ಜಿಲ್ಲೆಗಳು

ಕನಕದಾಸರ ಜಯಂತಿ ಅಂಗವಾಗಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ

ಮೈಸೂರು : ನಗರದ ದಸರಾ ವಸ್ತು ಪ್ರದರ್ಶನದಲ್ಲಿ ಇಂದು ಕನಕದಾಸರ 535ನೇ ಜಯಂತಿಯ ಅಂಗವಾಗಿ ಪಿ ಕಾಳಿಂಗರಾವ್ ಗಾನ ಮಂಟಪದಲ್ಲಿ ವಿದ್ವಾನ್ ರಘುರಾಮ್ ತಂಡದವರ ವತಿಯಿಂದ ಭಾವ ರಾಗ ತಾಳ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಯಿತು.

ಕರ್ನಾಟಕ ವಸ್ತುಪ್ರದರ್ಶನ‌ ಪ್ರಾಧಿಕಾರದ ಅಧ್ಯಕ್ಷರಾದ ಮಿರ್ಲೆ ಶ್ರೀನಿವಾಸ ಗೌಡರವರು ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಂತರ ಕರ್ನಾಟಕ ವಸ್ತುಪ್ರದರ್ಶನ‌ ಪ್ರಾಧಿಕಾರದ ಅಧ್ಯಕ್ಷರಾದ ಮಿರ್ಲೆ ಶ್ರೀನಿವಾಸ ಗೌಡ ರವರು ಮಾತನಾಡಿ ಕನಕದಾಸರು ಭಕ್ತಿಪಂಥದ ಹರಿದಾದರಲ್ಲಿ ಒಬ್ಬರು, ಉಡುಪಿಯ ವ್ಯಾಸರಾಯರ ಶಿಷ್ಯರಾಗಿ ಕಾಗಿನೆಲೆ ಆದಿಕೇಶವ ಅಂಕಿತನಾಮದ ಮೂಲಕ ಸಮಾಜದ ಅಂಕುಡೊಂಕುಗಳನ್ನ ಸರಿಪಡಿಸಲು ತಮ್ಮ ಕೀರ್ತನೆಗಳ ಮೂಲಕ ಸಮಸಮಾಜವನ್ನ ನಿರ್ಮಿಸಿದ ಮಹಾನ್ ಸಂತ, ತತ್ವಜ್ಞಾನಿ, ಕವಿಗಳಾದ ಕನಕದಾಸರು 15-16ನೇ ಶತಮಾನದಲ್ಲಿ ಭಕ್ತಿಮಾರ್ಗವನ್ನ ಜನಸಮೂಹಕ್ಕೆ ಸಾರಿದರು, ಮಹಾಕಾವ್ಯಕೃತಿಗಳಾದ ಮೋಹನ ತರಂಗಿಣಿ, ರಾಮಧಾನ್ಯ ಚರಿತೆ, ನಳಚರಿತ್ರೆ ಹರಿಭಕ್ತಿಸಾಗರ, ನೃಸಿಂಸ್ತವ ಮತ್ತು 316ಕ್ಕೂ ಹೆಚ್ಚು ಕೀರ್ತನೆಗಳನ್ನ ರಚಿಸಿ ಕನ್ನಡ ಭಾಷೆ ಸಾಹಿತ್ಯ ಲೋಕವನ್ನ ಶ್ರೀಮಂತಗೊಳಿಸಿದ್ದಾರೆ ಎಂದರು.


ಸಂಗೀತ ಪಕ್ಕವಾದ್ಯದಲ್ಲಿ ತಬಲವಾದನದಲ್ಲಿ ವಿದ್ವಾನ್ ನಾಗರಾಜ್, ಕೀಬೋರ್ಡ್ ನಲ್ಲಿ ರವಿಶಂಕರ್, ರಿದಂ ಪ್ಯಾಡ್ ನಲ್ಲಿ ಶ್ರೀನಿವಾಸ್ ಸೇರಿದಂತೆ ಭಾವರಾಗತಾಳ ಸಂಗೀತ ಶಾಲೆಯ ಮಕ್ಕಳು ಭಾಗವಹಿಸಿದ್ದರು.

ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಮಿರ್ಲೆ ಶ್ರೀನಿವಾಸಗೌಡ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ರುದ್ರೇಶ್, ಫನ್ ವರ್ಲ್ಡ್‌ ರೆಸಾರ್ಟ್ ಮುಖ್ಯಸ್ಥಸರಾದ ಮಲ್ಲಿಕಾರ್ಜುನ, ಕಾಯಕ ಯೋಗಿ ವಿಕಾಸ ವೇದಿಕೆ ಅಧ್ಯಕ್ಷರಾದ ಡಾ.‌ಮಾಲೇಗೌಡ, ಪ್ರಧಾನಕಾರ್ಯದರ್ಶಿ ಪುರುಷೋತ್ತಮ್ ಮರೀಗೌಡ, ನಿರ್ದೇಶಕರಾದ ರೇವಣ್ಣ, ನಿರೂಪಕ ಅಜಯ್ ಶಾಸ್ತ್ರಿ, ತಿಮ್ಮೇಗೌಡ, ಮಾದೇಸ್ವಾಮಿ, ಮಾದೇಶ್, ಡಾ.ಗೋಪಿ, ಪುರುಷೋತ್ತಮ್, ಬಸವಾರಜು ಉಪನ್ಯಾಸಕರಾದ ನಿಂಗಪ್ಪ ಇನ್ನಿತರರು ಇದ್ದರು

andolanait

Recent Posts

ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಜತ್‌ ವಿರುದ್ಧ ಬೆಂಗಳೂರಿನ ಕೆ.ಆರ್.‌ಪುರಂ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.…

2 hours ago

ಸಿಎಂ ಸಿದ್ದರಾಮಯ್ಯ ಅವರ ಇಂದಿನ ಮೈಸೂರು ಜಿಲ್ಲಾ ಪ್ರವಾಸ ಕಾರ್ಯಕ್ರಮ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ. ಇಂದು ಬೆಳಗ್ಗೆ 11:40ಕ್ಕೆ ಮೈಸೂರು ಜಿಲ್ಲೆಯ ವರುಣದ…

2 hours ago

ಓದುಗರ ಪತ್ರ: ಯುದ್ಧ ವಿನಾಶಕಾರಿ!

ಯುದ್ಧ ವಿನಾಶಕಾರಿ! ನಿಲ್ಲುವಂತೆ ಕಾಣುವುದಿಲ್ಲ ಕೊಲ್ಲಿ ರಾಷ್ಟ್ರಗಳ ಸಂಘರ್ಷ! ಬದಲಿಗೆ ವಿಸ್ತರಿಸಿರುವುದು ನೋವು ಸಂಕಟದ ಸಂಗತಿ! ಗೆಲ್ಲಲಾಗದು ದ್ವೇಷದಲಿ ಯಾರನ್ನೂ ಪ್ರೀತಿ…

2 hours ago

ಓದುಗರ ಪತ್ರ: ಯಶಸ್ವಿನಿ : ಡಯಾಲಿಸಿಸ್ ವೆಚ್ಚ ಭರಿಸಲಿ

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯಡಿಯಲ್ಲಿ ವಿಮೆ ಸೌಲಭ್ಯ ಪಡೆದಿರುವವರ ಕುಟುಂಬ ವರ್ಷಕ್ಕೆ ೫ ಲಕ್ಷರೂ. ವೆಚ್ಚದ ಚಿಕಿತ್ಸಾ ಸೌಲಭ್ಯ…

2 hours ago

ಓದುಗರ ಪತ್ರ: ರಾಜ್ಯ ಬಜೆಟ್ ಪ್ರಗತಿಯ ದಿಕ್ಸೂಚಿ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ ಮಂಡಿಸಿದ ೨೦೨೬-೨೭ನೇ ಸಾಲಿನ ಬಜೆಟ್ ಪ್ರಗತಿಯ ದಿಕ್ಸೂಚಿಯಾಗಿದೆ. ರಾಜ್ಯದ ಬಜೆಟ್ ಗಾತ್ರ ೪,೪೮,೦೦೪ ಕೋಟಿ ರೂ.…

2 hours ago

ಸರ್ವಜನ ಹಿತಕಾರಿ ಬಜೆಟ್

ಆರ್.ಟಿ.ವಿಠ್ಠಲಮೂರ್ತಿ ಸಾಮಾಜಿಕ ನ್ಯಾಯದ ರಥ ಎಳೆಯಲು ಸಿಎಂ ಗರಿಷ್ಟ ಯತ್ನ  ಬೆಂಗಳೂರು: ರಾಜ್ಯದ ಆದಾಯ ಮೂಲಗಳಿಗೆ ಹೊಡೆತ ಬಿದ್ದರೂ ಸಾಮಾಜಿಕ…

2 hours ago