ಜಿಲ್ಲೆಗಳು

ಕನಕದಾಸರ ಜಯಂತಿ ಅಂಗವಾಗಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ

ಮೈಸೂರು : ನಗರದ ದಸರಾ ವಸ್ತು ಪ್ರದರ್ಶನದಲ್ಲಿ ಇಂದು ಕನಕದಾಸರ 535ನೇ ಜಯಂತಿಯ ಅಂಗವಾಗಿ ಪಿ ಕಾಳಿಂಗರಾವ್ ಗಾನ ಮಂಟಪದಲ್ಲಿ ವಿದ್ವಾನ್ ರಘುರಾಮ್ ತಂಡದವರ ವತಿಯಿಂದ ಭಾವ ರಾಗ ತಾಳ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಯಿತು.

ಕರ್ನಾಟಕ ವಸ್ತುಪ್ರದರ್ಶನ‌ ಪ್ರಾಧಿಕಾರದ ಅಧ್ಯಕ್ಷರಾದ ಮಿರ್ಲೆ ಶ್ರೀನಿವಾಸ ಗೌಡರವರು ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಂತರ ಕರ್ನಾಟಕ ವಸ್ತುಪ್ರದರ್ಶನ‌ ಪ್ರಾಧಿಕಾರದ ಅಧ್ಯಕ್ಷರಾದ ಮಿರ್ಲೆ ಶ್ರೀನಿವಾಸ ಗೌಡ ರವರು ಮಾತನಾಡಿ ಕನಕದಾಸರು ಭಕ್ತಿಪಂಥದ ಹರಿದಾದರಲ್ಲಿ ಒಬ್ಬರು, ಉಡುಪಿಯ ವ್ಯಾಸರಾಯರ ಶಿಷ್ಯರಾಗಿ ಕಾಗಿನೆಲೆ ಆದಿಕೇಶವ ಅಂಕಿತನಾಮದ ಮೂಲಕ ಸಮಾಜದ ಅಂಕುಡೊಂಕುಗಳನ್ನ ಸರಿಪಡಿಸಲು ತಮ್ಮ ಕೀರ್ತನೆಗಳ ಮೂಲಕ ಸಮಸಮಾಜವನ್ನ ನಿರ್ಮಿಸಿದ ಮಹಾನ್ ಸಂತ, ತತ್ವಜ್ಞಾನಿ, ಕವಿಗಳಾದ ಕನಕದಾಸರು 15-16ನೇ ಶತಮಾನದಲ್ಲಿ ಭಕ್ತಿಮಾರ್ಗವನ್ನ ಜನಸಮೂಹಕ್ಕೆ ಸಾರಿದರು, ಮಹಾಕಾವ್ಯಕೃತಿಗಳಾದ ಮೋಹನ ತರಂಗಿಣಿ, ರಾಮಧಾನ್ಯ ಚರಿತೆ, ನಳಚರಿತ್ರೆ ಹರಿಭಕ್ತಿಸಾಗರ, ನೃಸಿಂಸ್ತವ ಮತ್ತು 316ಕ್ಕೂ ಹೆಚ್ಚು ಕೀರ್ತನೆಗಳನ್ನ ರಚಿಸಿ ಕನ್ನಡ ಭಾಷೆ ಸಾಹಿತ್ಯ ಲೋಕವನ್ನ ಶ್ರೀಮಂತಗೊಳಿಸಿದ್ದಾರೆ ಎಂದರು.


ಸಂಗೀತ ಪಕ್ಕವಾದ್ಯದಲ್ಲಿ ತಬಲವಾದನದಲ್ಲಿ ವಿದ್ವಾನ್ ನಾಗರಾಜ್, ಕೀಬೋರ್ಡ್ ನಲ್ಲಿ ರವಿಶಂಕರ್, ರಿದಂ ಪ್ಯಾಡ್ ನಲ್ಲಿ ಶ್ರೀನಿವಾಸ್ ಸೇರಿದಂತೆ ಭಾವರಾಗತಾಳ ಸಂಗೀತ ಶಾಲೆಯ ಮಕ್ಕಳು ಭಾಗವಹಿಸಿದ್ದರು.

ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಮಿರ್ಲೆ ಶ್ರೀನಿವಾಸಗೌಡ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ರುದ್ರೇಶ್, ಫನ್ ವರ್ಲ್ಡ್‌ ರೆಸಾರ್ಟ್ ಮುಖ್ಯಸ್ಥಸರಾದ ಮಲ್ಲಿಕಾರ್ಜುನ, ಕಾಯಕ ಯೋಗಿ ವಿಕಾಸ ವೇದಿಕೆ ಅಧ್ಯಕ್ಷರಾದ ಡಾ.‌ಮಾಲೇಗೌಡ, ಪ್ರಧಾನಕಾರ್ಯದರ್ಶಿ ಪುರುಷೋತ್ತಮ್ ಮರೀಗೌಡ, ನಿರ್ದೇಶಕರಾದ ರೇವಣ್ಣ, ನಿರೂಪಕ ಅಜಯ್ ಶಾಸ್ತ್ರಿ, ತಿಮ್ಮೇಗೌಡ, ಮಾದೇಸ್ವಾಮಿ, ಮಾದೇಶ್, ಡಾ.ಗೋಪಿ, ಪುರುಷೋತ್ತಮ್, ಬಸವಾರಜು ಉಪನ್ಯಾಸಕರಾದ ನಿಂಗಪ್ಪ ಇನ್ನಿತರರು ಇದ್ದರು

andolanait

Recent Posts

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

30 mins ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

35 mins ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

44 mins ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

1 hour ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

2 hours ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 hours ago