ಜಿಲ್ಲೆಗಳು

ಕನಕದಾಸರ ಜಯಂತಿ ಅಂಗವಾಗಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ

ಮೈಸೂರು : ನಗರದ ದಸರಾ ವಸ್ತು ಪ್ರದರ್ಶನದಲ್ಲಿ ಇಂದು ಕನಕದಾಸರ 535ನೇ ಜಯಂತಿಯ ಅಂಗವಾಗಿ ಪಿ ಕಾಳಿಂಗರಾವ್ ಗಾನ ಮಂಟಪದಲ್ಲಿ ವಿದ್ವಾನ್ ರಘುರಾಮ್ ತಂಡದವರ ವತಿಯಿಂದ ಭಾವ ರಾಗ ತಾಳ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಯಿತು.

ಕರ್ನಾಟಕ ವಸ್ತುಪ್ರದರ್ಶನ‌ ಪ್ರಾಧಿಕಾರದ ಅಧ್ಯಕ್ಷರಾದ ಮಿರ್ಲೆ ಶ್ರೀನಿವಾಸ ಗೌಡರವರು ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಂತರ ಕರ್ನಾಟಕ ವಸ್ತುಪ್ರದರ್ಶನ‌ ಪ್ರಾಧಿಕಾರದ ಅಧ್ಯಕ್ಷರಾದ ಮಿರ್ಲೆ ಶ್ರೀನಿವಾಸ ಗೌಡ ರವರು ಮಾತನಾಡಿ ಕನಕದಾಸರು ಭಕ್ತಿಪಂಥದ ಹರಿದಾದರಲ್ಲಿ ಒಬ್ಬರು, ಉಡುಪಿಯ ವ್ಯಾಸರಾಯರ ಶಿಷ್ಯರಾಗಿ ಕಾಗಿನೆಲೆ ಆದಿಕೇಶವ ಅಂಕಿತನಾಮದ ಮೂಲಕ ಸಮಾಜದ ಅಂಕುಡೊಂಕುಗಳನ್ನ ಸರಿಪಡಿಸಲು ತಮ್ಮ ಕೀರ್ತನೆಗಳ ಮೂಲಕ ಸಮಸಮಾಜವನ್ನ ನಿರ್ಮಿಸಿದ ಮಹಾನ್ ಸಂತ, ತತ್ವಜ್ಞಾನಿ, ಕವಿಗಳಾದ ಕನಕದಾಸರು 15-16ನೇ ಶತಮಾನದಲ್ಲಿ ಭಕ್ತಿಮಾರ್ಗವನ್ನ ಜನಸಮೂಹಕ್ಕೆ ಸಾರಿದರು, ಮಹಾಕಾವ್ಯಕೃತಿಗಳಾದ ಮೋಹನ ತರಂಗಿಣಿ, ರಾಮಧಾನ್ಯ ಚರಿತೆ, ನಳಚರಿತ್ರೆ ಹರಿಭಕ್ತಿಸಾಗರ, ನೃಸಿಂಸ್ತವ ಮತ್ತು 316ಕ್ಕೂ ಹೆಚ್ಚು ಕೀರ್ತನೆಗಳನ್ನ ರಚಿಸಿ ಕನ್ನಡ ಭಾಷೆ ಸಾಹಿತ್ಯ ಲೋಕವನ್ನ ಶ್ರೀಮಂತಗೊಳಿಸಿದ್ದಾರೆ ಎಂದರು.


ಸಂಗೀತ ಪಕ್ಕವಾದ್ಯದಲ್ಲಿ ತಬಲವಾದನದಲ್ಲಿ ವಿದ್ವಾನ್ ನಾಗರಾಜ್, ಕೀಬೋರ್ಡ್ ನಲ್ಲಿ ರವಿಶಂಕರ್, ರಿದಂ ಪ್ಯಾಡ್ ನಲ್ಲಿ ಶ್ರೀನಿವಾಸ್ ಸೇರಿದಂತೆ ಭಾವರಾಗತಾಳ ಸಂಗೀತ ಶಾಲೆಯ ಮಕ್ಕಳು ಭಾಗವಹಿಸಿದ್ದರು.

ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಮಿರ್ಲೆ ಶ್ರೀನಿವಾಸಗೌಡ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ರುದ್ರೇಶ್, ಫನ್ ವರ್ಲ್ಡ್‌ ರೆಸಾರ್ಟ್ ಮುಖ್ಯಸ್ಥಸರಾದ ಮಲ್ಲಿಕಾರ್ಜುನ, ಕಾಯಕ ಯೋಗಿ ವಿಕಾಸ ವೇದಿಕೆ ಅಧ್ಯಕ್ಷರಾದ ಡಾ.‌ಮಾಲೇಗೌಡ, ಪ್ರಧಾನಕಾರ್ಯದರ್ಶಿ ಪುರುಷೋತ್ತಮ್ ಮರೀಗೌಡ, ನಿರ್ದೇಶಕರಾದ ರೇವಣ್ಣ, ನಿರೂಪಕ ಅಜಯ್ ಶಾಸ್ತ್ರಿ, ತಿಮ್ಮೇಗೌಡ, ಮಾದೇಸ್ವಾಮಿ, ಮಾದೇಶ್, ಡಾ.ಗೋಪಿ, ಪುರುಷೋತ್ತಮ್, ಬಸವಾರಜು ಉಪನ್ಯಾಸಕರಾದ ನಿಂಗಪ್ಪ ಇನ್ನಿತರರು ಇದ್ದರು

andolanait

Recent Posts

ನಾಲ್ವರು ಯೋಧರು ಹುತಾತ್ಮ ; ನಕ್ಸಲರಿಟ್ಟಿದ್ದ ನೆಲಬಾಂಬ್ ನಿಷ್ಕ್ರಿಯಗೊಳಿಸುವಾಗ ದುರ್ಘಟನೆ

ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್‌ಜಿ ಯೋಧರು ಹುತಾತ್ಮರಾಗಿದ್ದಾರೆ.…

2 hours ago

ಮಂಡ್ಯ | ನೀರಿನ ಕೊಳದಲ್ಲಿ ಗೃಹಿಣಿಯ ಶವ ಪತ್ತೆ ; ಕೊಲೆ ಶಂಕೆ

ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…

2 hours ago

ಮಂಡ್ಯ ನಗರದಲ್ಲಿ ಮರಗಳ ಸಮೀಕ್ಷೆಗೆ ಅರಣ್ಯ ಸಚಿವರ ಆದೇಶ

ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…

2 hours ago

ಬಜೆಟ್ ಘೋಷಣೆ ಕಡತದಲ್ಲೇ ಉಳಿಯಬಾರದು ; ಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು : ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

3 hours ago

ಟೆಂಪೋ-ಬೈಕ್‌ ಡಿಕ್ಕಿ : ಬೈಕ್‌ ಸವಾರ ಸಾವು ; ಓರ್ವ ಗಂಭೀರ

ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…

3 hours ago

NEET UG Exam | ನಾಳೆ ನೀಟ್ ಪರೀಕ್ಷೆ ; ʼಜೀರೋ ಲೀಕ್‌ʼ ಪಾಲಿಸಿ ಜಾರಿ

ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…

4 hours ago