ಜಿಲ್ಲೆಗಳು

ಕಪಿಲಾ ನದಿಗೆ ಮತ್ತೊಂದು ಸೇತುವೆ

ಹದಿನಾರು-ನಂಜನಗೂಡು-ಸರಗೂರು ರಸ್ತೆ ಸಂಪರ್ಕ

೨೭ ಕೋಟಿ ರೂ. ಅಂದಾಜು ವೆಚ್ಚ: ಸಂಪುಟ ಒಪ್ಪಿಗೆ

ಬೆಂಗಳೂರು: ಮೈಸೂರು ಜಿಲ್ಲೆ, ನಂಜನಗೂಡು ತಾಲ್ಲೂಕಿನ ಮೈಸೂರು- ಹದಿನಾರು (ರಾಜ್ಯ ಹೆದ್ದಾರಿಯಾಗಿ ಮೇಲರ್ಜೆಗೇರಿಸಲಾಗಿದೆ) ಹಾಗೂ ಶಿರ-ನಂಜನಗೂಡು ರಸ್ತೆ (ರಾಜ್ಯ ಹೆದ್ದಾರಿ-೮೪)ಗೆ ಸಂಪರ್ಕಿಸಲು ಹದಿನಾರು ಮತ್ತು ಸರಗೂರು ರಸ್ತೆಯ ಮಾರ್ಗವಾಗಿ ಕಬಿನಿ ನದಿಗೆ ಅಡ್ಡಲಾಗಿ ರೂ. ೨೭ ಕೋಟಿಗಳ ಅಂದಾಜು ಮೊತ್ತದಲ್ಲಿ ಸೇತುವೆ ನಿರ್ಮಾಣದ  ಕಾಮಗಾರಿಗೆ ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ.
ಗುರುವಾರ ನಡೆದ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಸಿ. ಮಾಧುಸ್ವಾಮಿ ಮಾಹಿತಿ ನೀಡಿದರು.
ರಾಜ್ಯದ ವಿವಿಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ೩೯ ಮೊಕದ್ದಮೆಗಳನ್ನು ಹಿಂಪಡೆಯಲು ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಹಿಂಪಡೆದುಕೊಂಡ ಮೊಕದ್ದಮೆಗಳು ಗಂಭೀರ ಸ್ವರೂಪದ್ದಲ್ಲ, ಜನ ಪರ ಹೋರಾಟದಲ್ಲಿ ಪಾಲ್ಗೊಂಡವರ ವಿರುದ್ಧ ದಾಖಲಾಗಿದ್ದ ಸಾಮಾನ್ಯ ಪ್ರಕರಣಗಳಾಗಿವೆ ಎಂದು ಸ್ಪಷ್ಟಪಡಿಸಿದರು.
ಒಟ್ಟು ೪೧ ಪ್ರಕರಣಗಳಲ್ಲಿ ೨ ಪ್ರಕರಣಗಳು ಜನ ಪ್ರತಿನಿಧಿ ಕಾಯ್ದೆ ವ್ಯಾಪ್ತಿಯಲ್ಲಿ ಇರುವುದರಿಂದ ಅವನ್ನು ವಾಪಸ್ ಪಡೆಯುತ್ತಿಲ್ಲ ಎಂದು ತಿಳಿಸಿದರು.
ಆಜಾದಿ ಕಾ ಅಮೃತ್ ಮಹೋತ್ಸವ ಆಚರಣೆಯ ಅಂಗವಾಗಿ ಭಾರತ ಸರ್ಕಾರವು ನಿಗದಿಪಡಿಸಿರುವ ವಾರ್ಗಸೂಚಿಗಳನ್ವಯ ಒಟ್ಟು ೪೨ ಅರ್ಹ ನಿರ್ದಿಷ್ಟ ವರ್ಗದ ಶಿಕ್ಷಾ ಬಂದಿಗಳನ್ನು ೨೬ನೇ ಜನವರಿ ೨೦೨೩ರ ಗಣರಾಜ್ಯೋತ್ಸವದ ಪ್ರಯುಕ್ತ ಎರಡನೇ ಹಂತದಲ್ಲಿ ವಿಶೇಷ  ಮಾಫ್ಬಿತಿಯೊಂದಿಗೆ ಬಿಡುಗಡೆಗೆ ಮಾಡಲು ರಾಜ್ಯಪಾಲರಿಗೆ ಶಿಫಾರಸು ಮಾಡಲು ನಿರ್ಧರಿಸಲಾಗಿದೆ ಎಂದರು.

ಸಂಪುಟ ಸಭೆಯಲ್ಲಿ ಕೈಗೊಂಡ ಇತರ ನಿರ್ಧಾರಗಳು
* ವಿವಿಧ ಠಾಣೆಗಳಲ್ಲಿ ದಾಖಲಾಗಿರುವ ೩೯ ಮೊಕದ್ದಮೆಗಳು ರದ್ದು
* ಕರ್ನಾಟಕ ಯುವ ನೀತಿ-೨೦೨೨ ಕ್ಕೆ ಅನುಮೋದನೆ.
* ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ನೀಡುವ ಯೋಜನೆಯಲ್ಲಿ ನೋಂದಣಿ ಶುಲ್ಕ ರಿಯಾಯಿತಿ
* ೨೦+೧ ಕುರಿ/ಮೇಕೆ ಘಟಕಗಳನ್ನು ಅರ್ಹ ಕುರಿಗಾಹಿಗಳಿಗೆ ರೂ. ೧,೭೫,೦೦೦/- ೨೦,೦೦೦ ಘಟಕ ವೆಚ್ಚ ಸೇರಿದಂತೆ ಒಟ್ಟಾರೆ ರೂ ೩೫೪.೫೦ ಕೋಟಿಗಳ ವೆಚ್ಚದಲ್ಲಿ ‘‘ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯನ್ನು ಅನುಷ್ಠಾನಗೊಳಿಸುವುದಕ್ಕಾಗಿ ತಾತ್ವಿಕ ಆಡಳಿತಾತ್ಮಕ ಆದೇಶಕ್ಕೆ ಘಟನೋತ್ತರ ಅನುಮೋದನೆ.
* ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಒಲಿಂಪಿಕ್ಸ್, ೨೦೨೨ ಣ ಪ್ಯಾರಾಲಿಂಪಿಕ್ಸ್, ಏಷ್ಯನ್ ಗೇಮ್ಸ್ ಮತ್ತು ಕಾಮನ್‌ವೆಲ್ತ್ ಗೇಮ್ಸ್‌ಗಳಲ್ಲಿ ಪದಕ ವಿಜೇತರಾದ ವ್ಯಕ್ತಿಗಳನ್ನು ಕೆಲವು ಹುದ್ದೆಗಳಿಗೆ ಮಾಡುವ ನೇಮಕಾತಿ) (ವಿಶೇಷ) ನಿಯಮಗಳು, ೨೦೨೨‘ಕ್ಕೆ ಅನುಮೋದನೆ. ಸಿ ಮತ್ತು ಡಿ ಕೆಟಗರಿ ಹುದ್ದೆ.

andolanait

Recent Posts

ಮಂಡ್ಯ | ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿದ್ದ ಕೈದಿ ಜನರ ಕೈಗೆ ಸಿಕ್ಕಿಬಿದ್ದ

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…

8 hours ago

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…

8 hours ago

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

9 hours ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

9 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

14 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

17 hours ago