ಜಿಲ್ಲೆಗಳು

ಕಣಗಾಲ್ ಪುಟ್ಟಣ್ಣ ಭಾರತೀಯ ಚಿತ್ರರಂಗದ ದೊಡ್ಡಣ್ಣ: ಸಾಹಿತಿ ಬನ್ನೂರು ರಾಜು

ಮೈಸೂರು: ಚಿತ್ರಬ್ರಹ್ಮ ಪುಟ್ಟಣ್ಣ ಕಣಗಾಲ್ ಅವರ ಹೆಸರಷ್ಟೇ ಪುಟ್ಟಣ್ಣನಾದರೂ ಬಣ್ಣದ ಲೋಕದ ದೈತ್ಯ ಪ್ರತಿಭೆಯಾಗಿದ್ದ ಅವರು ಬೆಳ್ಳಿತೆರೆಯ ದೊಡ್ಡಣ್ಣನೆಂದು ಸಾಹಿತಿ ಬನ್ನೂರು ಕೆ.ರಾಜು ಬಣ್ಣಿಸಿದರು.

ನಗರದ ಪಡುವಾರಹಳ್ಳಿ ಸ್ನೇಹ ಬಳಗದಿಂದ ಜಲದರ್ಶಿನಿ ಅತಿಥಿ ಗೃಹ ಆವರಣದಲ್ಲಿ ಏರ್ಪಡಿಸಿದ್ದ ಚಲನಚಿತ್ರ ನಿರ್ದೇಶಕ ಎಸ್.ಆರ್.ಪುಟ್ಟಣ್ಣ ಕಣಗಾಲರ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಪುಟ್ಟಣ್ಣನವರು ಖ್ಯಾತ ಚತ್ರೋದ್ಯಮಿ ಬಿ.ಆರ್. ಪಂತುಲು ಗರಡಿಯಲ್ಲಿ ಸಹಾಯಕ ನಿರ್ದೇಶಕರಾಗಿ ಪಳಗಿ ’ಬೆಳ್ಳಿಮೋಡ’ ಚಿತ್ರದಿಂದ ಸ್ವತಂತ್ರ ನಿರ್ದೇಶಕರಾಗಿ ತಮ್ಮ ಚಿತ್ರ ಪುಂಣ ಆರಂಭಿಸಿ ’ಮಸಣದ ಹೂ’ ಚಿತ್ರದ ತನಕ ಅಮೂಲ್ಯವಾದ ೨೪ ಕನ್ನಡ ಚಿತ್ರಗಳನ್ನು ಹಾಗೂ ತಮಿಳಿನಲ್ಲಿ ಮೂರು, ತೆಲುಗಿನಲ್ಲಿ ಮೂರು, ಮಲಾಂಳಂನಲ್ಲಿ ಆರು, ಹಿಂದಿಯಲ್ಲಿ ಒಂದು ಸೇರಿದಂತೆ ಇತರೆ ಭಾಷೆಗಳಲ್ಲಿ ೧೩ ಚಿತ್ರಗಳನ್ನು ನಿರ್ದೇಶಿಸಿ ಪ್ರಖ್ಯಾತ ಬಹುಭಾಷಾ ಚಿತ್ರ ನಿರ್ದೇಶಕರೆಂದು ದೇಶದ ಗಮನ ಸೆಳೆದವರು ಎಂದರು.

ಪುಟ್ಟಣ್ಣನವರು ವಿಶೇಷವಾಗಿ ತಮ್ಮ ಚಿತ್ರದ ಹಾಡುಗಳಿಗೆ ಆದ್ಯತೆ ನೀಡುತ್ತಿದ್ದರು. ಚಿತ್ರಗೀತೆಯಲ್ಲಿ ಒಂದಕ್ಷರದ ರಾಜಿಗೂ ಅವರು ಒಪ್ಪುತ್ತಿರಲಿಲ್ಲ. ಅದಕ್ಕೆ ಅವರ ಪ್ರತಿಯೊಂದು ಚಿತ್ರಗಳ ಗೀತೆಗಳೂ ನಿತ್ಯ ಹರಿದ್ವರ್ಣ. ಅವುಗಳನ್ನು ಆಲಿಸಿದರೆ, ದೃಶ್ಯಕಾವ್ಯದಲ್ಲಿ ನೋಡಿದರೆ ಈ ಕ್ಷಣಕ್ಕೂ ರಸ ರೋಮಾಂಚನ ಎಂದು ಹೇಳಿದರು.

ಮೈಸೂರು ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕ ಪಡುವಾರಹಳ್ಳಿ ಎಂ. ರಾಮಕೃಷ್ಣ, ಸಿ.ರೇವಣ್ಣ, ಜನಹಿತ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕ ಎಸ್. ಕೃಷ್ಣಕುಮಾರ್, ಬಿ.ಕುಮಾರ್, ಕೇಬಲ್ ಕಿಟ್ಟಿ, ಎಂ. ಶಿವಪ್ರಕಾಶ್, ರಾ. ಸಿದ್ಧರಾಮು, ಸುರೇಂದ್ರ ಕುಮಾರ್, ಸಿ. ಸಂತೋಷ್, ಈ.ಬಸವರಾಜು ಮುಂತಾದವರು ಹಾಜರಿದ್ದರು.

 

 

 

andolana

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

2 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

8 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

8 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

8 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

8 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

9 hours ago