ಜಿಲ್ಲೆಗಳು

ಕನಕದಾಸರ ಜಯಂತಿ ಅಂಗವಾಗಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ

ಮೈಸೂರು : ನಗರದ ದಸರಾ ವಸ್ತು ಪ್ರದರ್ಶನದಲ್ಲಿ ಇಂದು ಕನಕದಾಸರ 535ನೇ ಜಯಂತಿಯ ಅಂಗವಾಗಿ ಪಿ ಕಾಳಿಂಗರಾವ್ ಗಾನ ಮಂಟಪದಲ್ಲಿ ವಿದ್ವಾನ್ ರಘುರಾಮ್ ತಂಡದವರ ವತಿಯಿಂದ ಭಾವ ರಾಗ ತಾಳ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಯಿತು.

ಕರ್ನಾಟಕ ವಸ್ತುಪ್ರದರ್ಶನ‌ ಪ್ರಾಧಿಕಾರದ ಅಧ್ಯಕ್ಷರಾದ ಮಿರ್ಲೆ ಶ್ರೀನಿವಾಸ ಗೌಡರವರು ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಂತರ ಕರ್ನಾಟಕ ವಸ್ತುಪ್ರದರ್ಶನ‌ ಪ್ರಾಧಿಕಾರದ ಅಧ್ಯಕ್ಷರಾದ ಮಿರ್ಲೆ ಶ್ರೀನಿವಾಸ ಗೌಡ ರವರು ಮಾತನಾಡಿ ಕನಕದಾಸರು ಭಕ್ತಿಪಂಥದ ಹರಿದಾದರಲ್ಲಿ ಒಬ್ಬರು, ಉಡುಪಿಯ ವ್ಯಾಸರಾಯರ ಶಿಷ್ಯರಾಗಿ ಕಾಗಿನೆಲೆ ಆದಿಕೇಶವ ಅಂಕಿತನಾಮದ ಮೂಲಕ ಸಮಾಜದ ಅಂಕುಡೊಂಕುಗಳನ್ನ ಸರಿಪಡಿಸಲು ತಮ್ಮ ಕೀರ್ತನೆಗಳ ಮೂಲಕ ಸಮಸಮಾಜವನ್ನ ನಿರ್ಮಿಸಿದ ಮಹಾನ್ ಸಂತ, ತತ್ವಜ್ಞಾನಿ, ಕವಿಗಳಾದ ಕನಕದಾಸರು 15-16ನೇ ಶತಮಾನದಲ್ಲಿ ಭಕ್ತಿಮಾರ್ಗವನ್ನ ಜನಸಮೂಹಕ್ಕೆ ಸಾರಿದರು, ಮಹಾಕಾವ್ಯಕೃತಿಗಳಾದ ಮೋಹನ ತರಂಗಿಣಿ, ರಾಮಧಾನ್ಯ ಚರಿತೆ, ನಳಚರಿತ್ರೆ ಹರಿಭಕ್ತಿಸಾಗರ, ನೃಸಿಂಸ್ತವ ಮತ್ತು 316ಕ್ಕೂ ಹೆಚ್ಚು ಕೀರ್ತನೆಗಳನ್ನ ರಚಿಸಿ ಕನ್ನಡ ಭಾಷೆ ಸಾಹಿತ್ಯ ಲೋಕವನ್ನ ಶ್ರೀಮಂತಗೊಳಿಸಿದ್ದಾರೆ ಎಂದರು.


ಸಂಗೀತ ಪಕ್ಕವಾದ್ಯದಲ್ಲಿ ತಬಲವಾದನದಲ್ಲಿ ವಿದ್ವಾನ್ ನಾಗರಾಜ್, ಕೀಬೋರ್ಡ್ ನಲ್ಲಿ ರವಿಶಂಕರ್, ರಿದಂ ಪ್ಯಾಡ್ ನಲ್ಲಿ ಶ್ರೀನಿವಾಸ್ ಸೇರಿದಂತೆ ಭಾವರಾಗತಾಳ ಸಂಗೀತ ಶಾಲೆಯ ಮಕ್ಕಳು ಭಾಗವಹಿಸಿದ್ದರು.

ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಮಿರ್ಲೆ ಶ್ರೀನಿವಾಸಗೌಡ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ರುದ್ರೇಶ್, ಫನ್ ವರ್ಲ್ಡ್‌ ರೆಸಾರ್ಟ್ ಮುಖ್ಯಸ್ಥಸರಾದ ಮಲ್ಲಿಕಾರ್ಜುನ, ಕಾಯಕ ಯೋಗಿ ವಿಕಾಸ ವೇದಿಕೆ ಅಧ್ಯಕ್ಷರಾದ ಡಾ.‌ಮಾಲೇಗೌಡ, ಪ್ರಧಾನಕಾರ್ಯದರ್ಶಿ ಪುರುಷೋತ್ತಮ್ ಮರೀಗೌಡ, ನಿರ್ದೇಶಕರಾದ ರೇವಣ್ಣ, ನಿರೂಪಕ ಅಜಯ್ ಶಾಸ್ತ್ರಿ, ತಿಮ್ಮೇಗೌಡ, ಮಾದೇಸ್ವಾಮಿ, ಮಾದೇಶ್, ಡಾ.ಗೋಪಿ, ಪುರುಷೋತ್ತಮ್, ಬಸವಾರಜು ಉಪನ್ಯಾಸಕರಾದ ನಿಂಗಪ್ಪ ಇನ್ನಿತರರು ಇದ್ದರು

andolanait

Recent Posts

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

3 hours ago

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು…

6 hours ago

ಪರಿಷತ್‌ ಚುನಾವಣೆ ; ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಜಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…

7 hours ago

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

8 hours ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

9 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

14 hours ago