ಜಿಲ್ಲೆಗಳು

ಕನ್ನಡ ಎಂಬುದು ಕೇವಲ ಭಾಷೆಯಲ್ಲ; ಅದೊಂದು ಸಂಸ್ಕೃತಿ : ಡಾ.ಕವಿತಾ ರೈ

ಮಡಿಕೇರಿ: ಕನ್ನಡ ಭಾಷೆ ನಮ್ಮ ರಾಜ್ಯದ ನಮ್ಮೆಲ್ಲರ ಆತ್ಮಗೌರವದ ಹೆಮ್ಮೆಯ ಪ್ರತೀಕ. ಕನ್ನಡ ಎಂಬುದು ಕೇವಲ ಭಾಷೆಯಲ್ಲ; ಅದೊಂದು ಸಂಸ್ಕೃತಿ. ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ನಡುವೆ ಅವಿನಾಭಾವ ಸಂಬಂಧವಿದೆ ಎಂದು ಲೇಖಕರಾದ ಡಾ.ಕವಿತಾ ರೈ ತಿಳಿಸಿದರು.

ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಗುರುವಾರ ಹಮ್ಮಿಕೊಂಡಿದ್ದ ಕನ್ನಡ ನುಡಿ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಹಲವಾರು ಭಾಷೆಗಳನ್ನು ಮಾತನಾಡುವವರು ಇದ್ದಾರೆ. ಆದರೆ, ಬೇರೆ ಭಾಷೆಯವರಿಗಿರುವ ಭಾಷಾಭಿಮಾನ ಕನ್ನಡಿಗರಲ್ಲಿ ಇಲ್ಲ. ಭಾಷೆಯ ಕುರಿತು ಮೊದಲು ಪ್ರೀತಿ, ಅಭಿಮಾನ  ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಶಿಕ್ಷೃಣಾಧಿಕಾರಿ ಡಾ.ಬಿ.ಸಿ.ಸಿದ್ದೇಗೌಡ ಮಾತನಾಡಿ, ಕನ್ನಡ ಭಾಷೆಗೆ ಎರಡು ಸಾವಿರ ವರ್ಷಗಳ ಸಮೃದ್ಧ ಪರಂಪರೆ ಇದೆ. ಜಗತ್ತಿನ ಲ್ಲಿರುವ ಸುಮಾರು ಆರು ಸಾವಿರ ಭಾಷೆಗಳಲ್ಲಿ ಕನ್ನಡ ವಿಶಿಷ್ಟವಾದ ಭಾಷೆ. ಕನ್ನಡ ನಾಡಿನಲ್ಲಿ ಪರಭಾಷಿಗರ ಸಂಖ್ಯೆ ಹೆಚ್ಚುತ್ತಿದ್ದು, ಕನ್ನಡ ಮಾತನಾಡುವವರ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಬೇಸರಿಸಿದರು.
ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಡಿ.ಕೆ.ಉಷಾ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಕೆ.ಸಿ.ಡಾ.ದಯಾನಂದ ಕಾರ್ಯಕ್ರಮದ ಅಧ್ಯಕ್ಷೃತೆ ವಹಿಸಿದ್ದರು. ಲಯನ್ಸ್ ಸಂಸ್ಥೆ ಅಧ್ಯಕ್ಷೃ ಪಿ.ಟಿ.ನರೇಂದ್ರ, ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಆರ್.ರಘುರಾಜು ಹಾಜರಿದ್ದರು. ವಿದ್ಯಾರ್ಥಿಗಳು, ಶಿಕ್ಷಕರು ಪಾಲ್ಗೊಂಡಿದ್ದರು.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

7 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

7 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

7 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

7 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

7 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

7 hours ago