ಹದಿನಾರು-ನಂಜನಗೂಡು-ಸರಗೂರು ರಸ್ತೆ ಸಂಪರ್ಕ
೨೭ ಕೋಟಿ ರೂ. ಅಂದಾಜು ವೆಚ್ಚ: ಸಂಪುಟ ಒಪ್ಪಿಗೆ
ಬೆಂಗಳೂರು: ಮೈಸೂರು ಜಿಲ್ಲೆ, ನಂಜನಗೂಡು ತಾಲ್ಲೂಕಿನ ಮೈಸೂರು- ಹದಿನಾರು (ರಾಜ್ಯ ಹೆದ್ದಾರಿಯಾಗಿ ಮೇಲರ್ಜೆಗೇರಿಸಲಾಗಿದೆ) ಹಾಗೂ ಶಿರ-ನಂಜನಗೂಡು ರಸ್ತೆ (ರಾಜ್ಯ ಹೆದ್ದಾರಿ-೮೪)ಗೆ ಸಂಪರ್ಕಿಸಲು ಹದಿನಾರು ಮತ್ತು ಸರಗೂರು ರಸ್ತೆಯ ಮಾರ್ಗವಾಗಿ ಕಬಿನಿ ನದಿಗೆ ಅಡ್ಡಲಾಗಿ ರೂ. ೨೭ ಕೋಟಿಗಳ ಅಂದಾಜು ಮೊತ್ತದಲ್ಲಿ ಸೇತುವೆ ನಿರ್ಮಾಣದ ಕಾಮಗಾರಿಗೆ ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ.
ಗುರುವಾರ ನಡೆದ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಸಿ. ಮಾಧುಸ್ವಾಮಿ ಮಾಹಿತಿ ನೀಡಿದರು.
ರಾಜ್ಯದ ವಿವಿಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ೩೯ ಮೊಕದ್ದಮೆಗಳನ್ನು ಹಿಂಪಡೆಯಲು ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಹಿಂಪಡೆದುಕೊಂಡ ಮೊಕದ್ದಮೆಗಳು ಗಂಭೀರ ಸ್ವರೂಪದ್ದಲ್ಲ, ಜನ ಪರ ಹೋರಾಟದಲ್ಲಿ ಪಾಲ್ಗೊಂಡವರ ವಿರುದ್ಧ ದಾಖಲಾಗಿದ್ದ ಸಾಮಾನ್ಯ ಪ್ರಕರಣಗಳಾಗಿವೆ ಎಂದು ಸ್ಪಷ್ಟಪಡಿಸಿದರು.
ಒಟ್ಟು ೪೧ ಪ್ರಕರಣಗಳಲ್ಲಿ ೨ ಪ್ರಕರಣಗಳು ಜನ ಪ್ರತಿನಿಧಿ ಕಾಯ್ದೆ ವ್ಯಾಪ್ತಿಯಲ್ಲಿ ಇರುವುದರಿಂದ ಅವನ್ನು ವಾಪಸ್ ಪಡೆಯುತ್ತಿಲ್ಲ ಎಂದು ತಿಳಿಸಿದರು.
ಆಜಾದಿ ಕಾ ಅಮೃತ್ ಮಹೋತ್ಸವ ಆಚರಣೆಯ ಅಂಗವಾಗಿ ಭಾರತ ಸರ್ಕಾರವು ನಿಗದಿಪಡಿಸಿರುವ ವಾರ್ಗಸೂಚಿಗಳನ್ವಯ ಒಟ್ಟು ೪೨ ಅರ್ಹ ನಿರ್ದಿಷ್ಟ ವರ್ಗದ ಶಿಕ್ಷಾ ಬಂದಿಗಳನ್ನು ೨೬ನೇ ಜನವರಿ ೨೦೨೩ರ ಗಣರಾಜ್ಯೋತ್ಸವದ ಪ್ರಯುಕ್ತ ಎರಡನೇ ಹಂತದಲ್ಲಿ ವಿಶೇಷ ಮಾಫ್ಬಿತಿಯೊಂದಿಗೆ ಬಿಡುಗಡೆಗೆ ಮಾಡಲು ರಾಜ್ಯಪಾಲರಿಗೆ ಶಿಫಾರಸು ಮಾಡಲು ನಿರ್ಧರಿಸಲಾಗಿದೆ ಎಂದರು.
ಸಂಪುಟ ಸಭೆಯಲ್ಲಿ ಕೈಗೊಂಡ ಇತರ ನಿರ್ಧಾರಗಳು
* ವಿವಿಧ ಠಾಣೆಗಳಲ್ಲಿ ದಾಖಲಾಗಿರುವ ೩೯ ಮೊಕದ್ದಮೆಗಳು ರದ್ದು
* ಕರ್ನಾಟಕ ಯುವ ನೀತಿ-೨೦೨೨ ಕ್ಕೆ ಅನುಮೋದನೆ.
* ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ನೀಡುವ ಯೋಜನೆಯಲ್ಲಿ ನೋಂದಣಿ ಶುಲ್ಕ ರಿಯಾಯಿತಿ
* ೨೦+೧ ಕುರಿ/ಮೇಕೆ ಘಟಕಗಳನ್ನು ಅರ್ಹ ಕುರಿಗಾಹಿಗಳಿಗೆ ರೂ. ೧,೭೫,೦೦೦/- ೨೦,೦೦೦ ಘಟಕ ವೆಚ್ಚ ಸೇರಿದಂತೆ ಒಟ್ಟಾರೆ ರೂ ೩೫೪.೫೦ ಕೋಟಿಗಳ ವೆಚ್ಚದಲ್ಲಿ ‘‘ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯನ್ನು ಅನುಷ್ಠಾನಗೊಳಿಸುವುದಕ್ಕಾಗಿ ತಾತ್ವಿಕ ಆಡಳಿತಾತ್ಮಕ ಆದೇಶಕ್ಕೆ ಘಟನೋತ್ತರ ಅನುಮೋದನೆ.
* ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಒಲಿಂಪಿಕ್ಸ್, ೨೦೨೨ ಣ ಪ್ಯಾರಾಲಿಂಪಿಕ್ಸ್, ಏಷ್ಯನ್ ಗೇಮ್ಸ್ ಮತ್ತು ಕಾಮನ್ವೆಲ್ತ್ ಗೇಮ್ಸ್ಗಳಲ್ಲಿ ಪದಕ ವಿಜೇತರಾದ ವ್ಯಕ್ತಿಗಳನ್ನು ಕೆಲವು ಹುದ್ದೆಗಳಿಗೆ ಮಾಡುವ ನೇಮಕಾತಿ) (ವಿಶೇಷ) ನಿಯಮಗಳು, ೨೦೨೨‘ಕ್ಕೆ ಅನುಮೋದನೆ. ಸಿ ಮತ್ತು ಡಿ ಕೆಟಗರಿ ಹುದ್ದೆ.
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ವಾರ ಒಂದು ವಿಶಿಷ್ಟ ದಾಖಲೆಗೆ ಪಾತ್ರರಾದರು. ಇದುವರೆಗೆ ಕರ್ನಾಟಕವನ್ನು ಸುದೀರ್ಘ…
ಏಪ್ರಿಲ್ ತಿಂಗಳ ಹೊತ್ತಿಗೆ ವಿಧಾನಸಭೆ ಚುನಾವಣೆ ನಡೆಯಲಿರುವ ಕೇರಳದಲ್ಲಿನ, ಸಿಪಿಐ(ಎಂ)ನ ಪಿಣರಾಯಿ ವಿಜಯನ್ ನೇತೃತ್ವದ ಎಲ್ಡಿಎ- ಸರ್ಕಾರ, ರಾಜಕೀಯ ಕಾರಣಗಳಿಗಾಗಿ…
ದೂರ ನಂಜುಂಡಸ್ವಾಮಿ ಕಳೆದ ವರ್ಷ ಉಂಟಾದ ನಷ್ಟದಿಂದ ಉತ್ಸಾಹ ತೋರದ ವ್ಯಾಪಾರಿಗಳು; ರೈತರಲ್ಲಿ ಆತಂಕ ದೂರ: ತೋಟಗಾರಿಕೆ ಬೆಳೆಗಳಲ್ಲಿ ಒಂದಾದ…
ಕೆ.ಬಿ.ರಮೇಶನಾಯಕ ಮೈಸೂರು: ಡಿ.ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿ ನಡೆಸಿದ ದೀರ್ಘಾವಧಿ ಆಡಳಿತವನ್ನು ಹಿಂದಿಕ್ಕಿ ದಾಖಲೆ ಬರೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು…
ಹೇಮಂತ್ ಕುಮಾರ್ ಮಂಡ್ಯ: ಈ ಸರ್ಕಾರಿ ಶಾಲೆಗೆ ೧೩೭ ವರ್ಷ... ವಿದ್ಯಾರ್ಥಿಗಳ ಸಂಖ್ಯೆ ಮಾತ್ರ ೪೧... ಒಂದು ಕಾಲದಲ್ಲಿ ೫೦೦ಕ್ಕೂ…
ಮಂಜು ಕೋಟೆ ಕೋಟೆ ರಾಜಕೀಯದಲ್ಲಿ ಹೊಸ ಬದಲಾವಣೆ; ಜಾ.ದಳಕ್ಕೆ ಶಾಕ್ ನೀಡಿದ ಮುಖಂಡರು ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಹೊಸ ರಾಜಕೀಯ ಬೆಳವಣಿಗೆಗಳು…