ಜಿಲ್ಲೆಗಳು

ದೀಪಾವಳಿ ದಿವಾಳಿಯಾಗದಿರಲಿ, ಕನ್ನಡ ಪದಬಳಕೆ ಸರಿ ಇರಲಿ :ವಿಕ್ರಂ ಅಯ್ಯಂಗಾರ್

 ಮೈಸೂರು : ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ಕನ್ನಡ ರಾಜ್ಯೋತ್ಸವ ಹಾಗೂ ದೀಪಾವಳಿ ಅಂಗವಾಗಿ ಡಿ ದೇವರಾಜ ಅರಸು ರಸ್ತೆ ವಿನೋಬ ರಸ್ತೆ ಶಿವರಾಂಪೇಟೆ ಸುತ್ತಮುತ್ತಲ ಅಂಗಡಿ ಮುಂಗಟ್ಟುಗಳಿಗೆ ತೆರಳಿ ಗುಲಾಬಿ ಹೂವನ್ನು ನೀಡಿ ಕನ್ನಡ ಪದಗಳನ್ನು ಸರಿಯಾದ ರೀತಿಯಲ್ಲಿ ಬಳಸುವಂತೆ ಅಭಿಯಾನ ನಡೆಸಲಾಯಿತು.

ಇತ್ತೀಚೆಗೆ ಸ್ಥಳೀಯ ಹಬ್ಬಗಳ ಹೆಸರನ್ನು ಅಪಭ್ರಂಶ ಗೊಳಿಸುತ್ತಿರುವ ಉದಾಹರಣೆಗಳು ಹೆಚ್ಚುತ್ತಿವೆ. ಇತ್ತೀಚಿನ ದಿನಗಳಲ್ಲಿ ದೀಪಾವಳಿಯನ್ನು ದಿವಾಳಿ ಎಂದು ಶುಭ ಕೋರುವುದು ಹಾಗೆಯೇ ದಸರಾವನ್ನು ದುಸ್ಸೆರಾ ಎಂದು ತಪ್ಪಾಗಿ ಶುಭಕೋರುತ್ತಿರುವ ಅನ್ಯ ಭಾಷೆ ಶೈಲಿಯಲ್ಲಿ ಪದಬಳಕೆ ಶುಭ ಕೋರುವುದು ಖಂಡನೀಯ ಅದರ ಅರ್ಥವೇ ಬೇರೆಯಿರುತ್ತದೆ, ಹಾಗಾಗಿ ನಮ್ಮ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ನ ವತಿಯಿಂದ ಎಲ್ಲಾ ಅಂಗಡಿ ಮುಂಗಟ್ಟುಗಳಿಗೆ ತೆರಳಿ ಗುಲಾಬಿ ನೀಡಿ ಈ ಮನವಿ ಮಾಡಿಕೊಳ್ಳಲಾಯಿತು.
ಕೆಲವು ಅಂಗಡಿ ಮುಂಗಟ್ಟುಗಳಲ್ಲಿ ದೀಪಾವಳಿಯನ್ನು ದಿವಾಳಿಯೆಂದು ಬರೆದು ಶುಭಕೋರುತ್ತಿರುವದನ್ನು ಖಂಡಿಸಿ ಅವರಿಗೆ ತಿಳಿಹೇಳಿ ದಯಮಾಡಿ ಕನ್ನಡವನ್ನು ಸರಿಯಾಗಿ ಪ್ರಯೋಗಿಸಿ ಗೌರವಿಸಿ ಎಂದು ಮನವಿ ಮಾಡಿಕೊಂಡರು ನಂತರ ಮಾತನಾಡಿದ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ದೀಪಾವಳಿ ದಿವಾಳಿ”ಯಾಗದಿರಲಿ.ಹಬ್ಬದ ದಿನಗಳು ಹತ್ತಿರ ಬರುತ್ತಿದ್ದಂತೆ ಗ್ರಾಹಕರಿಗೆ ಶುಭಾಶಯ ತಿಳಿಸಲು ಹಲವಾರು ಉದ್ದಿಮೆಗಳು ಕನ್ನಡಿಗರಿಗೆ ಉತ್ತರ ಭಾರತದ ಭಾಷೆಯಲ್ಲೇ ‘ದಿವಾಳಿ ‘ಹಬ್ಬದ ಶುಭಾಶಯಗಳನ್ನು ತಿಳಿಸುತ್ತವೆ. ಬ್ಯಾಂಕ್‍ಗಳು .ಅದರಲ್ಲೂ ಕರ್ನಾಟಕದಲ್ಲಿಯೇ ಹುಟ್ಟಿ ಬೆಳೆದ ಬ್ಯಾಂಕ್‍ಗಳು .ದಿವಾಳಿ ಹಬ್ಬದ ಶುಭಾಶಯಗಳು ಎಂದು ಗ್ರಾಹಕರಿಗೆ ತಿಳಿಸುತ್ತಿರುವುದು ನೋಡಿದರೆ. ಕನ್ನಡದ ಬಗ್ಗೆ ಇವರಿಗೆಷ್ಟು ಅಭಿಮಾನವಿದೆ ಮಾಹಿತಿಯಿದೆ ಎಂಬುದರ ಬಗ್ಗೆ ಸಂದೇಹ ವ್ಯಕ್ತವಾಗುತ್ತದೆ ಎಂದರು.

ಕನ್ನಡದಲ್ಲಿ ದಿವಾಳಿ ಎಂದರೆ ಎಲ್ಲವನ್ನೂ ಕಳೆದುಕೊಳ್ಳುವುದು ಎಂದರ್ಥವಿದೆ .’ದಿವಾಳಿ ಹಬ್ಬ’ ಎಂದರೆ ಕನ್ನಡಿಗರು ಏನೆಂದು ತಿಳಿದುಕೊಳ್ಳಬೇಕು? ಅದರಲ್ಲೂ ಕನ್ನಡಿಗರು ಹಣ ಇಟ್ಟಿರುವ ಬ್ಯಾಂಕುಗಳೇ ಹೀಗೆ ಹಾರೈಸಿದರೆ! ಕನ್ನಡಿಗರಿಗೆ ಪರಿಚಯವಿರುವ ಹೆಸರುಗಳನ್ನೇ ಬಳಸಲು ತೊಂದರೆ ಏನು ?
ಈ ಬಗ್ಗೆ ಕನ್ನಡ ಪ್ರಾಧಿಕಾರವು ಕ್ರಮ ಕೈಗೊಳ್ಳಲಿ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ,ನಜರ್ ಬಾದ್ ನಟರಾಜ್ ,ಕೆ ಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ ,ಸಾಮಾಜಿಕ ಹೋರಾಟಗಾರ ಅಜಯ್ ಶಾಸ್ತ್ರಿ ,ಸುರೇಶ್ ಗೋಲ್ಡ್,ರಾಕೇಶ್ ಕುಂಚಿಟಿಗ , ಲಯನ್ ಶಂಕರ್ ಗುರು,ಎಸ್ ಎನ್ ರಾಜೇಶ್ ,ವಿನಯ್ ಕಣಗಾಲ್ ,ಮಂಜುನಾಥ್ ,ಸುಚೇಂದ್ರ ,ಚಕ್ರಪಾಣಿ ,ಹಾಗೂ ಇನ್ನಿತರರು ಹಾಜರಿದ್ದರು

andolanait

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ಪ್ರದೋಷ್‌ ಹೇಳಿಕೆ ದಾಖಲು ಪ್ರಕ್ರಿಯೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸಲ್ಪಟ್ಟಿರುವ 14ನೇ ಆರೋಪಿ ಪ್ರದೋಷ್ ಹೇಳಿಕೆ ದಾಖಲಿಸುವ…

2 hours ago

ಆಹಾರ ಸುರಕ್ಷತೆ ಬಗ್ಗೆ ಕಳವಳ: ತಪಾಸಣೆಗೆ ಸಚಿವ ಯು.ಟಿ.ಖಾದರ್‌ ಸೂಚನೆ

ಮಂಗಳೂರು: ಜನರಿಗೆ ಶುದ್ಧ ಆಹಾರ ಪೂರೈಸುವ ನಿಟ್ಟಿನಲ್ಲಿ ತಜ್ಞರ ತಂಡದ ತಪಾಸಣೆ ನಿರಂತರವಾಗಿ ನಡೆಯಲಿದ್ದು, ಎರಡನೇ ಬಾರಿ ಲೋಪಗಳು ಕಂಡು…

4 hours ago

ನಾಗೇಂದ್ರ ರಾಜೀನಾಮೆ; ಅನಿಲ್‌ಗೆ ಸಚಿವ ಸ್ಥಾನ ಸಿಗುವುದೇ?

ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…

10 hours ago

ಓದುಗರ ಪತ್ರ: ಮದ್ದು ಅರೆಯಲಿ ಆಳುವವರು!

ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್‌ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…

10 hours ago

ಓದುಗರ ಪತ್ರ: ಪಾದಚಾರಿ ಮಾರ್ಗಕ್ಕೂ ಅಡ್ಡಗಾಲು

ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…

10 hours ago

ಓದುಗರ ಪತ್ರ: ಈ ಶೌಚಾಲಯ ಪ್ರಾರಂಭಕ್ಕೆ ಮುಹೂರ್ತ ಬಂದಿಲ್ಲವೇ?

ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…

10 hours ago