ಜಿಲ್ಲೆಗಳು

ಕಣಗಾಲ್ ಪುಟ್ಟಣ್ಣ ಭಾರತೀಯ ಚಿತ್ರರಂಗದ ದೊಡ್ಡಣ್ಣ: ಸಾಹಿತಿ ಬನ್ನೂರು ರಾಜು

ಮೈಸೂರು: ಚಿತ್ರಬ್ರಹ್ಮ ಪುಟ್ಟಣ್ಣ ಕಣಗಾಲ್ ಅವರ ಹೆಸರಷ್ಟೇ ಪುಟ್ಟಣ್ಣನಾದರೂ ಬಣ್ಣದ ಲೋಕದ ದೈತ್ಯ ಪ್ರತಿಭೆಯಾಗಿದ್ದ ಅವರು ಬೆಳ್ಳಿತೆರೆಯ ದೊಡ್ಡಣ್ಣನೆಂದು ಸಾಹಿತಿ ಬನ್ನೂರು ಕೆ.ರಾಜು ಬಣ್ಣಿಸಿದರು.

ನಗರದ ಪಡುವಾರಹಳ್ಳಿ ಸ್ನೇಹ ಬಳಗದಿಂದ ಜಲದರ್ಶಿನಿ ಅತಿಥಿ ಗೃಹ ಆವರಣದಲ್ಲಿ ಏರ್ಪಡಿಸಿದ್ದ ಚಲನಚಿತ್ರ ನಿರ್ದೇಶಕ ಎಸ್.ಆರ್.ಪುಟ್ಟಣ್ಣ ಕಣಗಾಲರ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಪುಟ್ಟಣ್ಣನವರು ಖ್ಯಾತ ಚತ್ರೋದ್ಯಮಿ ಬಿ.ಆರ್. ಪಂತುಲು ಗರಡಿಯಲ್ಲಿ ಸಹಾಯಕ ನಿರ್ದೇಶಕರಾಗಿ ಪಳಗಿ ’ಬೆಳ್ಳಿಮೋಡ’ ಚಿತ್ರದಿಂದ ಸ್ವತಂತ್ರ ನಿರ್ದೇಶಕರಾಗಿ ತಮ್ಮ ಚಿತ್ರ ಪುಂಣ ಆರಂಭಿಸಿ ’ಮಸಣದ ಹೂ’ ಚಿತ್ರದ ತನಕ ಅಮೂಲ್ಯವಾದ ೨೪ ಕನ್ನಡ ಚಿತ್ರಗಳನ್ನು ಹಾಗೂ ತಮಿಳಿನಲ್ಲಿ ಮೂರು, ತೆಲುಗಿನಲ್ಲಿ ಮೂರು, ಮಲಾಂಳಂನಲ್ಲಿ ಆರು, ಹಿಂದಿಯಲ್ಲಿ ಒಂದು ಸೇರಿದಂತೆ ಇತರೆ ಭಾಷೆಗಳಲ್ಲಿ ೧೩ ಚಿತ್ರಗಳನ್ನು ನಿರ್ದೇಶಿಸಿ ಪ್ರಖ್ಯಾತ ಬಹುಭಾಷಾ ಚಿತ್ರ ನಿರ್ದೇಶಕರೆಂದು ದೇಶದ ಗಮನ ಸೆಳೆದವರು ಎಂದರು.

ಪುಟ್ಟಣ್ಣನವರು ವಿಶೇಷವಾಗಿ ತಮ್ಮ ಚಿತ್ರದ ಹಾಡುಗಳಿಗೆ ಆದ್ಯತೆ ನೀಡುತ್ತಿದ್ದರು. ಚಿತ್ರಗೀತೆಯಲ್ಲಿ ಒಂದಕ್ಷರದ ರಾಜಿಗೂ ಅವರು ಒಪ್ಪುತ್ತಿರಲಿಲ್ಲ. ಅದಕ್ಕೆ ಅವರ ಪ್ರತಿಯೊಂದು ಚಿತ್ರಗಳ ಗೀತೆಗಳೂ ನಿತ್ಯ ಹರಿದ್ವರ್ಣ. ಅವುಗಳನ್ನು ಆಲಿಸಿದರೆ, ದೃಶ್ಯಕಾವ್ಯದಲ್ಲಿ ನೋಡಿದರೆ ಈ ಕ್ಷಣಕ್ಕೂ ರಸ ರೋಮಾಂಚನ ಎಂದು ಹೇಳಿದರು.

ಮೈಸೂರು ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕ ಪಡುವಾರಹಳ್ಳಿ ಎಂ. ರಾಮಕೃಷ್ಣ, ಸಿ.ರೇವಣ್ಣ, ಜನಹಿತ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕ ಎಸ್. ಕೃಷ್ಣಕುಮಾರ್, ಬಿ.ಕುಮಾರ್, ಕೇಬಲ್ ಕಿಟ್ಟಿ, ಎಂ. ಶಿವಪ್ರಕಾಶ್, ರಾ. ಸಿದ್ಧರಾಮು, ಸುರೇಂದ್ರ ಕುಮಾರ್, ಸಿ. ಸಂತೋಷ್, ಈ.ಬಸವರಾಜು ಮುಂತಾದವರು ಹಾಜರಿದ್ದರು.

 

 

 

andolana

Recent Posts

ಶ್ರೀರಂಗಪಟ್ಟಣ | ನಟೋರಿಯಸ್ ರೌಡಿಶೀಟರ್‌ ಬರ್ಬರ ಹತ್ಯೆ

ಶ್ರೀರಂಗಪಟ್ಟಣ  : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…

4 hours ago

ಅರ್ಜುನ ಆನೆ ಸ್ಮಾರಕ ಲೋಕರ್ಪಣೆ

ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…

4 hours ago

ಅಮೃತ್‌ಸರ, ಜಲಂಧರ್‌ನಲ್ಲಿ ಸ್ಫೋಟ : ಪಂಜಾಬ್‌ನಲ್ಲಿ ಕಟ್ಟೆಚ್ಚರ

ಅಮೃತ್‌ಸರ : ಪಂಜಾಬ್‌ನ ಅಮೃತ್‌ಸರ್ ಮತ್ತು ಜಲಂಧರ್‌ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…

5 hours ago

ದುಬಾರೆಯಲ್ಲಿ ತೂಗು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ ಈಶ್ವರ ಖಂಡ್ರೆ

7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ :  ವನ್ಯಜೀವಿಗಳ ಸಂಖ್ಯೆ ದಿನದಿಂದ…

5 hours ago

ಒಳಮೀಸಲಾತಿ ಜಾರಿ ಸರ್ಕಾರದ ಐತಿಹಾಸಿಕ ತೀರ್ಮಾನ : ಸಿಎಂ ಪ್ರತಿಪಾದನೆ

ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್‌ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…

5 hours ago

ಮೈಸೂರು | ಉದ್ದೇಶಿತ ಮೇಲ್ಸೇತುವೆ ಪ್ರದೇಶಕ್ಕೆ ಈಶ್ವರ ಖಂಡ್ರೆ ಭೇಟಿ, ಪರಿಶೀಲನೆ

ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…

5 hours ago