ಜಿಲ್ಲಾ ಕಸಾಪ ಕಾರ್ಯಕಾರಿಣಿ ಸಭೆಯಲ್ಲಿ ತೀರ್ಮಾನ
ಚಾಮರಾಜನಗರ: ಹನ್ನೇರಡನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕೊಳ್ಳೇಗಾಲ ಪಟ್ಟಣದಲ್ಲಿ ಜನವರಿ ಕೊನೆಯ ವಾರ ಅಥವಾ ಫೆಬ್ರವರಿ ಮೊದಲ ವಾರದಲ್ಲಿ ನಡೆಸಲು ಸರ್ವಾನುಮತದಿಂದ ತೀರ್ಮಾನಿಸಲಾಯಿತು.
ನಗರದ ಜಿಲ್ಲಾ ಕಸಾಪ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಎಂ ಶೈಲಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಯಿತು.
ಈ ಸಂಬoಧ ಕೊಳ್ಳೇಗಾಲ ಕ್ಷೇತ್ರದ ಶಾಸಕರಾದ ಎನ್.ಮಹೇಶ್ ಅವರೊಂದಿಗೆ ಸಮ್ಮೇಳನ ನಡೆಸುವ ಕುರಿತು ಈಗಾಗಲೆ ಚರ್ಚಿಸಲಾಗಿದೆ. ಉಳಿದಂತೆ ಅಲ್ಲಿನ ನಗರಸಭೆ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರು, ಜನಪ್ರತಿನಿಧಿಗಳು, ಅಧಿಕಾರಿಗಳು, ಸಾಹಿತ್ಯ ಹಾಗೂ ಕನ್ನಡಪರ ಸಂಘ ಸಂಸ್ಥೆಗಳ ಮುಖಂಡರ ಸಭೆ ಕರೆದು ಸ್ಥಳ, ದಿನಾಂಕ ಸೇರಿದಂತೆ ೨ ದಿನಗಳು ನಡೆಯುವ ಸಮ್ಮೇಳನದ ರೂಪುರೇಷೆಗಳನ್ನು ಚರ್ಚಿಸಲು ನಿರ್ಧರಿಸಲಾಯಿತು.
ಸಮಿತಿಯ ಮುಂದಿನ ಸಭೆಯಲ್ಲಿ ಸಮ್ಮೇಳನದ ಸರ್ವಾಧ್ಯಕ್ಷರು, ಉದ್ಘಾಟಕರು, ಅತಿಥಿಗಳು, ಇತರೆ ಅತಿಥಿಗಳನ್ನು ಆಯ್ಕೆ ಮಾಡುವ ಕುರಿತು ತೀರ್ಮಾನಿಸಲಾಯಿತು.
ಸಭೆಯಲ್ಲಿ ಕಸಾಪದ ಗೌರವ ಕಾರ್ಯದರ್ಶಿ ಮಹಾಲಿಂಗಗಿರ್ಗಿ, ನಾಗಲಕ್ಷ್ಮಿ. ಗೌರವ ಕೋಶಾಧ್ಯಕ್ಷ ನಿರಂಜನಕುಮಾರ್. ಗೌರವಾಧ್ಯಕ್ಷ ಎ.ಎಂ.ನಾಗಮಲ್ಲಪ್ಪ, ಸಂಘ ಸಂಸ್ಥೆಗಳ ಪ್ರತಿನಿಧಿ ಸೋಮಶೇಖರ ಬಿಸಲ್ವಾಡಿ, ವಿವಿಧ ತಾಲ್ಲೂಕುಗಳ ಅಧ್ಯಕ್ಷರಾದ ಸುರೇಶ್ ಋಗ್ವೇದಿ, ನಾಗರಾಜು ಕೊಂಗರಳ್ಳಿ, ಯರಿಯೂರು ನಾಗೇಂದ್ರ, ಬಿ.ಟಿ.ಜಗತ್ಪ್ರಕಾಶ್, ಉಪಾಧ್ಯಕ್ಷರಾದ ಆರ್.ಡಿ. ನಾಗರಾಜು, ಆರ್.ಎಚ್.ನಂಜುoಡಸ್ವಾಮಿ, ಮಹಿಳಾ ಸದಸ್ಯರಾದ ಗುರುಲಿಂಗಮ್ಮ ನಾಗೇಂದ್ರ, ಮಂಜುಳಾ ನಾಗರಾಜು ಭಾಗವಹಿಸಿದ್ದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…