ಜಿಲ್ಲೆಗಳು

ಕಣಗಾಲ್ ಪುಟ್ಟಣ್ಣ ಭಾರತೀಯ ಚಿತ್ರರಂಗದ ದೊಡ್ಡಣ್ಣ: ಸಾಹಿತಿ ಬನ್ನೂರು ರಾಜು

ಮೈಸೂರು: ಚಿತ್ರಬ್ರಹ್ಮ ಪುಟ್ಟಣ್ಣ ಕಣಗಾಲ್ ಅವರ ಹೆಸರಷ್ಟೇ ಪುಟ್ಟಣ್ಣನಾದರೂ ಬಣ್ಣದ ಲೋಕದ ದೈತ್ಯ ಪ್ರತಿಭೆಯಾಗಿದ್ದ ಅವರು ಬೆಳ್ಳಿತೆರೆಯ ದೊಡ್ಡಣ್ಣನೆಂದು ಸಾಹಿತಿ ಬನ್ನೂರು ಕೆ.ರಾಜು ಬಣ್ಣಿಸಿದರು.

ನಗರದ ಪಡುವಾರಹಳ್ಳಿ ಸ್ನೇಹ ಬಳಗದಿಂದ ಜಲದರ್ಶಿನಿ ಅತಿಥಿ ಗೃಹ ಆವರಣದಲ್ಲಿ ಏರ್ಪಡಿಸಿದ್ದ ಚಲನಚಿತ್ರ ನಿರ್ದೇಶಕ ಎಸ್.ಆರ್.ಪುಟ್ಟಣ್ಣ ಕಣಗಾಲರ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಪುಟ್ಟಣ್ಣನವರು ಖ್ಯಾತ ಚತ್ರೋದ್ಯಮಿ ಬಿ.ಆರ್. ಪಂತುಲು ಗರಡಿಯಲ್ಲಿ ಸಹಾಯಕ ನಿರ್ದೇಶಕರಾಗಿ ಪಳಗಿ ’ಬೆಳ್ಳಿಮೋಡ’ ಚಿತ್ರದಿಂದ ಸ್ವತಂತ್ರ ನಿರ್ದೇಶಕರಾಗಿ ತಮ್ಮ ಚಿತ್ರ ಪುಂಣ ಆರಂಭಿಸಿ ’ಮಸಣದ ಹೂ’ ಚಿತ್ರದ ತನಕ ಅಮೂಲ್ಯವಾದ ೨೪ ಕನ್ನಡ ಚಿತ್ರಗಳನ್ನು ಹಾಗೂ ತಮಿಳಿನಲ್ಲಿ ಮೂರು, ತೆಲುಗಿನಲ್ಲಿ ಮೂರು, ಮಲಾಂಳಂನಲ್ಲಿ ಆರು, ಹಿಂದಿಯಲ್ಲಿ ಒಂದು ಸೇರಿದಂತೆ ಇತರೆ ಭಾಷೆಗಳಲ್ಲಿ ೧೩ ಚಿತ್ರಗಳನ್ನು ನಿರ್ದೇಶಿಸಿ ಪ್ರಖ್ಯಾತ ಬಹುಭಾಷಾ ಚಿತ್ರ ನಿರ್ದೇಶಕರೆಂದು ದೇಶದ ಗಮನ ಸೆಳೆದವರು ಎಂದರು.

ಪುಟ್ಟಣ್ಣನವರು ವಿಶೇಷವಾಗಿ ತಮ್ಮ ಚಿತ್ರದ ಹಾಡುಗಳಿಗೆ ಆದ್ಯತೆ ನೀಡುತ್ತಿದ್ದರು. ಚಿತ್ರಗೀತೆಯಲ್ಲಿ ಒಂದಕ್ಷರದ ರಾಜಿಗೂ ಅವರು ಒಪ್ಪುತ್ತಿರಲಿಲ್ಲ. ಅದಕ್ಕೆ ಅವರ ಪ್ರತಿಯೊಂದು ಚಿತ್ರಗಳ ಗೀತೆಗಳೂ ನಿತ್ಯ ಹರಿದ್ವರ್ಣ. ಅವುಗಳನ್ನು ಆಲಿಸಿದರೆ, ದೃಶ್ಯಕಾವ್ಯದಲ್ಲಿ ನೋಡಿದರೆ ಈ ಕ್ಷಣಕ್ಕೂ ರಸ ರೋಮಾಂಚನ ಎಂದು ಹೇಳಿದರು.

ಮೈಸೂರು ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕ ಪಡುವಾರಹಳ್ಳಿ ಎಂ. ರಾಮಕೃಷ್ಣ, ಸಿ.ರೇವಣ್ಣ, ಜನಹಿತ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕ ಎಸ್. ಕೃಷ್ಣಕುಮಾರ್, ಬಿ.ಕುಮಾರ್, ಕೇಬಲ್ ಕಿಟ್ಟಿ, ಎಂ. ಶಿವಪ್ರಕಾಶ್, ರಾ. ಸಿದ್ಧರಾಮು, ಸುರೇಂದ್ರ ಕುಮಾರ್, ಸಿ. ಸಂತೋಷ್, ಈ.ಬಸವರಾಜು ಮುಂತಾದವರು ಹಾಜರಿದ್ದರು.

 

 

 

andolana

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago