ಮೈಸೂರು : ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ಕನ್ನಡ ರಾಜ್ಯೋತ್ಸವ ಹಾಗೂ ದೀಪಾವಳಿ ಅಂಗವಾಗಿ ಡಿ ದೇವರಾಜ ಅರಸು ರಸ್ತೆ ವಿನೋಬ ರಸ್ತೆ ಶಿವರಾಂಪೇಟೆ ಸುತ್ತಮುತ್ತಲ ಅಂಗಡಿ ಮುಂಗಟ್ಟುಗಳಿಗೆ ತೆರಳಿ ಗುಲಾಬಿ ಹೂವನ್ನು ನೀಡಿ ಕನ್ನಡ ಪದಗಳನ್ನು ಸರಿಯಾದ ರೀತಿಯಲ್ಲಿ ಬಳಸುವಂತೆ ಅಭಿಯಾನ ನಡೆಸಲಾಯಿತು.
ಇತ್ತೀಚೆಗೆ ಸ್ಥಳೀಯ ಹಬ್ಬಗಳ ಹೆಸರನ್ನು ಅಪಭ್ರಂಶ ಗೊಳಿಸುತ್ತಿರುವ ಉದಾಹರಣೆಗಳು ಹೆಚ್ಚುತ್ತಿವೆ. ಇತ್ತೀಚಿನ ದಿನಗಳಲ್ಲಿ ದೀಪಾವಳಿಯನ್ನು ದಿವಾಳಿ ಎಂದು ಶುಭ ಕೋರುವುದು ಹಾಗೆಯೇ ದಸರಾವನ್ನು ದುಸ್ಸೆರಾ ಎಂದು ತಪ್ಪಾಗಿ ಶುಭಕೋರುತ್ತಿರುವ ಅನ್ಯ ಭಾಷೆ ಶೈಲಿಯಲ್ಲಿ ಪದಬಳಕೆ ಶುಭ ಕೋರುವುದು ಖಂಡನೀಯ ಅದರ ಅರ್ಥವೇ ಬೇರೆಯಿರುತ್ತದೆ, ಹಾಗಾಗಿ ನಮ್ಮ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ನ ವತಿಯಿಂದ ಎಲ್ಲಾ ಅಂಗಡಿ ಮುಂಗಟ್ಟುಗಳಿಗೆ ತೆರಳಿ ಗುಲಾಬಿ ನೀಡಿ ಈ ಮನವಿ ಮಾಡಿಕೊಳ್ಳಲಾಯಿತು.
ಕೆಲವು ಅಂಗಡಿ ಮುಂಗಟ್ಟುಗಳಲ್ಲಿ ದೀಪಾವಳಿಯನ್ನು ದಿವಾಳಿಯೆಂದು ಬರೆದು ಶುಭಕೋರುತ್ತಿರುವದನ್ನು ಖಂಡಿಸಿ ಅವರಿಗೆ ತಿಳಿಹೇಳಿ ದಯಮಾಡಿ ಕನ್ನಡವನ್ನು ಸರಿಯಾಗಿ ಪ್ರಯೋಗಿಸಿ ಗೌರವಿಸಿ ಎಂದು ಮನವಿ ಮಾಡಿಕೊಂಡರು ನಂತರ ಮಾತನಾಡಿದ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ದೀಪಾವಳಿ ದಿವಾಳಿ”ಯಾಗದಿರಲಿ.ಹಬ್ಬದ ದಿನಗಳು ಹತ್ತಿರ ಬರುತ್ತಿದ್ದಂತೆ ಗ್ರಾಹಕರಿಗೆ ಶುಭಾಶಯ ತಿಳಿಸಲು ಹಲವಾರು ಉದ್ದಿಮೆಗಳು ಕನ್ನಡಿಗರಿಗೆ ಉತ್ತರ ಭಾರತದ ಭಾಷೆಯಲ್ಲೇ ‘ದಿವಾಳಿ ‘ಹಬ್ಬದ ಶುಭಾಶಯಗಳನ್ನು ತಿಳಿಸುತ್ತವೆ. ಬ್ಯಾಂಕ್ಗಳು .ಅದರಲ್ಲೂ ಕರ್ನಾಟಕದಲ್ಲಿಯೇ ಹುಟ್ಟಿ ಬೆಳೆದ ಬ್ಯಾಂಕ್ಗಳು .ದಿವಾಳಿ ಹಬ್ಬದ ಶುಭಾಶಯಗಳು ಎಂದು ಗ್ರಾಹಕರಿಗೆ ತಿಳಿಸುತ್ತಿರುವುದು ನೋಡಿದರೆ. ಕನ್ನಡದ ಬಗ್ಗೆ ಇವರಿಗೆಷ್ಟು ಅಭಿಮಾನವಿದೆ ಮಾಹಿತಿಯಿದೆ ಎಂಬುದರ ಬಗ್ಗೆ ಸಂದೇಹ ವ್ಯಕ್ತವಾಗುತ್ತದೆ ಎಂದರು.
ಕನ್ನಡದಲ್ಲಿ ದಿವಾಳಿ ಎಂದರೆ ಎಲ್ಲವನ್ನೂ ಕಳೆದುಕೊಳ್ಳುವುದು ಎಂದರ್ಥವಿದೆ .’ದಿವಾಳಿ ಹಬ್ಬ’ ಎಂದರೆ ಕನ್ನಡಿಗರು ಏನೆಂದು ತಿಳಿದುಕೊಳ್ಳಬೇಕು? ಅದರಲ್ಲೂ ಕನ್ನಡಿಗರು ಹಣ ಇಟ್ಟಿರುವ ಬ್ಯಾಂಕುಗಳೇ ಹೀಗೆ ಹಾರೈಸಿದರೆ! ಕನ್ನಡಿಗರಿಗೆ ಪರಿಚಯವಿರುವ ಹೆಸರುಗಳನ್ನೇ ಬಳಸಲು ತೊಂದರೆ ಏನು ?
ಈ ಬಗ್ಗೆ ಕನ್ನಡ ಪ್ರಾಧಿಕಾರವು ಕ್ರಮ ಕೈಗೊಳ್ಳಲಿ ಎಂದು ಹೇಳಿದರು.
ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ (ಬಾಳೇಬರೆ) ಪ್ರದೇಶದಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿರುವಾಗ ಗುಡ್ಡ…
ಹನೂರು : ಕೂಲಿ ಕೆಲಸಕ್ಕೆ ತೆರಳಿ ವಾಪಸ್ ಗ್ರಾಮಕ್ಕೆ ನೀರಿನಲ್ಲಿ ಈಜಿಕೊಂಡು ಬರುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ವ್ಯಕ್ತಿಯೋರ್ವ…
ನವದೆಹಲಿ : ಬಿಹಾರದ ಮುಖ್ಯಮಂತ್ರಿ, ಜೆಡಿಯು ರಾಷ್ಟ್ರೀಯ ಅಧ್ಯಕ್ಷರೂ ಆದ ನಿತೀಶ್ ಕುಮಾರ್ ಅವರು ಇಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ…
ಚಿಕ್ಕಮಗಳೂರು : ಚಂದ್ರದ್ರೋಣ ಪರ್ವತಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕೇರಳದ 10ನೇ ತರಗತಿ ವಿದ್ಯಾರ್ಥಿನಿ…
ನಂಜನಗೂಡು : ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಮಹಿಳೆಯ ಕುಟುಂಬಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ನೆರವು ನೀಡಿದ್ದಾರೆ. ನಂಜನಗೂಡು…
ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ ಪ್ರದೇಶದಲ್ಲಿ ರಸ್ತೆ ಅಗಲೀಕರಣ ಮತ್ತು ತಡೆಗೋಡೆ ದುರಸ್ತಿ ಕಾಮಗಾರಿ ನಡೆಯುತ್ತಿರುವಾಗ…