ಜಿಲ್ಲೆಗಳು

ಕಲಾಂ ಜನ್ಮದಿನ ವಿಶ್ವ ವಿದ್ಯಾರ್ಥಿಗಳ ದಿನವಾಗಿ ಆಚರಣೆ

ಹುಣಸೂರು: ತಾಲ್ಲೂಕಿನ ಗಾವಡಗೆರೆ ಹೋಬಳಿಯ ಬಿಳಿಗೆರೆ ಗ್ರಾಮದ ಅನ್ವೇಷಣಾ ಪದವಿಪೂರ್ವ ಕಾಲೇಜಿನಲ್ಲಿ ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಜನ್ಮ ದಿನವನ್ನು ವಿಶ್ವಸಂಸ್ಥೆ ಘೋಷಿಸಿರುವ ವಿಶ್ವ ವಿದ್ಯಾರ್ಥಿಗಳ ದಿನವಾಗಿ ಆಚರಿಸಲಾಯಿತು.

ಕೃಷಿ ಮಾರಾಟ ಇಲಾಖೆಯ ಹೆಚ್ಚುವರಿ ನಿವೃತ್ತ ನಿರ್ದೇಶಕ ಹಾಗೂ ಅನ್ವೇಷಣಾ ಕಾಲೇಜಿನ ಸಂಸ್ಥೆಯ ಸಂಸ್ಥಾಪಕ ಹೆಚ್.ಕೆ.ಚಂದ್ರಮೋಹನ್ ಮಾತನಾಡಿ, ಮಹನೀಯರ ಮೌಲ್ಯಗಳನ್ನು ಅನುಸರಿಸಿ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆದಾಗ ಇಂತಹ ದಿನಗಳ ಆಚರಣೆಗೆ ಒಂದು ಗೌರವ ಬರುತ್ತದೆ ಎಂದು ಅಭಿಪ್ರಾಯಪಟ್ಟರು.

ಒಂದು ಸಾಧಾರಣ ಕುಟುಂಬದಲ್ಲಿ ಜನಿಸಿದ ವ್ಯಕ್ತಿ ಏನೆಲ್ಲ ಸಾಧನೆಗಳನ್ನು ಮಾಡಬಹುದು ಎಂಬುದಕ್ಕೆ ಅತ್ಯುತ್ತಮ ಉದಾಹರಣೆ ಭಾರತ ರತ್ನ ಅಬ್ದುಲ್ ಕಲಾಂರವರು. ನಾವು ಹೇಗಿದ್ದೆವು ಎಂಬುದರ ಬದಲಾಗಿ ಹೇಗೆ ಬೆಳೆಯಬೇಕೆಂಬುದನ್ನು ಯೋಚಿಸಬೇಕು. ನೀವು ನಿಮ್ಮ ತಂದೆ ತಾಯಿಯರ ಹೆಸರಿನಿಂದ ಗುರುತಿಸಿಕೊಳ್ಳುವ ಬದಲು ನಿಮ್ಮ ಹೆಸರಿನಿಂದ ನಿಮ್ಮ ತಂದೆ ತಾಯಿಗಳನ್ನು ಗುರುತಿಸುವಂತಹ ಸಾಧಕರಾಗಿ ಬೆಳೆಯಬೇಕು ಎಂದು ನುಡಿದರು.

ಡಾ.ಎ.ಪಿ.ಜಿ.ಅಬ್ದುಲ್ ಕಲಾಂರವರನ್ನು ಕುರಿತು ಐಶ್ವರ್ಯ, ಪ್ರಿಯಾ, ವರುಣ್, ರಕ್ಷಿತಾ, ಮಧುಶ್ರೀ, ಹೃತ್ವಿಕ್ , ಗಗನ್, ಸಾರಿಕಾ, ಉಮಾಮಹೇಶ್ವರಿ ಮಾತನಾಡಿದರು. ಸರಸ್ವತಿ ಚಂದ್ರಮೋಹನ್, ಉಪಪ್ರಾಂಶುಪಾಲರಾದ ಆಶಾ ನಂದೀಶ್, ಉಪನ್ಯಾಸಕರು ಹಾಗೂ ಕಚೇರಿ ಸಿಬ್ಬಂದಿ ಹಾಜರಿದ್ದರು.

andolana

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

3 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

3 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

3 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

3 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

15 hours ago