ಜಿಲ್ಲೆಗಳು

ಮೌನಾಚರಿಸಿ ಹುತಾತ್ಮರಿಗೆ ಗೌರವ ನಮನ

ಮೈಸೂರು: ನಗರದ ಮೆಟ್ರೊಪೋಲ್ ವೃತ್ತದಲ್ಲಿರುವ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಪ್ರತಿಮೆಯ ಮುಂಭಾಗ ಇಂದು ಸಂಜೆ 26/11 ವಾಣಿಜ್ಯ ಮಹಾನಗರಿ ಮುಂಬಯಿ ದಾಳಿಗೆ 14 ವರ್ಷದ ಪ್ರಯುಕ್ತ  ಯುವ ಭಾರತ್ ಸಂಘಟನೆ ಹಾಗೂ ಟೀo ಮೈಸೂರು ಮತ್ತು ವೀರ ಸಾವರ್ಕರ್ ಯುವ ಬಳಗ ವತಿಯಿಂದ ಹುತಾತ್ಮರನ್ನು ನೆನೆದು ಮೇಣದ ಬತ್ತಿ ಹಿಡಿದು ಅವರನ್ನು ಸ್ಮರಿಸಿ ಒಂದು ನಿಮಿಷ ಕಾಲ ಮೌನ ಆಚರಣೆ ಮಾಡಲಾಯಿತು. 

ಈ ಸಂದರ್ಭದಲ್ಲಿ ಮಾತನಾಡಿದ ಯುವ ಭಾರತ ಸಂಘಟನೆಯ ಅಧ್ಯಕ್ಷರಾದ ಜೋಗಿ ಮಂಜು ಅವರು 26/11 ಭಾರತೀಯರ ಪಾಲಿಗೆ ಅತ್ಯಂತ ಕರಾಳ ದಿನಕ್ಕೆ ಇವತ್ತಿನ ದಿನ ಬರೋಬ್ಬರಿ 14 ವರ್ಷಗಳ ಹಿಂದೆ ಇಸ್ಲಾಂ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ ದಿಂದ ದೇಶದ ವಾಣಿಜ್ಯ ನಗರಿಯಲ್ಲಿರುವ ಮುಂಬಯಿನ ತಾಜ್ ಮಹಲ್ ಪ್ಯಾಲೆಸ್ ಹೋಟೆಲ್ ಸೇರಿದಂತೆ ಅನೇಕ ಸ್ಥಳಗಳ ಮೇಲೆ ನಡೆದ ಈ ದಾಳಿ ಮುಂಬಯಿನ ವಾಣಿಜ್ಯ,ವ್ಯಾಪಾರ ಮತ್ತು ವ್ಯವಹಾರ ತಲ್ಲಣಗೊಳಿಸಿದಲ್ಲದೇ ಇಡಿ ರಾಷ್ಟ್ರವನ್ನೇ ತಲ್ಲಣಗೊಳಿಸಿತ್ತು. 

ಅಂದು ಈ ದಾಳಿ ಬರೀ ಮುಂಬಯಿನ ಮೇಲೆ ದಾಳಿ ಅಲ್ಲ ಇದು ಪ್ರತಿಯೊಬ್ಬ ಭಾರತೀಯನ ಮನಸ್ಸಿನ ಮೇಲೆ ಆದ ದಾಳಿ ಅಂತಾ ಇಡೀ ದೇಶವೇ ಭಾವಿಸಿತ್ತು.ದಾಳಿಯಲ್ಲಿ ನಮ್ಮ ನಾಡಿನ ಹೆಮ್ಮೆಯ ಪುತ್ರ, ಮೇಜರ್ ಸಂದೀಪ ಉನ್ನಿಕೃಷ್ಣನ್ನ ಸೇರಿದಂತೆ ಪೋಲೀಸರು, ಸೈನಿಕರು,ಮುಂಬಯಿನ ನಿವಾಸಿಗಳು ಸೇರಿ 150ಕ್ಕೂ ಹೆಚ್ಚು ಜನ ಹುತಾತ್ಮವಾದರು,300 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು ಎಂದು ಹುತಾತ್ಮರು ನಮಗೆ ಸದಾ ಕಾಲ ಆದರ್ಶವಾಗಿರುತ್ತಾರೆ ಎಂದರು.

ನಂತರ ಟೀo ಮೈಸೂರು ತಂಡದ ಸಂಚಾಲಕರಾದ ಗೋಕುಲ್ ಗೋವರ್ಧನ್ ಮಾತನಾಡಿ ನಮ್ಮ ಇಂದಿನ ಸುಂದರ ಜೀವನ, ಸಂತೋಷಕ್ಕಾಗಿ ತಮ್ಮ ಅಂದಿನ ಜೀವನವನ್ನೇ ಅರ್ಪಿಸಿದ ಅಸಂಖ್ಯಾತ ಧೀರ ಯೋಧರ ಬಲಿದಾನ,ತ್ಯಾಗ ಸ್ಮರಿಸಿಕೊಳ್ಳೊಣ ಮತ್ತು ನೆನಪು ಮಾಡಿಕೊಳ್ಳೊಣ ಎಂದರು.

ಸಂಧರ್ಭದಲ್ಲಿ ಯುವ ಭಾರತ್ ಸಂಘಟನೆಯ ಅಧ್ಯಕ್ಷರಾದ ಜೋಗಿ ಮಂಜು, ವೀರ ಸಾವರ್ಕರ್ ಯುವ ಬಳಗದ ಅಧ್ಯಕ್ಷರಾದ ರಾಕೇಶ್ ಭಟ್, ಟೀo ಮೈಸೂರು ಮುಖ್ಯ ಸಂಚಾಲಕರಾದ ಗೋಕುಲ್ ಗೋವರ್ಧನ್, ಸಂದೇಶ್, ಪ್ರಮೋದ್ ಗೌಡ, ಟಿ ಎಸ್ ಅರುಣ್, ಎಸ್ ಎನ್ ರಾಜೇಶ್,ಅನೋಜ್, ಗಣೇಶ್ ಗೋಪಾಲ್, ಮಣಿರತ್ನಂ, ಚಂದ್ರಪ್ಪ, ಹರೀಶ್ ಬಾಬು, ಅನಿಲ್ ಜೈನ್, ಯತೀಶ್, ಮಿನುಗು, ಹಿರಿಯಣ್ಣ ಆನಂದ್, ರಘು, ಬಸವರಾಜು, ಹಾಗೂ ಇತರರು ಹಾಜರಿದ್ದರು.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

6 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

6 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

7 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

9 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

12 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

12 hours ago