ಯಳಂದೂರು: ಜಿಲ್ಲಾದ್ಯಂತ ಹಮ್ಮಿಕೊಂಡಿದ್ದ ಕೋಟಿ ಕಂಠ ಗೀತ ಗಾಯನ ಕಾರ್ಯಕ್ರಮದ ಹಿನ್ನೆಲೆ ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು ಜೊತೆಗೂಡಿ ಸಮೂಹ ಗೀತ ಗಾಯನ ನಡೆಯಿತು.
ಮೊದಲಿಗೆ ವೇದಿಕೆಯ ಗಣ್ಯರನ್ನು ಸ್ವಾಗತಿಸಿ ನಂತರ ಕನ್ನಡ ಗೀತೆ ಗಳನ್ನು ಹಾಡಲಾಯಿತು. ಕಾರ್ಯಕ್ರಮದಲ್ಲಿ ಪಬ್ಲಿಕ್ ಶಾಲೆಯ ಉಪ ಪ್ರಾಂಶುಪಾಲರಾದ ನಂಜುಂಡಯ್ಯ ಮಾತನಾಡಿ,
ಕರ್ನಾಟಕ ರಾಜ್ಯೋತ್ಸವದ ಪೂರ್ವವಾಗಿ ಶುಕ್ರವಾರ ಏಕಕಾಲದಲ್ಲಿ ಕೋಟಿ ಕಂಠ ಗೀತ ಗಾಯನ ಕಾರ್ಯಕ್ರಮವನ್ನು ಜಿಲ್ಲಾದ್ಯಂತ ಆಯೋಜಿಸಲಾಗಿದೆ. ಆಗಾಗಿ ನಮ್ಮ ಪಬ್ಲಿಕ್ ಶಾಲೆಯಲ್ಲಿ ಆಯೋಜನೆ ಮಾಡಲಾಗಿದೆ ಎಂದರು.
ನಾಡು ನುಡಿಯ ಶ್ರೇಷ್ಠತೆಯನ್ನು ಸಾರುವ ನನ್ನ ನಾಡು-ನನ್ನ ಹಾಡು ಎಂಬ ಶೀರ್ಷಿಕೆಯಡಿ ಕನ್ನಡದ ಆಯ್ದ 6 ಗೀತೆಗಳ ಸಮೂಹ ಗಾಯನ ಏರ್ಪಾಡು ಮಾಡಲಾಗಿದೆ ಎಂದರು.
ರಾಷ್ಟ್ರಕವಿ ಕುವೆಂಪು ಅವರ ನಾಡಗೀತೆಯಾದ ಜಯಭಾರತ ಜನನಿಯ ತನುಜಾತೆ ಹಾಗೂ ಹಚ್ಚೇವು ಕನ್ನಡದ ದೀಪಾ, ಬಾರಿಸು ಕನ್ನಡ ಡಿಂಡಿಮವ, ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು,ಡಾ. ಹಂಸಲೇಖ ರವರ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಗೀತೆಗಳನ್ನು ಏಕಕಾಲದಲ್ಲಿ ಹಾಡಲಾಯಿತು.
ಈ ಸಂದರ್ಭದಲ್ಲಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಉಮೇಶ್,ಉಪನ್ಯಾಸಕರಾದ ಮಹದೇವ್, ನಾಗರಾಜ್, ಸ್ಟಿಒನ್, ಶಿಕ್ಷಕರಾದ ರೇವತಿ, ರೋಹಿಣಿ, ಆಶಾ, ಹೇಮಂತ್, ಗೀತಾ,ಅಡುಗೆ ಸಿಬ್ಬಂದಿ, ಶಾಲಾ ಸಿಬ್ಬಂದಿ ಹಾಜರಿದ್ದರು.
ಮೈಸೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 2025-26ನೇ ಸಾಲಿನ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ…
ಹೊಸದಿಲ್ಲಿ : ಕರ್ನಾಟಕ ರಾಜ್ಯದಲ್ಲಿ ಭಾರತದ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ ಹಾಗೂ ಭಾರತದ ರಾಷ್ಟ್ರೀಯ ಸಹಕಾರಿ ಗ್ರಾಹಕರ…
ಮೈಸೂರು : ಜಿಲ್ಲೆಯಲ್ಲಿರುವ ಹಾಡಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ತಲುಪಿಸಿ, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ…
ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…
ಬೆಂಗಳೂರು: ನಾಳೆ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.…
ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್ ಸರ್ಕಾರ ಪರಿಹಾರ ನೀಡಿಲ್ಲ, ಮನೆ…