ಹನೂರು: ತಾಲ್ಲೂಕಿನ ಕಾಂಚಳ್ಳಿ ಗ್ರಾಮದಲ್ಲಿ ಶಬರಿಮಲೆ ಅಯ್ಯಪ್ಪ ಭಕ್ತರಿಂದ ಅಯ್ಯಪ್ಪ ಸ್ವಾಮಿ ಉತ್ಸವ ಕಾರ್ಯಕ್ರಮ ವಿಧಿ ವಿಧಾನಗಳೊಂದಿಗೆ ಜರುಗಿತು.
ಇದೇ ಸಂದರ್ಭದಲ್ಲಿ ಗುರುಸ್ವಾಮಿ ಕಾಂತರಾಜು ಮಾತನಾಡಿ ಕಳೆದ ಮೂವತ್ತು ವರ್ಷಗಳಿಂದ ನಿರಂತರವಾಗಿ ಶಬರಿಮಲೆ ಯಾತ್ರಾ ಪ್ರವಾಸ ಕೈಗೊಳ್ಳುತ್ತಿದ್ದೇವೆ. ಕಳೆದ 2 ವರ್ಷ ದೇಶಾದ್ಯಂತ ಕರೋನ ಮಹಾಮಾರಿ ವ್ಯಾಪಿಸಿದ್ದ ಹಿನ್ನೆಲೆ ಪ್ರವಾಸ ಸ್ಥಗಿತಗೊಳಿಸಲಾಗಿತ್ತು. ಇದೀಗ ಕರೋನಾ ಮಹಾಮಾರಿ ಕಡಿಮೆಯಾಗಿರುವುದರಿಂದ ಮತ್ತೆ ಶಬರಿಮಲೆ ಯಾತ್ರಾ ಪ್ರವಾಸ ಕೈಗೊಂಡಿದ್ದೇವೆ. ಗ್ರಾಮದಲ್ಲಿ ಉತ್ತಮ ಮಳೆ,ಬೆಳೆಯಾಗಿ ಜನತೆ ಸದಾ ಸಮೃದ್ಧಿಯಾಗಿರಲಿ ಎಂದು ಪ್ರತಿವರ್ಷ ವಿಶೇಷ ಪೂಜೆ ಮಾಡುತ್ತಿದ್ದೇವೆ .ಅದರಂತೆ ಈ ವರ್ಷವೂ ಸಹ ಶಬರಿಮಲೆ ಅಯ್ಯಪ್ಪ ಉತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಉತ್ಸವ ಮುಗಿದ ನಂತರ ಗ್ರಾಮಸ್ಥರಿಗೆ ಅನ್ನಸಂತರ್ಪಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಇದೇ ವೇಳೆ ಅಯ್ಯಪ್ಪ ಮಾಲಾಧಾರಿಗಳು “ಸ್ವಾಮಿಯೇ ಶರಣಂ ಅಯ್ಯಪ್ಪ” ಎಂಬ ಘೋಷಣೆಯೊಂದಿಗೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…
ನವದೆಹಲಿ: ಬೈಸರನ್ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…
ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…
ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ…
ತಿರುವನಂತಪುರಂ: ಕೇರಳದ ತ್ರಿಶೂರ್ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…