ಜಿಲ್ಲೆಗಳು

ಕಲಾಂ ಜನ್ಮದಿನ ವಿಶ್ವ ವಿದ್ಯಾರ್ಥಿಗಳ ದಿನವಾಗಿ ಆಚರಣೆ

ಹುಣಸೂರು: ತಾಲ್ಲೂಕಿನ ಗಾವಡಗೆರೆ ಹೋಬಳಿಯ ಬಿಳಿಗೆರೆ ಗ್ರಾಮದ ಅನ್ವೇಷಣಾ ಪದವಿಪೂರ್ವ ಕಾಲೇಜಿನಲ್ಲಿ ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಜನ್ಮ ದಿನವನ್ನು ವಿಶ್ವಸಂಸ್ಥೆ ಘೋಷಿಸಿರುವ ವಿಶ್ವ ವಿದ್ಯಾರ್ಥಿಗಳ ದಿನವಾಗಿ ಆಚರಿಸಲಾಯಿತು.

ಕೃಷಿ ಮಾರಾಟ ಇಲಾಖೆಯ ಹೆಚ್ಚುವರಿ ನಿವೃತ್ತ ನಿರ್ದೇಶಕ ಹಾಗೂ ಅನ್ವೇಷಣಾ ಕಾಲೇಜಿನ ಸಂಸ್ಥೆಯ ಸಂಸ್ಥಾಪಕ ಹೆಚ್.ಕೆ.ಚಂದ್ರಮೋಹನ್ ಮಾತನಾಡಿ, ಮಹನೀಯರ ಮೌಲ್ಯಗಳನ್ನು ಅನುಸರಿಸಿ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆದಾಗ ಇಂತಹ ದಿನಗಳ ಆಚರಣೆಗೆ ಒಂದು ಗೌರವ ಬರುತ್ತದೆ ಎಂದು ಅಭಿಪ್ರಾಯಪಟ್ಟರು.

ಒಂದು ಸಾಧಾರಣ ಕುಟುಂಬದಲ್ಲಿ ಜನಿಸಿದ ವ್ಯಕ್ತಿ ಏನೆಲ್ಲ ಸಾಧನೆಗಳನ್ನು ಮಾಡಬಹುದು ಎಂಬುದಕ್ಕೆ ಅತ್ಯುತ್ತಮ ಉದಾಹರಣೆ ಭಾರತ ರತ್ನ ಅಬ್ದುಲ್ ಕಲಾಂರವರು. ನಾವು ಹೇಗಿದ್ದೆವು ಎಂಬುದರ ಬದಲಾಗಿ ಹೇಗೆ ಬೆಳೆಯಬೇಕೆಂಬುದನ್ನು ಯೋಚಿಸಬೇಕು. ನೀವು ನಿಮ್ಮ ತಂದೆ ತಾಯಿಯರ ಹೆಸರಿನಿಂದ ಗುರುತಿಸಿಕೊಳ್ಳುವ ಬದಲು ನಿಮ್ಮ ಹೆಸರಿನಿಂದ ನಿಮ್ಮ ತಂದೆ ತಾಯಿಗಳನ್ನು ಗುರುತಿಸುವಂತಹ ಸಾಧಕರಾಗಿ ಬೆಳೆಯಬೇಕು ಎಂದು ನುಡಿದರು.

ಡಾ.ಎ.ಪಿ.ಜಿ.ಅಬ್ದುಲ್ ಕಲಾಂರವರನ್ನು ಕುರಿತು ಐಶ್ವರ್ಯ, ಪ್ರಿಯಾ, ವರುಣ್, ರಕ್ಷಿತಾ, ಮಧುಶ್ರೀ, ಹೃತ್ವಿಕ್ , ಗಗನ್, ಸಾರಿಕಾ, ಉಮಾಮಹೇಶ್ವರಿ ಮಾತನಾಡಿದರು. ಸರಸ್ವತಿ ಚಂದ್ರಮೋಹನ್, ಉಪಪ್ರಾಂಶುಪಾಲರಾದ ಆಶಾ ನಂದೀಶ್, ಉಪನ್ಯಾಸಕರು ಹಾಗೂ ಕಚೇರಿ ಸಿಬ್ಬಂದಿ ಹಾಜರಿದ್ದರು.

andolana

Recent Posts

ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಬಸ್‌ ಸೌಲಭ್ಯ ಕಲ್ಪಿಸಲು ಡಿಪೋ ನಿರ್ಮಾಣ: ಶಾಸಕ ಎಂ.ಆರ್.‌ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…

7 hours ago

ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವು

‌ಶ್ರೀರಂಗಪಟ್ಟಣ: ವಿದ್ಯುತ್‌ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್‌ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…

7 hours ago

ರಾಜ್ಯದ ಹಲವೆಡೆ ಭಾರೀ ಗಾಳಿ ಮಳೆ: ಜನಜೀವನ ಅಸ್ತವ್ಯಸ್ತ

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…

7 hours ago

ಹನೂರು: 153 ದಿನಗಳಿಂದ ರೈತರು ನಡೆಸುತ್ತಿದ್ದ ಅಹೋರಾತ್ರಿ ಧರಣಿ ಅಂತ್ಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…

7 hours ago

ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್‌ ಸಿಗ್ನಲ್‌ ಆರೋಪ: ಸಚಿವ ಮಹದೇವಪ್ಪ ಪ್ರತಿಕ್ರಿಯೆ

ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್‌ ಸಿಗ್ನಲ್‌ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…

8 hours ago

ದೀದಿ ಸರ್ಕಾರದ ವಿರುದ್ಧ ಅಮಿತ್‌ ಶಾ ಚಾರ್ಜ್‌ಶೀಟ್‌ ರಿಲೀಸ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…

8 hours ago