Mysore
23
light rain

Social Media

ಶನಿವಾರ, 30 ಮೇ 2026
Light
Dark

ಕಣಗಾಲ್ ಪುಟ್ಟಣ್ಣ ಭಾರತೀಯ ಚಿತ್ರರಂಗದ ದೊಡ್ಡಣ್ಣ: ಸಾಹಿತಿ ಬನ್ನೂರು ರಾಜು

ಮೈಸೂರು: ಚಿತ್ರಬ್ರಹ್ಮ ಪುಟ್ಟಣ್ಣ ಕಣಗಾಲ್ ಅವರ ಹೆಸರಷ್ಟೇ ಪುಟ್ಟಣ್ಣನಾದರೂ ಬಣ್ಣದ ಲೋಕದ ದೈತ್ಯ ಪ್ರತಿಭೆಯಾಗಿದ್ದ ಅವರು ಬೆಳ್ಳಿತೆರೆಯ ದೊಡ್ಡಣ್ಣನೆಂದು ಸಾಹಿತಿ ಬನ್ನೂರು ಕೆ.ರಾಜು ಬಣ್ಣಿಸಿದರು.

ನಗರದ ಪಡುವಾರಹಳ್ಳಿ ಸ್ನೇಹ ಬಳಗದಿಂದ ಜಲದರ್ಶಿನಿ ಅತಿಥಿ ಗೃಹ ಆವರಣದಲ್ಲಿ ಏರ್ಪಡಿಸಿದ್ದ ಚಲನಚಿತ್ರ ನಿರ್ದೇಶಕ ಎಸ್.ಆರ್.ಪುಟ್ಟಣ್ಣ ಕಣಗಾಲರ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಪುಟ್ಟಣ್ಣನವರು ಖ್ಯಾತ ಚತ್ರೋದ್ಯಮಿ ಬಿ.ಆರ್. ಪಂತುಲು ಗರಡಿಯಲ್ಲಿ ಸಹಾಯಕ ನಿರ್ದೇಶಕರಾಗಿ ಪಳಗಿ ’ಬೆಳ್ಳಿಮೋಡ’ ಚಿತ್ರದಿಂದ ಸ್ವತಂತ್ರ ನಿರ್ದೇಶಕರಾಗಿ ತಮ್ಮ ಚಿತ್ರ ಪುಂಣ ಆರಂಭಿಸಿ ’ಮಸಣದ ಹೂ’ ಚಿತ್ರದ ತನಕ ಅಮೂಲ್ಯವಾದ ೨೪ ಕನ್ನಡ ಚಿತ್ರಗಳನ್ನು ಹಾಗೂ ತಮಿಳಿನಲ್ಲಿ ಮೂರು, ತೆಲುಗಿನಲ್ಲಿ ಮೂರು, ಮಲಾಂಳಂನಲ್ಲಿ ಆರು, ಹಿಂದಿಯಲ್ಲಿ ಒಂದು ಸೇರಿದಂತೆ ಇತರೆ ಭಾಷೆಗಳಲ್ಲಿ ೧೩ ಚಿತ್ರಗಳನ್ನು ನಿರ್ದೇಶಿಸಿ ಪ್ರಖ್ಯಾತ ಬಹುಭಾಷಾ ಚಿತ್ರ ನಿರ್ದೇಶಕರೆಂದು ದೇಶದ ಗಮನ ಸೆಳೆದವರು ಎಂದರು.

ಪುಟ್ಟಣ್ಣನವರು ವಿಶೇಷವಾಗಿ ತಮ್ಮ ಚಿತ್ರದ ಹಾಡುಗಳಿಗೆ ಆದ್ಯತೆ ನೀಡುತ್ತಿದ್ದರು. ಚಿತ್ರಗೀತೆಯಲ್ಲಿ ಒಂದಕ್ಷರದ ರಾಜಿಗೂ ಅವರು ಒಪ್ಪುತ್ತಿರಲಿಲ್ಲ. ಅದಕ್ಕೆ ಅವರ ಪ್ರತಿಯೊಂದು ಚಿತ್ರಗಳ ಗೀತೆಗಳೂ ನಿತ್ಯ ಹರಿದ್ವರ್ಣ. ಅವುಗಳನ್ನು ಆಲಿಸಿದರೆ, ದೃಶ್ಯಕಾವ್ಯದಲ್ಲಿ ನೋಡಿದರೆ ಈ ಕ್ಷಣಕ್ಕೂ ರಸ ರೋಮಾಂಚನ ಎಂದು ಹೇಳಿದರು.

ಮೈಸೂರು ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕ ಪಡುವಾರಹಳ್ಳಿ ಎಂ. ರಾಮಕೃಷ್ಣ, ಸಿ.ರೇವಣ್ಣ, ಜನಹಿತ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕ ಎಸ್. ಕೃಷ್ಣಕುಮಾರ್, ಬಿ.ಕುಮಾರ್, ಕೇಬಲ್ ಕಿಟ್ಟಿ, ಎಂ. ಶಿವಪ್ರಕಾಶ್, ರಾ. ಸಿದ್ಧರಾಮು, ಸುರೇಂದ್ರ ಕುಮಾರ್, ಸಿ. ಸಂತೋಷ್, ಈ.ಬಸವರಾಜು ಮುಂತಾದವರು ಹಾಜರಿದ್ದರು.

 

 

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!