Mysore
22
overcast clouds

Social Media

ಶನಿವಾರ, 01 ಆಗಸ್ಟ್ 2026
Light
Dark

‘ಕಾನೂನು ಜಾರಿಯಾದರಷ್ಟೆ ಕನ್ನಡ ಶಾಲೆ ಉಳಿವು ಸಾಧ್ಯ’

ಗೋಣಿಕೊಪ್ಪ: ಕನ್ನಡ ಭಾಷೆ ಬಳಕೆ ನಿಯಮ ಉಲ್ಲಂಘನೆಯ ವಿರುದ್ಧ ಕಾನೂನು ಜಾರಿಯಾದರಷ್ಟೇ ಕನ್ನಡ ಶಾಲೆಗಳು ಉಳಿಯಲು ಸಾಧ್ಯ ಎಂದು ಕನ್ನಡ ಸಾಹಿತ್ಯ ಪರಿಷತ್ತು ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ್ ಜೋಷಿ ತಿಳಿಸಿದರು.

ಪೊನ್ನಂಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸಿಲ್ವರ್ ಸ್ಕ್ತ್ಯೆ ಸಭಾಂಗಣದಲ್ಲಿ ಆಯೋಜಿಸಿದ್ದ ‘ಮಾಧ್ಯಮ ಸಂವಾದ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕನ್ನಡ ಬಳಕೆ ಉದಾಸೀನತೆಯಿಂದ ಭಾಷೆ ಅಳಿವು-ಉಳಿವಿನ ಬಗ್ಗೆ ಚರ್ಚೆ ನಡೆಯುತ್ತಿದೆ. ಫಲಕಗಳಲ್ಲಿಯೂ ಕಡ್ಡಾಯ ಕನ್ನಡ ಬಳಕೆಗೆ ಒತ್ತಾಯ ಮಾಡಲಾಗುತ್ತಿದೆ. ಆದರೆ, ಉಲ್ಲಂಘನೆ ವಿರುದ್ಧ ಕ್ರಮಕ್ಕೆ ಕಾನೂನು ಜಾರಿಯಾಗಬೇಕಿದೆ ಎಂದು ಅಭಿಪ್ರಾಯಪಟ್ಟರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!