ಜಿಲ್ಲೆಗಳು

ಕರಿಯಪ್ಪ ಸಾವಿಗೆ ಕಾರಣರಾದ ಅರಣ್ಯ ಇಲಾಖೆ ಅಧಿಕಾರಿಗಳನ್ನು ತಕ್ಷಣ ವಜಾಗೊಳಿಸಬೇಕು : ಮುತ್ತಯ್ಯ

ಹನೂರು: ಮೈಸೂರು ಜಿಲ್ಲೆ ಹೆಗ್ಗಡೆ ದೇವನ ಕೋಟೆ ತಾಲೂಕಿನ ಜೇನು ಕುರುಬ ಸಮುದಾಯದ ಕರಿಯಪ್ಪ ನನ್ನು ಜಿಂಕೆ ಮಾಂಸ ದ ಕೇಸಿನಲ್ಲಿ ವಿಚಾರಣೆ ನಡೆಸುವ ನೆಪದಲ್ಲಿ ಅಮಾನುಷವಾಗಿ ಹೊಡೆದು ಸಾಯಿಸಿದ ಪ್ರಕರಣದಲ್ಲಿ ಸತ್ಯ ಸತ್ಯತೆ ಕಂಡುಹಿಡಿಯಲು ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಒಪ್ಪಿಸಬೇಕೆಂದು ರಾಜ್ಯ ಮೂಲ ಆದಿವಾಸಿ ವೇದಿಕೆ ಕಾರ್ಯದರ್ಶಿ ಮುತ್ತಯ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.

ರಾಜ್ಯದ ವಿವಿಧ ಭಾಗಗಳಲ್ಲಿ ನಿರಂತರವಾಗಿ ಅರಣ್ಯಾಧಿಕಾರಿಗಳು ಆದಿವಾಸಿಗಳನ್ನು ಅಮಾನವೀಯವಾಗಿ ನಡೆಸಿ ಕೊಳ್ಳುತಿದ್ದು ಉದ್ದೇಶಪೂರ್ವಕವಾಗಿ ಕೇಸುಗಳನ್ನು ಹಾಕಿ ಬಂದಿಸಿ ಹಲ್ಲೆ ನಡೆಸಿ ಕೊಂದು ಹಾಕುವ ಅತಿರೇಕದ ನಡುವಳಿಕೆ ಯನ್ನ ಪ್ರದರ್ಶಿಸುತ್ತಿರುವ ಅಧಿಕಾರಿಗಳ ಮನ ಸ್ಥಿತಿಯನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ತಿಳಿಸಿದ್ದಾರೆ.

ರಾಮನಗರದ ಬನ್ನೇರುಘಟ್ಟ ಅರಣ್ಯದಲ್ಲಿ ಆದಿವಾಸಿಗಳ ಮೇಲೆ ಹಲ್ಲೆ,ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ರಾಣಿ ಗೇಟ್ ಜೇನುಕುರುಬ ಸಮುದಾಯದ ಬಸವನ ಮೇಲೆ ಗುಂಡು ಹಾರಿಸಿದ ಪ್ರಕರಣ,ಮಂಗಳೂರಿನಲ್ಲಿ ಕೊರಗರ ಮೇಲೆ ನಡೆದ ಪೊಲೀಸ್ ದೌರ್ಜನ್ಯ ಪ್ರಕರಣ ಉದಾಹರಣೆ ಯಷ್ಟೇ,ಆದಿವಾಸಿಗಳ ಹಕ್ಕುಗಳು ಸರಕಾರಿ ಯಂತ್ರದಿಂದ ಎಗ್ಗಿಲ್ಲದೆ ದಮನ ವಾಗುತಿದ್ದು, ರಕ್ಷಣೆಯೇ ಇಲ್ಲವಾಗಿದೆ ಎಂದು ಅವರು ತಿಳಿಸಿದ್ದಾರೆ.
ಕರಿಯಪ್ಪ ಸಾವಿಗೆ ಕಾರಣರಾದ ಅರಣ್ಯ ಅಧಿಕಾರಿಗಳನ್ನು ತಕ್ಷಣ ಕೆಲಸದಿಂದ ವಜಾ ಮಾಡಬೇಕು ಹಾಗೂ ಕರಿಯಪ್ಪ ಕುಟುಂಬಕ್ಕೆ ಒಂದು ಕೋಟಿ ರೂಪಾಯಿ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.

andolanait

Recent Posts

ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ವಿದ್ಯಾರ್ಥಿ ಸಾವು

ಸುಂಟಿಕೊಪ್ಪ: ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ಮೂಲದ ವಿದ್ಯಾರ್ಥಿಯೋರ್ವ ಉಸಿರು ಚೆಲ್ಲಿರುವ ಘಟನೆ ಇಂದು ಬೆಳಿಗ್ಗೆ ಹೇರೂರುವಿನಲ್ಲಿ ನಡೆದಿದೆ.…

15 mins ago

ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಬೇಕು: ಎನ್.ಚಲುವರಾಯಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ಕಂದಾಯ ಇಲಾಖೆ ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸಬೇಕು ಎಂದು ಕೃಷಿ ಹಾಗೂ…

23 mins ago

ವೈರಮುಡಿ ಬ್ರಹ್ಮೋತ್ಸವದಲ್ಲಿ ಭಕ್ತರಿಗೆ ತೊಂದರೆ ಆಗದಂತೆ ಕ್ರಮವಹಿಸಿ: ಎನ್.ಚಲುವರಾಯಸ್ವಾಮಿ

ಮಂಡ್ಯ: 2026ರ ಸಾಲಿನ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಮಾರ್ಚ್ 23ರಿಂದ ಏಪ್ರಿಲ್.4ರವರೆಗೆ ನಡೆಯಲಿದೆ. ಈ ಉತ್ಸವದ ಪ್ರಮುಖ…

2 hours ago

ಮಂಡ್ಯ ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ನಾನು ಕೊಟ್ಟ ಮಾತಿನಂತೆ ನುಡಿದಂತೆ ನಡೆಯುತ್ತಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ತಿಳಿಸಿದ್ದಾರೆ.…

2 hours ago

ಶೇ.20ರಷ್ಟಾದರೂ ಕಮರ್ಷಿಯಲ್ ಸಿಲಿಂಡರ್ ಒದಗಿಸಲು ಕ್ರಮವಹಿಸಿ: ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ

ಮೈಸೂರು: ಕೆಲವು ಕಡೆ ಊಟದ ವಿಚಾರಕ್ಕಾಗಿಯೇ ಪ್ರವಾಸಿಗರು ಹೋಟೆಲ್‌ ರೂಂ ಬುಕ್ಕಿಂಗ್‌ ಕ್ಯಾನ್ಸಲ್‌ ಮಾಡಿಕೊಂಡಿದ್ದಾರೆ ಎಂದು ಹೋಟೆಲ್‌ ಮಾಲೀಕರ ಸಂಘದ…

3 hours ago

ಯಾವುದೇ ಕಾರಣಕ್ಕೂ ಎನ್‌ಡಿಎ ಮೈತ್ರಿಕೂಟ ಸೇರಲ್ಲ: ಟಿವಿಕೆ ಸ್ಪಷ್ಟನೆ

ಚೆನ್ನೈ: ಟಿವಿಕೆ ಪಕ್ಷ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸೇರಲಿದೆ ಎಂಬ ಸುದ್ದಿಗಳು ಕೇಳಿಬರುತ್ತಿರುವ ಬೆನ್ನಲ್ಲೇ ಟಿವಿಕೆ ಈಗ ಸ್ಪಷ್ಟನೆ…

3 hours ago