ಜಿಲ್ಲೆಗಳು

ಕಾಂಚಳ್ಳಿ ಗ್ರಾಮದಲ್ಲಿ ಅಯ್ಯಪ್ಪ ಸ್ವಾಮಿ ಉತ್ಸವ ಗ್ರಾಮಸ್ಥರಿಗೆ ಅನ್ನಸಂತರ್ಪಣೆ

ಹನೂರು: ತಾಲ್ಲೂಕಿನ ಕಾಂಚಳ್ಳಿ ಗ್ರಾಮದಲ್ಲಿ ಶಬರಿಮಲೆ ಅಯ್ಯಪ್ಪ ಭಕ್ತರಿಂದ ಅಯ್ಯಪ್ಪ ಸ್ವಾಮಿ ಉತ್ಸವ ಕಾರ್ಯಕ್ರಮ ವಿಧಿ ವಿಧಾನಗಳೊಂದಿಗೆ ಜರುಗಿತು.

ಇದೇ ಸಂದರ್ಭದಲ್ಲಿ ಗುರುಸ್ವಾಮಿ ಕಾಂತರಾಜು ಮಾತನಾಡಿ ಕಳೆದ ಮೂವತ್ತು ವರ್ಷಗಳಿಂದ ನಿರಂತರವಾಗಿ ಶಬರಿಮಲೆ ಯಾತ್ರಾ ಪ್ರವಾಸ ಕೈಗೊಳ್ಳುತ್ತಿದ್ದೇವೆ. ಕಳೆದ 2 ವರ್ಷ ದೇಶಾದ್ಯಂತ ಕರೋನ ಮಹಾಮಾರಿ ವ್ಯಾಪಿಸಿದ್ದ ಹಿನ್ನೆಲೆ ಪ್ರವಾಸ ಸ್ಥಗಿತಗೊಳಿಸಲಾಗಿತ್ತು. ಇದೀಗ ಕರೋನಾ ಮಹಾಮಾರಿ ಕಡಿಮೆಯಾಗಿರುವುದರಿಂದ ಮತ್ತೆ ಶಬರಿಮಲೆ ಯಾತ್ರಾ ಪ್ರವಾಸ ಕೈಗೊಂಡಿದ್ದೇವೆ. ಗ್ರಾಮದಲ್ಲಿ ಉತ್ತಮ ಮಳೆ,ಬೆಳೆಯಾಗಿ ಜನತೆ ಸದಾ ಸಮೃದ್ಧಿಯಾಗಿರಲಿ ಎಂದು ಪ್ರತಿವರ್ಷ ವಿಶೇಷ ಪೂಜೆ ಮಾಡುತ್ತಿದ್ದೇವೆ .ಅದರಂತೆ ಈ ವರ್ಷವೂ ಸಹ ಶಬರಿಮಲೆ ಅಯ್ಯಪ್ಪ ಉತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಉತ್ಸವ ಮುಗಿದ ನಂತರ ಗ್ರಾಮಸ್ಥರಿಗೆ ಅನ್ನಸಂತರ್ಪಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಇದೇ ವೇಳೆ ಅಯ್ಯಪ್ಪ ಮಾಲಾಧಾರಿಗಳು “ಸ್ವಾಮಿಯೇ ಶರಣಂ ಅಯ್ಯಪ್ಪ” ಎಂಬ ಘೋಷಣೆಯೊಂದಿಗೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

andolanait

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

2 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

4 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

12 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

12 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

12 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

12 hours ago