ಜಿಲ್ಲೆಗಳು

ಕನಕದಾಸರ ಜಯಂತಿ ಅಂಗವಾಗಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ

ಮೈಸೂರು : ನಗರದ ದಸರಾ ವಸ್ತು ಪ್ರದರ್ಶನದಲ್ಲಿ ಇಂದು ಕನಕದಾಸರ 535ನೇ ಜಯಂತಿಯ ಅಂಗವಾಗಿ ಪಿ ಕಾಳಿಂಗರಾವ್ ಗಾನ ಮಂಟಪದಲ್ಲಿ ವಿದ್ವಾನ್ ರಘುರಾಮ್ ತಂಡದವರ ವತಿಯಿಂದ ಭಾವ ರಾಗ ತಾಳ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಯಿತು.

ಕರ್ನಾಟಕ ವಸ್ತುಪ್ರದರ್ಶನ‌ ಪ್ರಾಧಿಕಾರದ ಅಧ್ಯಕ್ಷರಾದ ಮಿರ್ಲೆ ಶ್ರೀನಿವಾಸ ಗೌಡರವರು ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಂತರ ಕರ್ನಾಟಕ ವಸ್ತುಪ್ರದರ್ಶನ‌ ಪ್ರಾಧಿಕಾರದ ಅಧ್ಯಕ್ಷರಾದ ಮಿರ್ಲೆ ಶ್ರೀನಿವಾಸ ಗೌಡ ರವರು ಮಾತನಾಡಿ ಕನಕದಾಸರು ಭಕ್ತಿಪಂಥದ ಹರಿದಾದರಲ್ಲಿ ಒಬ್ಬರು, ಉಡುಪಿಯ ವ್ಯಾಸರಾಯರ ಶಿಷ್ಯರಾಗಿ ಕಾಗಿನೆಲೆ ಆದಿಕೇಶವ ಅಂಕಿತನಾಮದ ಮೂಲಕ ಸಮಾಜದ ಅಂಕುಡೊಂಕುಗಳನ್ನ ಸರಿಪಡಿಸಲು ತಮ್ಮ ಕೀರ್ತನೆಗಳ ಮೂಲಕ ಸಮಸಮಾಜವನ್ನ ನಿರ್ಮಿಸಿದ ಮಹಾನ್ ಸಂತ, ತತ್ವಜ್ಞಾನಿ, ಕವಿಗಳಾದ ಕನಕದಾಸರು 15-16ನೇ ಶತಮಾನದಲ್ಲಿ ಭಕ್ತಿಮಾರ್ಗವನ್ನ ಜನಸಮೂಹಕ್ಕೆ ಸಾರಿದರು, ಮಹಾಕಾವ್ಯಕೃತಿಗಳಾದ ಮೋಹನ ತರಂಗಿಣಿ, ರಾಮಧಾನ್ಯ ಚರಿತೆ, ನಳಚರಿತ್ರೆ ಹರಿಭಕ್ತಿಸಾಗರ, ನೃಸಿಂಸ್ತವ ಮತ್ತು 316ಕ್ಕೂ ಹೆಚ್ಚು ಕೀರ್ತನೆಗಳನ್ನ ರಚಿಸಿ ಕನ್ನಡ ಭಾಷೆ ಸಾಹಿತ್ಯ ಲೋಕವನ್ನ ಶ್ರೀಮಂತಗೊಳಿಸಿದ್ದಾರೆ ಎಂದರು.


ಸಂಗೀತ ಪಕ್ಕವಾದ್ಯದಲ್ಲಿ ತಬಲವಾದನದಲ್ಲಿ ವಿದ್ವಾನ್ ನಾಗರಾಜ್, ಕೀಬೋರ್ಡ್ ನಲ್ಲಿ ರವಿಶಂಕರ್, ರಿದಂ ಪ್ಯಾಡ್ ನಲ್ಲಿ ಶ್ರೀನಿವಾಸ್ ಸೇರಿದಂತೆ ಭಾವರಾಗತಾಳ ಸಂಗೀತ ಶಾಲೆಯ ಮಕ್ಕಳು ಭಾಗವಹಿಸಿದ್ದರು.

ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಮಿರ್ಲೆ ಶ್ರೀನಿವಾಸಗೌಡ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ರುದ್ರೇಶ್, ಫನ್ ವರ್ಲ್ಡ್‌ ರೆಸಾರ್ಟ್ ಮುಖ್ಯಸ್ಥಸರಾದ ಮಲ್ಲಿಕಾರ್ಜುನ, ಕಾಯಕ ಯೋಗಿ ವಿಕಾಸ ವೇದಿಕೆ ಅಧ್ಯಕ್ಷರಾದ ಡಾ.‌ಮಾಲೇಗೌಡ, ಪ್ರಧಾನಕಾರ್ಯದರ್ಶಿ ಪುರುಷೋತ್ತಮ್ ಮರೀಗೌಡ, ನಿರ್ದೇಶಕರಾದ ರೇವಣ್ಣ, ನಿರೂಪಕ ಅಜಯ್ ಶಾಸ್ತ್ರಿ, ತಿಮ್ಮೇಗೌಡ, ಮಾದೇಸ್ವಾಮಿ, ಮಾದೇಶ್, ಡಾ.ಗೋಪಿ, ಪುರುಷೋತ್ತಮ್, ಬಸವಾರಜು ಉಪನ್ಯಾಸಕರಾದ ನಿಂಗಪ್ಪ ಇನ್ನಿತರರು ಇದ್ದರು

andolanait

Recent Posts

ಆಕಸ್ಮಿಕ ಬೆಂಕಿ : ಒಕ್ಕಣೆ ಕಣದ ರಾಗಿ ಫಸಲು ನಾಸ

ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…

8 hours ago

ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರು-ಪೇರು ; ಸದನ ಕಲಾಪಗಳಿಂದ ದೂರ ಉಳಿದ ಸಿಎಂ

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…

8 hours ago

ಶ್ರೀಕಂಠೇಶ್ವರ ದೇವಾಲಯದಲ್ಲಿ ಅಕ್ರಮ?; ತನಿಖೆ ಆರಂಭಿಸಿದ ಎಸಿ ತಂಡ

ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…

8 hours ago

ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…

8 hours ago

ಧರ್ಮಸ್ಥಳ ಪ್ರಕರಣ : ಚಿನ್ನಯ್ಯಗೆ ಕೊನೆಗೂ ಬಿಡುಗಡೆ ಭಾಗ್ಯ

ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…

8 hours ago

ಕೈಗಾರಿಕೆ ಸ್ಥಾಪನೆಗೆ 500 ಎಕರೆ ಜಾಗ ಕೊಡುತ್ತೇನೆ : ಎಚ್‌ಡಿಕೆ ಯಾವ ಕೈಗಾರಿಕೆ ತರುತ್ತಾರೋ ತರಲಿ : ಶಾಸಕ ನರೇಂದ್ರಸ್ವಾಮಿ ಸವಾಲು

ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ…

8 hours ago