ಜಿಲ್ಲೆಗಳು

ಕಲಾಂ ಜನ್ಮದಿನ ವಿಶ್ವ ವಿದ್ಯಾರ್ಥಿಗಳ ದಿನವಾಗಿ ಆಚರಣೆ

ಹುಣಸೂರು: ತಾಲ್ಲೂಕಿನ ಗಾವಡಗೆರೆ ಹೋಬಳಿಯ ಬಿಳಿಗೆರೆ ಗ್ರಾಮದ ಅನ್ವೇಷಣಾ ಪದವಿಪೂರ್ವ ಕಾಲೇಜಿನಲ್ಲಿ ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಜನ್ಮ ದಿನವನ್ನು ವಿಶ್ವಸಂಸ್ಥೆ ಘೋಷಿಸಿರುವ ವಿಶ್ವ ವಿದ್ಯಾರ್ಥಿಗಳ ದಿನವಾಗಿ ಆಚರಿಸಲಾಯಿತು.

ಕೃಷಿ ಮಾರಾಟ ಇಲಾಖೆಯ ಹೆಚ್ಚುವರಿ ನಿವೃತ್ತ ನಿರ್ದೇಶಕ ಹಾಗೂ ಅನ್ವೇಷಣಾ ಕಾಲೇಜಿನ ಸಂಸ್ಥೆಯ ಸಂಸ್ಥಾಪಕ ಹೆಚ್.ಕೆ.ಚಂದ್ರಮೋಹನ್ ಮಾತನಾಡಿ, ಮಹನೀಯರ ಮೌಲ್ಯಗಳನ್ನು ಅನುಸರಿಸಿ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆದಾಗ ಇಂತಹ ದಿನಗಳ ಆಚರಣೆಗೆ ಒಂದು ಗೌರವ ಬರುತ್ತದೆ ಎಂದು ಅಭಿಪ್ರಾಯಪಟ್ಟರು.

ಒಂದು ಸಾಧಾರಣ ಕುಟುಂಬದಲ್ಲಿ ಜನಿಸಿದ ವ್ಯಕ್ತಿ ಏನೆಲ್ಲ ಸಾಧನೆಗಳನ್ನು ಮಾಡಬಹುದು ಎಂಬುದಕ್ಕೆ ಅತ್ಯುತ್ತಮ ಉದಾಹರಣೆ ಭಾರತ ರತ್ನ ಅಬ್ದುಲ್ ಕಲಾಂರವರು. ನಾವು ಹೇಗಿದ್ದೆವು ಎಂಬುದರ ಬದಲಾಗಿ ಹೇಗೆ ಬೆಳೆಯಬೇಕೆಂಬುದನ್ನು ಯೋಚಿಸಬೇಕು. ನೀವು ನಿಮ್ಮ ತಂದೆ ತಾಯಿಯರ ಹೆಸರಿನಿಂದ ಗುರುತಿಸಿಕೊಳ್ಳುವ ಬದಲು ನಿಮ್ಮ ಹೆಸರಿನಿಂದ ನಿಮ್ಮ ತಂದೆ ತಾಯಿಗಳನ್ನು ಗುರುತಿಸುವಂತಹ ಸಾಧಕರಾಗಿ ಬೆಳೆಯಬೇಕು ಎಂದು ನುಡಿದರು.

ಡಾ.ಎ.ಪಿ.ಜಿ.ಅಬ್ದುಲ್ ಕಲಾಂರವರನ್ನು ಕುರಿತು ಐಶ್ವರ್ಯ, ಪ್ರಿಯಾ, ವರುಣ್, ರಕ್ಷಿತಾ, ಮಧುಶ್ರೀ, ಹೃತ್ವಿಕ್ , ಗಗನ್, ಸಾರಿಕಾ, ಉಮಾಮಹೇಶ್ವರಿ ಮಾತನಾಡಿದರು. ಸರಸ್ವತಿ ಚಂದ್ರಮೋಹನ್, ಉಪಪ್ರಾಂಶುಪಾಲರಾದ ಆಶಾ ನಂದೀಶ್, ಉಪನ್ಯಾಸಕರು ಹಾಗೂ ಕಚೇರಿ ಸಿಬ್ಬಂದಿ ಹಾಜರಿದ್ದರು.

andolana

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

12 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

13 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

14 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

15 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

20 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

20 hours ago