ಜಿಲ್ಲೆಗಳು

ದೀಪಾವಳಿ ದಿವಾಳಿಯಾಗದಿರಲಿ, ಕನ್ನಡ ಪದಬಳಕೆ ಸರಿ ಇರಲಿ :ವಿಕ್ರಂ ಅಯ್ಯಂಗಾರ್

 ಮೈಸೂರು : ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ಕನ್ನಡ ರಾಜ್ಯೋತ್ಸವ ಹಾಗೂ ದೀಪಾವಳಿ ಅಂಗವಾಗಿ ಡಿ ದೇವರಾಜ ಅರಸು ರಸ್ತೆ ವಿನೋಬ ರಸ್ತೆ ಶಿವರಾಂಪೇಟೆ ಸುತ್ತಮುತ್ತಲ ಅಂಗಡಿ ಮುಂಗಟ್ಟುಗಳಿಗೆ ತೆರಳಿ ಗುಲಾಬಿ ಹೂವನ್ನು ನೀಡಿ ಕನ್ನಡ ಪದಗಳನ್ನು ಸರಿಯಾದ ರೀತಿಯಲ್ಲಿ ಬಳಸುವಂತೆ ಅಭಿಯಾನ ನಡೆಸಲಾಯಿತು.

ಇತ್ತೀಚೆಗೆ ಸ್ಥಳೀಯ ಹಬ್ಬಗಳ ಹೆಸರನ್ನು ಅಪಭ್ರಂಶ ಗೊಳಿಸುತ್ತಿರುವ ಉದಾಹರಣೆಗಳು ಹೆಚ್ಚುತ್ತಿವೆ. ಇತ್ತೀಚಿನ ದಿನಗಳಲ್ಲಿ ದೀಪಾವಳಿಯನ್ನು ದಿವಾಳಿ ಎಂದು ಶುಭ ಕೋರುವುದು ಹಾಗೆಯೇ ದಸರಾವನ್ನು ದುಸ್ಸೆರಾ ಎಂದು ತಪ್ಪಾಗಿ ಶುಭಕೋರುತ್ತಿರುವ ಅನ್ಯ ಭಾಷೆ ಶೈಲಿಯಲ್ಲಿ ಪದಬಳಕೆ ಶುಭ ಕೋರುವುದು ಖಂಡನೀಯ ಅದರ ಅರ್ಥವೇ ಬೇರೆಯಿರುತ್ತದೆ, ಹಾಗಾಗಿ ನಮ್ಮ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ನ ವತಿಯಿಂದ ಎಲ್ಲಾ ಅಂಗಡಿ ಮುಂಗಟ್ಟುಗಳಿಗೆ ತೆರಳಿ ಗುಲಾಬಿ ನೀಡಿ ಈ ಮನವಿ ಮಾಡಿಕೊಳ್ಳಲಾಯಿತು.
ಕೆಲವು ಅಂಗಡಿ ಮುಂಗಟ್ಟುಗಳಲ್ಲಿ ದೀಪಾವಳಿಯನ್ನು ದಿವಾಳಿಯೆಂದು ಬರೆದು ಶುಭಕೋರುತ್ತಿರುವದನ್ನು ಖಂಡಿಸಿ ಅವರಿಗೆ ತಿಳಿಹೇಳಿ ದಯಮಾಡಿ ಕನ್ನಡವನ್ನು ಸರಿಯಾಗಿ ಪ್ರಯೋಗಿಸಿ ಗೌರವಿಸಿ ಎಂದು ಮನವಿ ಮಾಡಿಕೊಂಡರು ನಂತರ ಮಾತನಾಡಿದ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ದೀಪಾವಳಿ ದಿವಾಳಿ”ಯಾಗದಿರಲಿ.ಹಬ್ಬದ ದಿನಗಳು ಹತ್ತಿರ ಬರುತ್ತಿದ್ದಂತೆ ಗ್ರಾಹಕರಿಗೆ ಶುಭಾಶಯ ತಿಳಿಸಲು ಹಲವಾರು ಉದ್ದಿಮೆಗಳು ಕನ್ನಡಿಗರಿಗೆ ಉತ್ತರ ಭಾರತದ ಭಾಷೆಯಲ್ಲೇ ‘ದಿವಾಳಿ ‘ಹಬ್ಬದ ಶುಭಾಶಯಗಳನ್ನು ತಿಳಿಸುತ್ತವೆ. ಬ್ಯಾಂಕ್‍ಗಳು .ಅದರಲ್ಲೂ ಕರ್ನಾಟಕದಲ್ಲಿಯೇ ಹುಟ್ಟಿ ಬೆಳೆದ ಬ್ಯಾಂಕ್‍ಗಳು .ದಿವಾಳಿ ಹಬ್ಬದ ಶುಭಾಶಯಗಳು ಎಂದು ಗ್ರಾಹಕರಿಗೆ ತಿಳಿಸುತ್ತಿರುವುದು ನೋಡಿದರೆ. ಕನ್ನಡದ ಬಗ್ಗೆ ಇವರಿಗೆಷ್ಟು ಅಭಿಮಾನವಿದೆ ಮಾಹಿತಿಯಿದೆ ಎಂಬುದರ ಬಗ್ಗೆ ಸಂದೇಹ ವ್ಯಕ್ತವಾಗುತ್ತದೆ ಎಂದರು.

ಕನ್ನಡದಲ್ಲಿ ದಿವಾಳಿ ಎಂದರೆ ಎಲ್ಲವನ್ನೂ ಕಳೆದುಕೊಳ್ಳುವುದು ಎಂದರ್ಥವಿದೆ .’ದಿವಾಳಿ ಹಬ್ಬ’ ಎಂದರೆ ಕನ್ನಡಿಗರು ಏನೆಂದು ತಿಳಿದುಕೊಳ್ಳಬೇಕು? ಅದರಲ್ಲೂ ಕನ್ನಡಿಗರು ಹಣ ಇಟ್ಟಿರುವ ಬ್ಯಾಂಕುಗಳೇ ಹೀಗೆ ಹಾರೈಸಿದರೆ! ಕನ್ನಡಿಗರಿಗೆ ಪರಿಚಯವಿರುವ ಹೆಸರುಗಳನ್ನೇ ಬಳಸಲು ತೊಂದರೆ ಏನು ?
ಈ ಬಗ್ಗೆ ಕನ್ನಡ ಪ್ರಾಧಿಕಾರವು ಕ್ರಮ ಕೈಗೊಳ್ಳಲಿ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ,ನಜರ್ ಬಾದ್ ನಟರಾಜ್ ,ಕೆ ಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ ,ಸಾಮಾಜಿಕ ಹೋರಾಟಗಾರ ಅಜಯ್ ಶಾಸ್ತ್ರಿ ,ಸುರೇಶ್ ಗೋಲ್ಡ್,ರಾಕೇಶ್ ಕುಂಚಿಟಿಗ , ಲಯನ್ ಶಂಕರ್ ಗುರು,ಎಸ್ ಎನ್ ರಾಜೇಶ್ ,ವಿನಯ್ ಕಣಗಾಲ್ ,ಮಂಜುನಾಥ್ ,ಸುಚೇಂದ್ರ ,ಚಕ್ರಪಾಣಿ ,ಹಾಗೂ ಇನ್ನಿತರರು ಹಾಜರಿದ್ದರು

andolanait

Recent Posts

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಪತ್ನಿ ಚನ್ನಮ್ಮ ವಿಧಿವಶ

ಬೆಂಗಳೂರು : ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ ಅವರು ಇಂದು…

31 mins ago

ʼವಿದ್ಯಾವಂತರು ಸಮುದಾಯಕ್ಕೆ ಆಸರೆಯಾಗಬೇಕುʼ

  ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಶಿಕ್ಷಣವೇ ದೇಶ ಕಟ್ಟುವ ಹಾದಿ ಎಂದು ತಿಳಿದಿದ್ದ ದೇಶಪಾಂಡೆಯವರು

ಡಾ.ಎಂ.ಡಿ.ಉಮೇಶ್‌, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…

10 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಇಂಗ್ಲೆಂಡಿನಲ್ಲಿ ಶಾಕಾಹಾರದ ದಿನಗಳು

ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…

10 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 18 ಶನಿವಾರ

10 hours ago

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

23 hours ago