ಜಿಲ್ಲೆಗಳು

ಮೌನಾಚರಿಸಿ ಹುತಾತ್ಮರಿಗೆ ಗೌರವ ನಮನ

ಮೈಸೂರು: ನಗರದ ಮೆಟ್ರೊಪೋಲ್ ವೃತ್ತದಲ್ಲಿರುವ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಪ್ರತಿಮೆಯ ಮುಂಭಾಗ ಇಂದು ಸಂಜೆ 26/11 ವಾಣಿಜ್ಯ ಮಹಾನಗರಿ ಮುಂಬಯಿ ದಾಳಿಗೆ 14 ವರ್ಷದ ಪ್ರಯುಕ್ತ  ಯುವ ಭಾರತ್ ಸಂಘಟನೆ ಹಾಗೂ ಟೀo ಮೈಸೂರು ಮತ್ತು ವೀರ ಸಾವರ್ಕರ್ ಯುವ ಬಳಗ ವತಿಯಿಂದ ಹುತಾತ್ಮರನ್ನು ನೆನೆದು ಮೇಣದ ಬತ್ತಿ ಹಿಡಿದು ಅವರನ್ನು ಸ್ಮರಿಸಿ ಒಂದು ನಿಮಿಷ ಕಾಲ ಮೌನ ಆಚರಣೆ ಮಾಡಲಾಯಿತು. 

ಈ ಸಂದರ್ಭದಲ್ಲಿ ಮಾತನಾಡಿದ ಯುವ ಭಾರತ ಸಂಘಟನೆಯ ಅಧ್ಯಕ್ಷರಾದ ಜೋಗಿ ಮಂಜು ಅವರು 26/11 ಭಾರತೀಯರ ಪಾಲಿಗೆ ಅತ್ಯಂತ ಕರಾಳ ದಿನಕ್ಕೆ ಇವತ್ತಿನ ದಿನ ಬರೋಬ್ಬರಿ 14 ವರ್ಷಗಳ ಹಿಂದೆ ಇಸ್ಲಾಂ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ ದಿಂದ ದೇಶದ ವಾಣಿಜ್ಯ ನಗರಿಯಲ್ಲಿರುವ ಮುಂಬಯಿನ ತಾಜ್ ಮಹಲ್ ಪ್ಯಾಲೆಸ್ ಹೋಟೆಲ್ ಸೇರಿದಂತೆ ಅನೇಕ ಸ್ಥಳಗಳ ಮೇಲೆ ನಡೆದ ಈ ದಾಳಿ ಮುಂಬಯಿನ ವಾಣಿಜ್ಯ,ವ್ಯಾಪಾರ ಮತ್ತು ವ್ಯವಹಾರ ತಲ್ಲಣಗೊಳಿಸಿದಲ್ಲದೇ ಇಡಿ ರಾಷ್ಟ್ರವನ್ನೇ ತಲ್ಲಣಗೊಳಿಸಿತ್ತು. 

ಅಂದು ಈ ದಾಳಿ ಬರೀ ಮುಂಬಯಿನ ಮೇಲೆ ದಾಳಿ ಅಲ್ಲ ಇದು ಪ್ರತಿಯೊಬ್ಬ ಭಾರತೀಯನ ಮನಸ್ಸಿನ ಮೇಲೆ ಆದ ದಾಳಿ ಅಂತಾ ಇಡೀ ದೇಶವೇ ಭಾವಿಸಿತ್ತು.ದಾಳಿಯಲ್ಲಿ ನಮ್ಮ ನಾಡಿನ ಹೆಮ್ಮೆಯ ಪುತ್ರ, ಮೇಜರ್ ಸಂದೀಪ ಉನ್ನಿಕೃಷ್ಣನ್ನ ಸೇರಿದಂತೆ ಪೋಲೀಸರು, ಸೈನಿಕರು,ಮುಂಬಯಿನ ನಿವಾಸಿಗಳು ಸೇರಿ 150ಕ್ಕೂ ಹೆಚ್ಚು ಜನ ಹುತಾತ್ಮವಾದರು,300 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು ಎಂದು ಹುತಾತ್ಮರು ನಮಗೆ ಸದಾ ಕಾಲ ಆದರ್ಶವಾಗಿರುತ್ತಾರೆ ಎಂದರು.

ನಂತರ ಟೀo ಮೈಸೂರು ತಂಡದ ಸಂಚಾಲಕರಾದ ಗೋಕುಲ್ ಗೋವರ್ಧನ್ ಮಾತನಾಡಿ ನಮ್ಮ ಇಂದಿನ ಸುಂದರ ಜೀವನ, ಸಂತೋಷಕ್ಕಾಗಿ ತಮ್ಮ ಅಂದಿನ ಜೀವನವನ್ನೇ ಅರ್ಪಿಸಿದ ಅಸಂಖ್ಯಾತ ಧೀರ ಯೋಧರ ಬಲಿದಾನ,ತ್ಯಾಗ ಸ್ಮರಿಸಿಕೊಳ್ಳೊಣ ಮತ್ತು ನೆನಪು ಮಾಡಿಕೊಳ್ಳೊಣ ಎಂದರು.

ಸಂಧರ್ಭದಲ್ಲಿ ಯುವ ಭಾರತ್ ಸಂಘಟನೆಯ ಅಧ್ಯಕ್ಷರಾದ ಜೋಗಿ ಮಂಜು, ವೀರ ಸಾವರ್ಕರ್ ಯುವ ಬಳಗದ ಅಧ್ಯಕ್ಷರಾದ ರಾಕೇಶ್ ಭಟ್, ಟೀo ಮೈಸೂರು ಮುಖ್ಯ ಸಂಚಾಲಕರಾದ ಗೋಕುಲ್ ಗೋವರ್ಧನ್, ಸಂದೇಶ್, ಪ್ರಮೋದ್ ಗೌಡ, ಟಿ ಎಸ್ ಅರುಣ್, ಎಸ್ ಎನ್ ರಾಜೇಶ್,ಅನೋಜ್, ಗಣೇಶ್ ಗೋಪಾಲ್, ಮಣಿರತ್ನಂ, ಚಂದ್ರಪ್ಪ, ಹರೀಶ್ ಬಾಬು, ಅನಿಲ್ ಜೈನ್, ಯತೀಶ್, ಮಿನುಗು, ಹಿರಿಯಣ್ಣ ಆನಂದ್, ರಘು, ಬಸವರಾಜು, ಹಾಗೂ ಇತರರು ಹಾಜರಿದ್ದರು.

andolanait

Recent Posts

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

5 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

12 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

12 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

12 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

12 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

12 hours ago