ಜಿಲ್ಲೆಗಳು

ಕಪಿಲಾ ನದಿಗೆ ಮತ್ತೊಂದು ಸೇತುವೆ

ಹದಿನಾರು-ನಂಜನಗೂಡು-ಸರಗೂರು ರಸ್ತೆ ಸಂಪರ್ಕ

೨೭ ಕೋಟಿ ರೂ. ಅಂದಾಜು ವೆಚ್ಚ: ಸಂಪುಟ ಒಪ್ಪಿಗೆ

ಬೆಂಗಳೂರು: ಮೈಸೂರು ಜಿಲ್ಲೆ, ನಂಜನಗೂಡು ತಾಲ್ಲೂಕಿನ ಮೈಸೂರು- ಹದಿನಾರು (ರಾಜ್ಯ ಹೆದ್ದಾರಿಯಾಗಿ ಮೇಲರ್ಜೆಗೇರಿಸಲಾಗಿದೆ) ಹಾಗೂ ಶಿರ-ನಂಜನಗೂಡು ರಸ್ತೆ (ರಾಜ್ಯ ಹೆದ್ದಾರಿ-೮೪)ಗೆ ಸಂಪರ್ಕಿಸಲು ಹದಿನಾರು ಮತ್ತು ಸರಗೂರು ರಸ್ತೆಯ ಮಾರ್ಗವಾಗಿ ಕಬಿನಿ ನದಿಗೆ ಅಡ್ಡಲಾಗಿ ರೂ. ೨೭ ಕೋಟಿಗಳ ಅಂದಾಜು ಮೊತ್ತದಲ್ಲಿ ಸೇತುವೆ ನಿರ್ಮಾಣದ  ಕಾಮಗಾರಿಗೆ ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ.
ಗುರುವಾರ ನಡೆದ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಸಿ. ಮಾಧುಸ್ವಾಮಿ ಮಾಹಿತಿ ನೀಡಿದರು.
ರಾಜ್ಯದ ವಿವಿಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ೩೯ ಮೊಕದ್ದಮೆಗಳನ್ನು ಹಿಂಪಡೆಯಲು ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಹಿಂಪಡೆದುಕೊಂಡ ಮೊಕದ್ದಮೆಗಳು ಗಂಭೀರ ಸ್ವರೂಪದ್ದಲ್ಲ, ಜನ ಪರ ಹೋರಾಟದಲ್ಲಿ ಪಾಲ್ಗೊಂಡವರ ವಿರುದ್ಧ ದಾಖಲಾಗಿದ್ದ ಸಾಮಾನ್ಯ ಪ್ರಕರಣಗಳಾಗಿವೆ ಎಂದು ಸ್ಪಷ್ಟಪಡಿಸಿದರು.
ಒಟ್ಟು ೪೧ ಪ್ರಕರಣಗಳಲ್ಲಿ ೨ ಪ್ರಕರಣಗಳು ಜನ ಪ್ರತಿನಿಧಿ ಕಾಯ್ದೆ ವ್ಯಾಪ್ತಿಯಲ್ಲಿ ಇರುವುದರಿಂದ ಅವನ್ನು ವಾಪಸ್ ಪಡೆಯುತ್ತಿಲ್ಲ ಎಂದು ತಿಳಿಸಿದರು.
ಆಜಾದಿ ಕಾ ಅಮೃತ್ ಮಹೋತ್ಸವ ಆಚರಣೆಯ ಅಂಗವಾಗಿ ಭಾರತ ಸರ್ಕಾರವು ನಿಗದಿಪಡಿಸಿರುವ ವಾರ್ಗಸೂಚಿಗಳನ್ವಯ ಒಟ್ಟು ೪೨ ಅರ್ಹ ನಿರ್ದಿಷ್ಟ ವರ್ಗದ ಶಿಕ್ಷಾ ಬಂದಿಗಳನ್ನು ೨೬ನೇ ಜನವರಿ ೨೦೨೩ರ ಗಣರಾಜ್ಯೋತ್ಸವದ ಪ್ರಯುಕ್ತ ಎರಡನೇ ಹಂತದಲ್ಲಿ ವಿಶೇಷ  ಮಾಫ್ಬಿತಿಯೊಂದಿಗೆ ಬಿಡುಗಡೆಗೆ ಮಾಡಲು ರಾಜ್ಯಪಾಲರಿಗೆ ಶಿಫಾರಸು ಮಾಡಲು ನಿರ್ಧರಿಸಲಾಗಿದೆ ಎಂದರು.

ಸಂಪುಟ ಸಭೆಯಲ್ಲಿ ಕೈಗೊಂಡ ಇತರ ನಿರ್ಧಾರಗಳು
* ವಿವಿಧ ಠಾಣೆಗಳಲ್ಲಿ ದಾಖಲಾಗಿರುವ ೩೯ ಮೊಕದ್ದಮೆಗಳು ರದ್ದು
* ಕರ್ನಾಟಕ ಯುವ ನೀತಿ-೨೦೨೨ ಕ್ಕೆ ಅನುಮೋದನೆ.
* ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ನೀಡುವ ಯೋಜನೆಯಲ್ಲಿ ನೋಂದಣಿ ಶುಲ್ಕ ರಿಯಾಯಿತಿ
* ೨೦+೧ ಕುರಿ/ಮೇಕೆ ಘಟಕಗಳನ್ನು ಅರ್ಹ ಕುರಿಗಾಹಿಗಳಿಗೆ ರೂ. ೧,೭೫,೦೦೦/- ೨೦,೦೦೦ ಘಟಕ ವೆಚ್ಚ ಸೇರಿದಂತೆ ಒಟ್ಟಾರೆ ರೂ ೩೫೪.೫೦ ಕೋಟಿಗಳ ವೆಚ್ಚದಲ್ಲಿ ‘‘ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯನ್ನು ಅನುಷ್ಠಾನಗೊಳಿಸುವುದಕ್ಕಾಗಿ ತಾತ್ವಿಕ ಆಡಳಿತಾತ್ಮಕ ಆದೇಶಕ್ಕೆ ಘಟನೋತ್ತರ ಅನುಮೋದನೆ.
* ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಒಲಿಂಪಿಕ್ಸ್, ೨೦೨೨ ಣ ಪ್ಯಾರಾಲಿಂಪಿಕ್ಸ್, ಏಷ್ಯನ್ ಗೇಮ್ಸ್ ಮತ್ತು ಕಾಮನ್‌ವೆಲ್ತ್ ಗೇಮ್ಸ್‌ಗಳಲ್ಲಿ ಪದಕ ವಿಜೇತರಾದ ವ್ಯಕ್ತಿಗಳನ್ನು ಕೆಲವು ಹುದ್ದೆಗಳಿಗೆ ಮಾಡುವ ನೇಮಕಾತಿ) (ವಿಶೇಷ) ನಿಯಮಗಳು, ೨೦೨೨‘ಕ್ಕೆ ಅನುಮೋದನೆ. ಸಿ ಮತ್ತು ಡಿ ಕೆಟಗರಿ ಹುದ್ದೆ.

andolanait

Recent Posts

ಸಿದ್ದಾಪುರ | ಕಾಡಾನೆ ದಾಳಿಗೆ ಓರ್ವ ಗಂಭೀರ

ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‌ಮಂಗಲ…

10 hours ago

ನೀಟ್-ಯುಜಿ ಪತ್ರಿಕೆ ಸೋರಿಕೆ ಪ್ರಕರಣ : ವೈದ್ಯ ಸೇರಿ ಇಬ್ಬರ ಬಂಧನ

ಹೊಸದಿಲ್ಲಿ : ನೀಟ್ ಯುಜಿ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಲಾತೂರ್ ಮೂಲದ ವೈದ್ಯರು ಮತ್ತು ಪುಣೆಯ ಕೋಚಿಂಗ್ ಸಂಸ್ಥೆಯ ಭೌತಶಾಸ್ತ್ರ…

10 hours ago

ನಾಳೆ ಸಿಎಂ-ಡಿಸಿಎಂ ಉಪಹಾರ ಸಭೆ!

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…

11 hours ago

ಎಂ.ಬಿ.ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಸ್ವಯಂ ಪ್ರೇರಿತ ದೂರು ದಾಖಲು

ಮಂಡ್ಯ: ಕರುನಾಡ ಸೇವಕರು ಸಂಘಟನೆಯ ಮುಖಂಡ ಎಂ.ಬಿ. ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಮಾನಹಾನಿಗೆ ಸಂಬಂಧಿಸಿದಂತೆ…

11 hours ago

ನಾಳೆ ಸಿಎಂ-ಡಿಸಿಎಂ ಉಪಹಾರ ಸಭೆ

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…

12 hours ago

ಜೂನ್ 4ರಿಂದ ಚೀತಾಗಳು ಸಾರ್ವಜನಿಕ ವೀಕ್ಷಣೆಗೆ ಲಭ್ಯ : ಈಶ್ವರ ಖಂಡ್ರೆ

ಬೆಂಗಳೂರು : ಕಳೆದ ಏಪ್ರಿಲ್ 18ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ 4 ಶಿವಂಗಿಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಜೂನ್…

12 hours ago