ಮೈಸೂರು : ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ಕನ್ನಡ ರಾಜ್ಯೋತ್ಸವ ಹಾಗೂ ದೀಪಾವಳಿ ಅಂಗವಾಗಿ ಡಿ ದೇವರಾಜ ಅರಸು ರಸ್ತೆ ವಿನೋಬ ರಸ್ತೆ ಶಿವರಾಂಪೇಟೆ ಸುತ್ತಮುತ್ತಲ ಅಂಗಡಿ ಮುಂಗಟ್ಟುಗಳಿಗೆ ತೆರಳಿ ಗುಲಾಬಿ ಹೂವನ್ನು ನೀಡಿ ಕನ್ನಡ ಪದಗಳನ್ನು ಸರಿಯಾದ ರೀತಿಯಲ್ಲಿ ಬಳಸುವಂತೆ ಅಭಿಯಾನ ನಡೆಸಲಾಯಿತು.
ಇತ್ತೀಚೆಗೆ ಸ್ಥಳೀಯ ಹಬ್ಬಗಳ ಹೆಸರನ್ನು ಅಪಭ್ರಂಶ ಗೊಳಿಸುತ್ತಿರುವ ಉದಾಹರಣೆಗಳು ಹೆಚ್ಚುತ್ತಿವೆ. ಇತ್ತೀಚಿನ ದಿನಗಳಲ್ಲಿ ದೀಪಾವಳಿಯನ್ನು ದಿವಾಳಿ ಎಂದು ಶುಭ ಕೋರುವುದು ಹಾಗೆಯೇ ದಸರಾವನ್ನು ದುಸ್ಸೆರಾ ಎಂದು ತಪ್ಪಾಗಿ ಶುಭಕೋರುತ್ತಿರುವ ಅನ್ಯ ಭಾಷೆ ಶೈಲಿಯಲ್ಲಿ ಪದಬಳಕೆ ಶುಭ ಕೋರುವುದು ಖಂಡನೀಯ ಅದರ ಅರ್ಥವೇ ಬೇರೆಯಿರುತ್ತದೆ, ಹಾಗಾಗಿ ನಮ್ಮ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ನ ವತಿಯಿಂದ ಎಲ್ಲಾ ಅಂಗಡಿ ಮುಂಗಟ್ಟುಗಳಿಗೆ ತೆರಳಿ ಗುಲಾಬಿ ನೀಡಿ ಈ ಮನವಿ ಮಾಡಿಕೊಳ್ಳಲಾಯಿತು.
ಕೆಲವು ಅಂಗಡಿ ಮುಂಗಟ್ಟುಗಳಲ್ಲಿ ದೀಪಾವಳಿಯನ್ನು ದಿವಾಳಿಯೆಂದು ಬರೆದು ಶುಭಕೋರುತ್ತಿರುವದನ್ನು ಖಂಡಿಸಿ ಅವರಿಗೆ ತಿಳಿಹೇಳಿ ದಯಮಾಡಿ ಕನ್ನಡವನ್ನು ಸರಿಯಾಗಿ ಪ್ರಯೋಗಿಸಿ ಗೌರವಿಸಿ ಎಂದು ಮನವಿ ಮಾಡಿಕೊಂಡರು ನಂತರ ಮಾತನಾಡಿದ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ದೀಪಾವಳಿ ದಿವಾಳಿ”ಯಾಗದಿರಲಿ.ಹಬ್ಬದ ದಿನಗಳು ಹತ್ತಿರ ಬರುತ್ತಿದ್ದಂತೆ ಗ್ರಾಹಕರಿಗೆ ಶುಭಾಶಯ ತಿಳಿಸಲು ಹಲವಾರು ಉದ್ದಿಮೆಗಳು ಕನ್ನಡಿಗರಿಗೆ ಉತ್ತರ ಭಾರತದ ಭಾಷೆಯಲ್ಲೇ ‘ದಿವಾಳಿ ‘ಹಬ್ಬದ ಶುಭಾಶಯಗಳನ್ನು ತಿಳಿಸುತ್ತವೆ. ಬ್ಯಾಂಕ್ಗಳು .ಅದರಲ್ಲೂ ಕರ್ನಾಟಕದಲ್ಲಿಯೇ ಹುಟ್ಟಿ ಬೆಳೆದ ಬ್ಯಾಂಕ್ಗಳು .ದಿವಾಳಿ ಹಬ್ಬದ ಶುಭಾಶಯಗಳು ಎಂದು ಗ್ರಾಹಕರಿಗೆ ತಿಳಿಸುತ್ತಿರುವುದು ನೋಡಿದರೆ. ಕನ್ನಡದ ಬಗ್ಗೆ ಇವರಿಗೆಷ್ಟು ಅಭಿಮಾನವಿದೆ ಮಾಹಿತಿಯಿದೆ ಎಂಬುದರ ಬಗ್ಗೆ ಸಂದೇಹ ವ್ಯಕ್ತವಾಗುತ್ತದೆ ಎಂದರು.
ಕನ್ನಡದಲ್ಲಿ ದಿವಾಳಿ ಎಂದರೆ ಎಲ್ಲವನ್ನೂ ಕಳೆದುಕೊಳ್ಳುವುದು ಎಂದರ್ಥವಿದೆ .’ದಿವಾಳಿ ಹಬ್ಬ’ ಎಂದರೆ ಕನ್ನಡಿಗರು ಏನೆಂದು ತಿಳಿದುಕೊಳ್ಳಬೇಕು? ಅದರಲ್ಲೂ ಕನ್ನಡಿಗರು ಹಣ ಇಟ್ಟಿರುವ ಬ್ಯಾಂಕುಗಳೇ ಹೀಗೆ ಹಾರೈಸಿದರೆ! ಕನ್ನಡಿಗರಿಗೆ ಪರಿಚಯವಿರುವ ಹೆಸರುಗಳನ್ನೇ ಬಳಸಲು ತೊಂದರೆ ಏನು ?
ಈ ಬಗ್ಗೆ ಕನ್ನಡ ಪ್ರಾಧಿಕಾರವು ಕ್ರಮ ಕೈಗೊಳ್ಳಲಿ ಎಂದು ಹೇಳಿದರು.
ಕೊರಿಯನ್ ಗೇಮ್ಸ್ ವ್ಯಸನದಿಂದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂದು ನಮ್ಮ ಯುವಜನತೆ ಕೆ ಪಾಪ್ ಮತ್ತು ಕೆ…
ಮೈಸೂರಿನ ಶ್ರೀರಾಂಪುರ ೨ನೇ ಹಂತದಲ್ಲಿ ನಿವೇಶನನವೊಂದು ಕಳೆದ ೨೬ ವರ್ಷಗಳಿಂದ ಖಾಲಿಬಿದ್ದಿದೆ. ಈ ಖಾಲಿ ನಿವೇಶನದಲ್ಲಿ ಅಕ್ಕಪಕ್ಕದ ಮನೆಯ ನಿವಾಸಿಗಳು…
ಮೈಸೂರು ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿರುವುದು ಸ್ವಾಗತಾರ್ಹ ಸಂಗತಿ. ಆದರೆ ಗ್ರಾಮದ ನೈಸರ್ಗಿಕ ಸಂಪತ್ತಾದ ‘ಬೆಳವಾಡಿ ಕೆರೆ’ಗೆ…
ನವೀನ್ ಡಿಸೋಜ ಜನವರಿಯಲ್ಲಿ ೬೩ ಎನ್ಡಿಪಿಎಸ್ ಪ್ರಕರಣಗಳು ದಾಖಲು; ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ಮಡಿಕೇರಿ: ಮಾದಕ ವಸ್ತುಗಳ ಮಾರಾಟ…
ಮಂಜು ಕೋಟೆ ಜಕ್ಕಹಳ್ಳಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮುಜುಗರ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರ ಎಚ್.ಡಿ.ಕೋಟೆ: ಗಿರಿಜನ ಮಕ್ಕಳ…
ಪ್ರಶಾಂತ್ ಎಸ್. ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತಕ್ಕೆ ಹಾದಿ ಎನ್.ಎಚ್.ಪಾಳ್ಯ,ಟೋಲ್ಗೇಟ್, ಶಿವಪುರ ತಿರುವಿನಲ್ಲಿ ರಿಫ್ಲೆಕ್ಟರ್,ಬ್ಯಾರಿಕೇಡ್ ಅಳವಡಿಕೆ ಅಗತ್ಯ ಮೈಸೂರು:…