ಹನೂರು: ಮೈಸೂರು ಜಿಲ್ಲೆ ಹೆಗ್ಗಡೆ ದೇವನ ಕೋಟೆ ತಾಲೂಕಿನ ಜೇನು ಕುರುಬ ಸಮುದಾಯದ ಕರಿಯಪ್ಪ ನನ್ನು ಜಿಂಕೆ ಮಾಂಸ ದ ಕೇಸಿನಲ್ಲಿ ವಿಚಾರಣೆ ನಡೆಸುವ ನೆಪದಲ್ಲಿ ಅಮಾನುಷವಾಗಿ ಹೊಡೆದು ಸಾಯಿಸಿದ ಪ್ರಕರಣದಲ್ಲಿ ಸತ್ಯ ಸತ್ಯತೆ ಕಂಡುಹಿಡಿಯಲು ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಒಪ್ಪಿಸಬೇಕೆಂದು ರಾಜ್ಯ ಮೂಲ ಆದಿವಾಸಿ ವೇದಿಕೆ ಕಾರ್ಯದರ್ಶಿ ಮುತ್ತಯ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.
ರಾಜ್ಯದ ವಿವಿಧ ಭಾಗಗಳಲ್ಲಿ ನಿರಂತರವಾಗಿ ಅರಣ್ಯಾಧಿಕಾರಿಗಳು ಆದಿವಾಸಿಗಳನ್ನು ಅಮಾನವೀಯವಾಗಿ ನಡೆಸಿ ಕೊಳ್ಳುತಿದ್ದು ಉದ್ದೇಶಪೂರ್ವಕವಾಗಿ ಕೇಸುಗಳನ್ನು ಹಾಕಿ ಬಂದಿಸಿ ಹಲ್ಲೆ ನಡೆಸಿ ಕೊಂದು ಹಾಕುವ ಅತಿರೇಕದ ನಡುವಳಿಕೆ ಯನ್ನ ಪ್ರದರ್ಶಿಸುತ್ತಿರುವ ಅಧಿಕಾರಿಗಳ ಮನ ಸ್ಥಿತಿಯನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ತಿಳಿಸಿದ್ದಾರೆ.
ರಾಮನಗರದ ಬನ್ನೇರುಘಟ್ಟ ಅರಣ್ಯದಲ್ಲಿ ಆದಿವಾಸಿಗಳ ಮೇಲೆ ಹಲ್ಲೆ,ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ರಾಣಿ ಗೇಟ್ ಜೇನುಕುರುಬ ಸಮುದಾಯದ ಬಸವನ ಮೇಲೆ ಗುಂಡು ಹಾರಿಸಿದ ಪ್ರಕರಣ,ಮಂಗಳೂರಿನಲ್ಲಿ ಕೊರಗರ ಮೇಲೆ ನಡೆದ ಪೊಲೀಸ್ ದೌರ್ಜನ್ಯ ಪ್ರಕರಣ ಉದಾಹರಣೆ ಯಷ್ಟೇ,ಆದಿವಾಸಿಗಳ ಹಕ್ಕುಗಳು ಸರಕಾರಿ ಯಂತ್ರದಿಂದ ಎಗ್ಗಿಲ್ಲದೆ ದಮನ ವಾಗುತಿದ್ದು, ರಕ್ಷಣೆಯೇ ಇಲ್ಲವಾಗಿದೆ ಎಂದು ಅವರು ತಿಳಿಸಿದ್ದಾರೆ.
ಕರಿಯಪ್ಪ ಸಾವಿಗೆ ಕಾರಣರಾದ ಅರಣ್ಯ ಅಧಿಕಾರಿಗಳನ್ನು ತಕ್ಷಣ ಕೆಲಸದಿಂದ ವಜಾ ಮಾಡಬೇಕು ಹಾಗೂ ಕರಿಯಪ್ಪ ಕುಟುಂಬಕ್ಕೆ ಒಂದು ಕೋಟಿ ರೂಪಾಯಿ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…