕರ್ ಕೃಷ್ಣ ಸಾರಥ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಕಲಾಭೂಮಿ ಪ್ರತಿಷ್ಠಾನದ ಉದ್ಘಾಟನೆಯು ಶನಿವಾರ ನೆರವೇರಿತು.
ಮೈಸೂರಿನ ವಿಜಯನಗರ ಒಂದನೇ ಹಂತದಲ್ಲಿರುವ ಜಿಲ್ಲಾ ಸಾಹಿತ್ಯ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಖ್ಯಾತ ಚಲನಚಿತ್ರ ನಟ ಜೈ ಜಗದೀಶ್ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು ಇತ್ತೀಚಿನ ದಿನಗಳಲ್ಲಿ ಇಂತಹ ಕಲಿಕಾ ಶಾಲೆಗಳನ್ನು ಮಾಡುವುದು ತುಂಬಾ ಕಷ್ಟದ ಕೆಲಸ. ಸುಲಭದ್ದಾಗಿದ್ದರೆ ಚಿತ್ರರಂಗದಲ್ಲಿರುವ ನಾವೇ ಮಾಡುತ್ತಿದ್ದೆವು. ಇದಕ್ಕೆ ಬಹಳ ಸಮಯ ಕೊಡಬೇಕಾಗುತ್ತದೆ. ಸಾಕಷ್ಟು ಹಣವೂ ಬೇಕಾಗುತ್ತದೆ. ಚಿತ್ರೀಕರಣಕ್ಕಾಗಿ ಎಲ್ಲೆಲ್ಲೋ ಅಲೆಯುವ ನಾವುಗಳು ಇಂತಹ ಸಂಸ್ಥೆಗಳನ್ನು ನಡೆಸಲಾಗದು. ಯುವ ನಟ, ನಿರ್ದೇಶಕ ಆಸ್ಕರ್ ಕೃಷ್ಣ ಈ ಪ್ರಯತ್ನ ಮಾಡುತ್ತಿದ್ದಾರೆ. ಇದರಲ್ಲಿ ಇವರಿಗೆ ಯಶಸ್ಸು ಸಿಗಲಿ. ಇಲ್ಲಿ ಕಲಿಯುವವರು ದೊಡ್ಡ ಮಟ್ಟದಲ್ಲಿ ಬೆಳೆಯಲಿ ಎಂದು ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾದ ಭಾ.ಮ ಹರೀಶ್ ರವರು ಮಾತನಾಡಿ ಆಸ್ಕರ್ ಕೃಷ್ಣ ಪ್ರಾರಂಭಿಸಿರುವ ‘ಕಲಾಭೂಮಿ’ ಸಂಸ್ಥೆಯು ಮೈಸೂರಿನಲ್ಲಿ ಒಂದು ಮಾದರಿ ಸಂಸ್ಥೆಯಾಗಿ ಬೆಳೆಯಲಿ ಅದಕ್ಕೆ ಬೇಕಾದ ಎಲ್ಲಾ ಸಹಕಾರಗಳನ್ನು ನಾವು ನೀಡುತ್ತೇವೆ. ಮೈಸೂರು ಭಾಗದ ಪ್ರತಿಭೆಗಳು ಈ ‘ಕಲಾಭೂಮಿ’ಯಿಂದ ಚಿತ್ರರಂಗಕ್ಕೆ ಪರಿಚಯವಾಗಲಿ ಎಂಬ ಬೆಂಬಲದ ಮಾತುಗಳನ್ನಾಡಿದರು.
ರಂಗಾಯಣದ ಉಪ ನಿರ್ದೇಶಕಿ ನಿರ್ಮಲ ಮಠಪತಿ ಮಾತನಾಡಿ ಕಲಾವಲಯದಲ್ಲಿ ಶಾಲೆ ಆರಂಭಿಸುವವರು ಕೇವಲ ಒಂದು ಕಲೆಯ ಬಗ್ಗೆಯಷ್ಟೇ ಕೇಂದ್ರೀಕರಿಸುತ್ತಾರೆ. ಆದರೆ ಇವರು ಮೂರು ಮಾಧ್ಯಮಗಳ ಬಗ್ಗೆ ಕಲಿಕಾ ಶಾಲೆ ಮಾಡಿರುವುದು ವಿಶೇಷವಾಗಿದೆ. ತಂತ್ರಜ್ಞಾನದ ಜೊತೆಗೆ ಬೆಳೆದಿರುವ ಕಲಾ ಮಾಧ್ಯಮಗಳು ಸಮಾಜಕ್ಕೆ ಯಾವ ಸಂದೇಶ ನೀಡುತ್ತಿವೆ ಎಂಬುದನ್ನು ನೋಡಬೇಕಾಗುತ್ತದೆ. ಸಾಮಾಜಿಕ ಜವಾಬ್ದಾರಿಯು ಎಲ್ಲಾ ಮಾಧ್ಯಮ ಪ್ರಾಕಾರಗಳ ಮೇಲೂ ಇದೆ. ಅವು ನೈತಿಕ ಮೌಲ್ಯಗಳನ್ನು ಬೆಳೆಸಬೇಕು ಎಂದು ಆಶಿಸಿದರು.
‘ಕಲಾಭೂಮಿ’ ಸಂಸ್ಥಾಪಕ ಅಧ್ಯಕ್ಷ ಆಸ್ಕರ್ ಕೃಷ್ಣ ಮಾತನಾಡಿ, ಸಿನಿಮಾ, ನಾಟಕ ಹಾಗೂ ಲಲಿತಕಲಾ ಶಾಲೆಯಾಗಿ ‘ಕಲಾಭೂಮಿ’ಯು ಕಾರ್ಯ ನಿರ್ವಹಿಸಲಿದೆ. ಸಿನಿಮಾ ರಂಗಕ್ಕೆ ಸಂಬಂಧಿಸಿದಂತೆ ಪ್ರಾಯೋಗಿಕವಾಗಿ ಕಲಿಸುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು.
ಚಿತ್ರನಟ ಶಂಕರ ಅಶ್ವಥ್, ಜಾರಿ ನಿರ್ದೇಶನಾಲಯದ ಎಸ್.ಪಿ ಡಾ. ಕವಿತಾ, ಸಮಾಜ ಸೇವಕಿ ಪ್ರೇಮ ಬೋಧಿ, ರಂಗಭೂಮಿ ಮತ್ತು ಸಿನಿಮಾ ತಂತ್ರಜ್ಞ ಮಂಜು ಸ್ವಾಮಿ ಮತ್ತು ರಂಗಕರ್ಮಿ ಗಿರೀಶ್ ಮಾಚಳ್ಳಿ ಅವರನ್ನು ಸನ್ಮಾನಿಸಲಾಯಿತು.
ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್, ಸಾಹಿತಿ, ಚಿಂತಕ ಡಾ. ಕೃಷ್ಣಮೂರ್ತಿ ಚಮರಂ, ಹಿರಿಯ ಚಿತ್ರ ಸಾಹಿತಿ ಬಿ.ಎ ಮಧು, ನಿರ್ಮಾಪಕರಾದ ಟಿ.ಪಿ ಸಿದ್ದರಾಜು ಹಾಗೂ ಅಂಚೆಹಳ್ಳಿ ಶಿವಕುಮಾರ್ ಉಪಸ್ಥಿತರಿದ್ದರು.
ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…