Mysore
24
overcast clouds

Social Media

ಶನಿವಾರ, 13 ಜೂನ್ 2026
Light
Dark

ಕನಕದಾಸರು ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಾಕಾರರು : ಎಂ.ಆರ್. ಮಂಜುನಾಥ್

ಹನೂರು : ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರು ಒಬ್ಬರು. ಇವರು ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಾಕಾರರು ಹಾಗೂ ಸಮಾಜವಾದಿ ಚಿಂತಕರು ಆಗಿದ್ದರು ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಆರ್. ಮಂಜುನಾಥ್ ತಿಳಿಸಿದರು. ತಾಲ್ಲೂಕಿನ ಬಸಪ್ಪನ ದೊಡ್ಡಿ ಗ್ರಾಮದ ಕನಕ ಭವನದಲ್ಲಿ ಏರ್ಪಡಿಸಲಾಗಿದ್ದ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕನಕದಾಸರು ತಮ್ಮ ಕೀರ್ತನೆಗಳ ಮುಖಾಂತರ ಸಮಾಜದ ಅಂಕುಡೊಂಕುಗಳನ್ನು ಎತ್ತಿ ತೋರಿಸಿದರು. ಪುರಂದರದಾಸರು ಹಾಗೂ ಕನಕದಾಸರನ್ನು ಕನ್ನಡ ಕೀರ್ತನ ಸಾಹಿತ್ಯದ ಅಶ್ವಿನಿ ದೇವತೆಗಳೆಂದು ಬಣ್ಣಿಸಲಾಗಿದೆ. ಕನಕದಾಸರ ತತ್ವ ಆದರ್ಶಗಳು ಎಂದೆಂದಿಗೂ ಮಾದರಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಶಿವಮೂರ್ತಿ, ಬಾಬು , ಜಸ್ಸಿಂ ಪಾಷಾ, ಮಂಜೇಶ್, ಚಿನ್ನ ವೆಂಕಟ ಸೇರಿದಂತೆ ಇನ್ನಿತರ ಮುಖಂಡರುಗಳು, ಬಸಪ್ಪನ ದೊಡ್ಡಿ ಗ್ರಾಮಸ್ಥರು ಯುವಕರು ಉಪಸ್ಥಿತರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!