ಜಿಲ್ಲೆಗಳು

ಕಣಗಾಲ್ ಪುಟ್ಟಣ್ಣ ಭಾರತೀಯ ಚಿತ್ರರಂಗದ ದೊಡ್ಡಣ್ಣ: ಸಾಹಿತಿ ಬನ್ನೂರು ರಾಜು

ಮೈಸೂರು: ಚಿತ್ರಬ್ರಹ್ಮ ಪುಟ್ಟಣ್ಣ ಕಣಗಾಲ್ ಅವರ ಹೆಸರಷ್ಟೇ ಪುಟ್ಟಣ್ಣನಾದರೂ ಬಣ್ಣದ ಲೋಕದ ದೈತ್ಯ ಪ್ರತಿಭೆಯಾಗಿದ್ದ ಅವರು ಬೆಳ್ಳಿತೆರೆಯ ದೊಡ್ಡಣ್ಣನೆಂದು ಸಾಹಿತಿ ಬನ್ನೂರು ಕೆ.ರಾಜು ಬಣ್ಣಿಸಿದರು.

ನಗರದ ಪಡುವಾರಹಳ್ಳಿ ಸ್ನೇಹ ಬಳಗದಿಂದ ಜಲದರ್ಶಿನಿ ಅತಿಥಿ ಗೃಹ ಆವರಣದಲ್ಲಿ ಏರ್ಪಡಿಸಿದ್ದ ಚಲನಚಿತ್ರ ನಿರ್ದೇಶಕ ಎಸ್.ಆರ್.ಪುಟ್ಟಣ್ಣ ಕಣಗಾಲರ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಪುಟ್ಟಣ್ಣನವರು ಖ್ಯಾತ ಚತ್ರೋದ್ಯಮಿ ಬಿ.ಆರ್. ಪಂತುಲು ಗರಡಿಯಲ್ಲಿ ಸಹಾಯಕ ನಿರ್ದೇಶಕರಾಗಿ ಪಳಗಿ ’ಬೆಳ್ಳಿಮೋಡ’ ಚಿತ್ರದಿಂದ ಸ್ವತಂತ್ರ ನಿರ್ದೇಶಕರಾಗಿ ತಮ್ಮ ಚಿತ್ರ ಪುಂಣ ಆರಂಭಿಸಿ ’ಮಸಣದ ಹೂ’ ಚಿತ್ರದ ತನಕ ಅಮೂಲ್ಯವಾದ ೨೪ ಕನ್ನಡ ಚಿತ್ರಗಳನ್ನು ಹಾಗೂ ತಮಿಳಿನಲ್ಲಿ ಮೂರು, ತೆಲುಗಿನಲ್ಲಿ ಮೂರು, ಮಲಾಂಳಂನಲ್ಲಿ ಆರು, ಹಿಂದಿಯಲ್ಲಿ ಒಂದು ಸೇರಿದಂತೆ ಇತರೆ ಭಾಷೆಗಳಲ್ಲಿ ೧೩ ಚಿತ್ರಗಳನ್ನು ನಿರ್ದೇಶಿಸಿ ಪ್ರಖ್ಯಾತ ಬಹುಭಾಷಾ ಚಿತ್ರ ನಿರ್ದೇಶಕರೆಂದು ದೇಶದ ಗಮನ ಸೆಳೆದವರು ಎಂದರು.

ಪುಟ್ಟಣ್ಣನವರು ವಿಶೇಷವಾಗಿ ತಮ್ಮ ಚಿತ್ರದ ಹಾಡುಗಳಿಗೆ ಆದ್ಯತೆ ನೀಡುತ್ತಿದ್ದರು. ಚಿತ್ರಗೀತೆಯಲ್ಲಿ ಒಂದಕ್ಷರದ ರಾಜಿಗೂ ಅವರು ಒಪ್ಪುತ್ತಿರಲಿಲ್ಲ. ಅದಕ್ಕೆ ಅವರ ಪ್ರತಿಯೊಂದು ಚಿತ್ರಗಳ ಗೀತೆಗಳೂ ನಿತ್ಯ ಹರಿದ್ವರ್ಣ. ಅವುಗಳನ್ನು ಆಲಿಸಿದರೆ, ದೃಶ್ಯಕಾವ್ಯದಲ್ಲಿ ನೋಡಿದರೆ ಈ ಕ್ಷಣಕ್ಕೂ ರಸ ರೋಮಾಂಚನ ಎಂದು ಹೇಳಿದರು.

ಮೈಸೂರು ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕ ಪಡುವಾರಹಳ್ಳಿ ಎಂ. ರಾಮಕೃಷ್ಣ, ಸಿ.ರೇವಣ್ಣ, ಜನಹಿತ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕ ಎಸ್. ಕೃಷ್ಣಕುಮಾರ್, ಬಿ.ಕುಮಾರ್, ಕೇಬಲ್ ಕಿಟ್ಟಿ, ಎಂ. ಶಿವಪ್ರಕಾಶ್, ರಾ. ಸಿದ್ಧರಾಮು, ಸುರೇಂದ್ರ ಕುಮಾರ್, ಸಿ. ಸಂತೋಷ್, ಈ.ಬಸವರಾಜು ಮುಂತಾದವರು ಹಾಜರಿದ್ದರು.

 

 

 

andolana

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

11 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

12 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

13 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

14 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

14 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

15 hours ago