ಹುಣಸೂರು: ತಾಲ್ಲೂಕಿನ ಗಾವಡಗೆರೆ ಹೋಬಳಿಯ ಬಿಳಿಗೆರೆ ಗ್ರಾಮದ ಅನ್ವೇಷಣಾ ಪದವಿಪೂರ್ವ ಕಾಲೇಜಿನಲ್ಲಿ ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಜನ್ಮ ದಿನವನ್ನು ವಿಶ್ವಸಂಸ್ಥೆ ಘೋಷಿಸಿರುವ ವಿಶ್ವ ವಿದ್ಯಾರ್ಥಿಗಳ ದಿನವಾಗಿ ಆಚರಿಸಲಾಯಿತು.
ಕೃಷಿ ಮಾರಾಟ ಇಲಾಖೆಯ ಹೆಚ್ಚುವರಿ ನಿವೃತ್ತ ನಿರ್ದೇಶಕ ಹಾಗೂ ಅನ್ವೇಷಣಾ ಕಾಲೇಜಿನ ಸಂಸ್ಥೆಯ ಸಂಸ್ಥಾಪಕ ಹೆಚ್.ಕೆ.ಚಂದ್ರಮೋಹನ್ ಮಾತನಾಡಿ, ಮಹನೀಯರ ಮೌಲ್ಯಗಳನ್ನು ಅನುಸರಿಸಿ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆದಾಗ ಇಂತಹ ದಿನಗಳ ಆಚರಣೆಗೆ ಒಂದು ಗೌರವ ಬರುತ್ತದೆ ಎಂದು ಅಭಿಪ್ರಾಯಪಟ್ಟರು.
ಒಂದು ಸಾಧಾರಣ ಕುಟುಂಬದಲ್ಲಿ ಜನಿಸಿದ ವ್ಯಕ್ತಿ ಏನೆಲ್ಲ ಸಾಧನೆಗಳನ್ನು ಮಾಡಬಹುದು ಎಂಬುದಕ್ಕೆ ಅತ್ಯುತ್ತಮ ಉದಾಹರಣೆ ಭಾರತ ರತ್ನ ಅಬ್ದುಲ್ ಕಲಾಂರವರು. ನಾವು ಹೇಗಿದ್ದೆವು ಎಂಬುದರ ಬದಲಾಗಿ ಹೇಗೆ ಬೆಳೆಯಬೇಕೆಂಬುದನ್ನು ಯೋಚಿಸಬೇಕು. ನೀವು ನಿಮ್ಮ ತಂದೆ ತಾಯಿಯರ ಹೆಸರಿನಿಂದ ಗುರುತಿಸಿಕೊಳ್ಳುವ ಬದಲು ನಿಮ್ಮ ಹೆಸರಿನಿಂದ ನಿಮ್ಮ ತಂದೆ ತಾಯಿಗಳನ್ನು ಗುರುತಿಸುವಂತಹ ಸಾಧಕರಾಗಿ ಬೆಳೆಯಬೇಕು ಎಂದು ನುಡಿದರು.
ಡಾ.ಎ.ಪಿ.ಜಿ.ಅಬ್ದುಲ್ ಕಲಾಂರವರನ್ನು ಕುರಿತು ಐಶ್ವರ್ಯ, ಪ್ರಿಯಾ, ವರುಣ್, ರಕ್ಷಿತಾ, ಮಧುಶ್ರೀ, ಹೃತ್ವಿಕ್ , ಗಗನ್, ಸಾರಿಕಾ, ಉಮಾಮಹೇಶ್ವರಿ ಮಾತನಾಡಿದರು. ಸರಸ್ವತಿ ಚಂದ್ರಮೋಹನ್, ಉಪಪ್ರಾಂಶುಪಾಲರಾದ ಆಶಾ ನಂದೀಶ್, ಉಪನ್ಯಾಸಕರು ಹಾಗೂ ಕಚೇರಿ ಸಿಬ್ಬಂದಿ ಹಾಜರಿದ್ದರು.
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…
ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್ಮಸ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…
ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…