ಜಿಲ್ಲೆಗಳು

ಕನಕದಾಸರ ಜಯಂತಿ ಅಂಗವಾಗಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ

ಮೈಸೂರು : ನಗರದ ದಸರಾ ವಸ್ತು ಪ್ರದರ್ಶನದಲ್ಲಿ ಇಂದು ಕನಕದಾಸರ 535ನೇ ಜಯಂತಿಯ ಅಂಗವಾಗಿ ಪಿ ಕಾಳಿಂಗರಾವ್ ಗಾನ ಮಂಟಪದಲ್ಲಿ ವಿದ್ವಾನ್ ರಘುರಾಮ್ ತಂಡದವರ ವತಿಯಿಂದ ಭಾವ ರಾಗ ತಾಳ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಯಿತು.

ಕರ್ನಾಟಕ ವಸ್ತುಪ್ರದರ್ಶನ‌ ಪ್ರಾಧಿಕಾರದ ಅಧ್ಯಕ್ಷರಾದ ಮಿರ್ಲೆ ಶ್ರೀನಿವಾಸ ಗೌಡರವರು ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಂತರ ಕರ್ನಾಟಕ ವಸ್ತುಪ್ರದರ್ಶನ‌ ಪ್ರಾಧಿಕಾರದ ಅಧ್ಯಕ್ಷರಾದ ಮಿರ್ಲೆ ಶ್ರೀನಿವಾಸ ಗೌಡ ರವರು ಮಾತನಾಡಿ ಕನಕದಾಸರು ಭಕ್ತಿಪಂಥದ ಹರಿದಾದರಲ್ಲಿ ಒಬ್ಬರು, ಉಡುಪಿಯ ವ್ಯಾಸರಾಯರ ಶಿಷ್ಯರಾಗಿ ಕಾಗಿನೆಲೆ ಆದಿಕೇಶವ ಅಂಕಿತನಾಮದ ಮೂಲಕ ಸಮಾಜದ ಅಂಕುಡೊಂಕುಗಳನ್ನ ಸರಿಪಡಿಸಲು ತಮ್ಮ ಕೀರ್ತನೆಗಳ ಮೂಲಕ ಸಮಸಮಾಜವನ್ನ ನಿರ್ಮಿಸಿದ ಮಹಾನ್ ಸಂತ, ತತ್ವಜ್ಞಾನಿ, ಕವಿಗಳಾದ ಕನಕದಾಸರು 15-16ನೇ ಶತಮಾನದಲ್ಲಿ ಭಕ್ತಿಮಾರ್ಗವನ್ನ ಜನಸಮೂಹಕ್ಕೆ ಸಾರಿದರು, ಮಹಾಕಾವ್ಯಕೃತಿಗಳಾದ ಮೋಹನ ತರಂಗಿಣಿ, ರಾಮಧಾನ್ಯ ಚರಿತೆ, ನಳಚರಿತ್ರೆ ಹರಿಭಕ್ತಿಸಾಗರ, ನೃಸಿಂಸ್ತವ ಮತ್ತು 316ಕ್ಕೂ ಹೆಚ್ಚು ಕೀರ್ತನೆಗಳನ್ನ ರಚಿಸಿ ಕನ್ನಡ ಭಾಷೆ ಸಾಹಿತ್ಯ ಲೋಕವನ್ನ ಶ್ರೀಮಂತಗೊಳಿಸಿದ್ದಾರೆ ಎಂದರು.


ಸಂಗೀತ ಪಕ್ಕವಾದ್ಯದಲ್ಲಿ ತಬಲವಾದನದಲ್ಲಿ ವಿದ್ವಾನ್ ನಾಗರಾಜ್, ಕೀಬೋರ್ಡ್ ನಲ್ಲಿ ರವಿಶಂಕರ್, ರಿದಂ ಪ್ಯಾಡ್ ನಲ್ಲಿ ಶ್ರೀನಿವಾಸ್ ಸೇರಿದಂತೆ ಭಾವರಾಗತಾಳ ಸಂಗೀತ ಶಾಲೆಯ ಮಕ್ಕಳು ಭಾಗವಹಿಸಿದ್ದರು.

ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಮಿರ್ಲೆ ಶ್ರೀನಿವಾಸಗೌಡ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ರುದ್ರೇಶ್, ಫನ್ ವರ್ಲ್ಡ್‌ ರೆಸಾರ್ಟ್ ಮುಖ್ಯಸ್ಥಸರಾದ ಮಲ್ಲಿಕಾರ್ಜುನ, ಕಾಯಕ ಯೋಗಿ ವಿಕಾಸ ವೇದಿಕೆ ಅಧ್ಯಕ್ಷರಾದ ಡಾ.‌ಮಾಲೇಗೌಡ, ಪ್ರಧಾನಕಾರ್ಯದರ್ಶಿ ಪುರುಷೋತ್ತಮ್ ಮರೀಗೌಡ, ನಿರ್ದೇಶಕರಾದ ರೇವಣ್ಣ, ನಿರೂಪಕ ಅಜಯ್ ಶಾಸ್ತ್ರಿ, ತಿಮ್ಮೇಗೌಡ, ಮಾದೇಸ್ವಾಮಿ, ಮಾದೇಶ್, ಡಾ.ಗೋಪಿ, ಪುರುಷೋತ್ತಮ್, ಬಸವಾರಜು ಉಪನ್ಯಾಸಕರಾದ ನಿಂಗಪ್ಪ ಇನ್ನಿತರರು ಇದ್ದರು

andolanait

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

3 hours ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

3 hours ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

3 hours ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

3 hours ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

3 hours ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

3 hours ago