Mysore
24
overcast clouds

Social Media

ಶನಿವಾರ, 13 ಜೂನ್ 2026
Light
Dark

ಕರಿಯಪ್ಪ ಸಾವಿಗೆ ಕಾರಣರಾದ ಅರಣ್ಯ ಇಲಾಖೆ ಅಧಿಕಾರಿಗಳನ್ನು ತಕ್ಷಣ ವಜಾಗೊಳಿಸಬೇಕು : ಮುತ್ತಯ್ಯ

ಹನೂರು: ಮೈಸೂರು ಜಿಲ್ಲೆ ಹೆಗ್ಗಡೆ ದೇವನ ಕೋಟೆ ತಾಲೂಕಿನ ಜೇನು ಕುರುಬ ಸಮುದಾಯದ ಕರಿಯಪ್ಪ ನನ್ನು ಜಿಂಕೆ ಮಾಂಸ ದ ಕೇಸಿನಲ್ಲಿ ವಿಚಾರಣೆ ನಡೆಸುವ ನೆಪದಲ್ಲಿ ಅಮಾನುಷವಾಗಿ ಹೊಡೆದು ಸಾಯಿಸಿದ ಪ್ರಕರಣದಲ್ಲಿ ಸತ್ಯ ಸತ್ಯತೆ ಕಂಡುಹಿಡಿಯಲು ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಒಪ್ಪಿಸಬೇಕೆಂದು ರಾಜ್ಯ ಮೂಲ ಆದಿವಾಸಿ ವೇದಿಕೆ ಕಾರ್ಯದರ್ಶಿ ಮುತ್ತಯ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.

ರಾಜ್ಯದ ವಿವಿಧ ಭಾಗಗಳಲ್ಲಿ ನಿರಂತರವಾಗಿ ಅರಣ್ಯಾಧಿಕಾರಿಗಳು ಆದಿವಾಸಿಗಳನ್ನು ಅಮಾನವೀಯವಾಗಿ ನಡೆಸಿ ಕೊಳ್ಳುತಿದ್ದು ಉದ್ದೇಶಪೂರ್ವಕವಾಗಿ ಕೇಸುಗಳನ್ನು ಹಾಕಿ ಬಂದಿಸಿ ಹಲ್ಲೆ ನಡೆಸಿ ಕೊಂದು ಹಾಕುವ ಅತಿರೇಕದ ನಡುವಳಿಕೆ ಯನ್ನ ಪ್ರದರ್ಶಿಸುತ್ತಿರುವ ಅಧಿಕಾರಿಗಳ ಮನ ಸ್ಥಿತಿಯನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ತಿಳಿಸಿದ್ದಾರೆ.

ರಾಮನಗರದ ಬನ್ನೇರುಘಟ್ಟ ಅರಣ್ಯದಲ್ಲಿ ಆದಿವಾಸಿಗಳ ಮೇಲೆ ಹಲ್ಲೆ,ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ರಾಣಿ ಗೇಟ್ ಜೇನುಕುರುಬ ಸಮುದಾಯದ ಬಸವನ ಮೇಲೆ ಗುಂಡು ಹಾರಿಸಿದ ಪ್ರಕರಣ,ಮಂಗಳೂರಿನಲ್ಲಿ ಕೊರಗರ ಮೇಲೆ ನಡೆದ ಪೊಲೀಸ್ ದೌರ್ಜನ್ಯ ಪ್ರಕರಣ ಉದಾಹರಣೆ ಯಷ್ಟೇ,ಆದಿವಾಸಿಗಳ ಹಕ್ಕುಗಳು ಸರಕಾರಿ ಯಂತ್ರದಿಂದ ಎಗ್ಗಿಲ್ಲದೆ ದಮನ ವಾಗುತಿದ್ದು, ರಕ್ಷಣೆಯೇ ಇಲ್ಲವಾಗಿದೆ ಎಂದು ಅವರು ತಿಳಿಸಿದ್ದಾರೆ.
ಕರಿಯಪ್ಪ ಸಾವಿಗೆ ಕಾರಣರಾದ ಅರಣ್ಯ ಅಧಿಕಾರಿಗಳನ್ನು ತಕ್ಷಣ ಕೆಲಸದಿಂದ ವಜಾ ಮಾಡಬೇಕು ಹಾಗೂ ಕರಿಯಪ್ಪ ಕುಟುಂಬಕ್ಕೆ ಒಂದು ಕೋಟಿ ರೂಪಾಯಿ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!