ಮೈಸೂರು: ಮಂಡಲ್ ವರದಿಯ ಶಿಫಾರಸ್ಸಿನಂತೆ ಹಿಂದುಳಿದ ವರ್ಗಗಕ್ಕೆ ಶೇ.೨೮ರಷ್ಟು ಮತ್ತು ಪ್ರವರ್ಗ-೧ಕ್ಕೆ ಶೇ.೯ರಷ್ಟು ಮೀಸಲಾತಿಯನ್ನು ಹೆಚ್ಚಿಸುವಂತೆ ಆಗ್ರಹಿಸಿ ಹೋರಾಟ ರೂಪಿಸಲು ಡಿ.೫ರಂದು ದುಂಡು ಮೇಜಿನ ಸಭೆ ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಆಗ್ರಹಿಸಿದೆ.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ವೇದಿಕೆಯ ರಾಜ್ಯಾಧ್ಯಕ್ಷ ಕೆ.ಎಸ್.ಶಿವರಾಮ್ ಮಾತನಾಡಿ, ಪ್ರಸ್ತುತ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ತಳ ಸಮುದಾಯಗಳನ್ನು ಮೀಸಲಾತಿ ಪ್ರಮಾಣದಿಂದ ವಂಚಿಸುವ ಹುನ್ನಾರ ನಡೆಯುತ್ತಿದೆ. ಇದರ ಭಾಗವಾಗಿ ಕೇಂದ್ರ ಸರ್ಕಾರ ಸಂವಿಧಾನಕ್ಕೆ ೧೦೩ನೇಯ ತಿದ್ದುಪಡಿ ತಂದು ಶೇ.೪-೫ರಷ್ಟಿರುವ ಸಮುದಾಯಗಳಿಗೆ ಆರ್ಥಿಕವಾಗಿ ಹಿಂದುಳಿದಿರುವ ಕಾರಣ ನೀಡಿ ಶೇ.೧೦ರಷ್ಟು ಮೀಸಲಾತಿ ನೀಡಿದ್ದು, ಹಿಂದುಳಿದ ವರ್ಗಗಳಿಗೂ ಕೂಡ ಕಲ್ಪಿಸಬೇಕು. ಹೀಗಾಗಿ ಇತರ ಹಿಂದುಳಿದ ವರ್ಗಗಳಿಗೂ ಕೂಡ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನಿಗದಿ ಪಡಿಸುವ ಕೋಟಾ ನಿಗದಿ ಪಡಿಸಬೇಕಾದ ಹೊಣೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮೇಲಿದೆ ಎಂದರು.
ಸರ್ಕಾರ ಹಿಂದುಳಿದ ವರ್ಗಗಳ ಮೀಸಲಾತಿ ಪ್ರಮಾಣವನ್ನು ಎರಡು- ಎ ವರ್ಗಕ್ಕೆ ಶೇ. ೧೫ ರಿಂದ ೨೭ಕ್ಕೆ ಹೆಚ್ಚಿಸಬೇಕು. ಜೊತೆಗೆ ಪ್ರವರ್ಗ ಒಂದರ ಅಡಿಂಲ್ಲಿ ಬರುವ ಮೀಸಲಾತಿ ಪ್ರಮಾಣವನ್ನು ಶೇ.೪ರಿಂದ ೯ಕ್ಕೆ ಹೆಚ್ಚಿಸುವ ಮೂಲಕ ಸರ್ಕಾರ ಸಾಮಾಜಿಕ ನ್ಯಾಂ ಎತ್ತಿ ಹಿಡಿಂಬೇಕು. ಇಲ್ಲದಿದ್ದಲ್ಲಿ ವರ್ಗ ಸಂಘರ್ಷ ಉಂಟಾಗಲಿದೆ. ಈ ಹಿಂದೆ ಮೀಸಲಾತಿ ಂರಿಗೂ ನೀಡಬಾರದೆಂದು ಹೋರಾಟ, ಹಿಂಸಾಚಾರಕ್ಕೆ ಕಾರಣರಾದವರೇ ಈಗ ಮೀಸಳಾತಿ ಪಡೆಂಲು ಮುಗಿಬಿದ್ದು, ಪಡೆಂತ್ತಿರುವುದು ಖಂಡನೀಯ ಎಂದು ಕಿಡಿಕಾರಿದರು.
ಡಿ.೫ರಂಂದು ದುಂಡಿ ಮೇಜಿನ ಸಭೆ: ಈಗ ಎಲ್ಲರೂ ಮೀಸಲಾತಿ ಪರವೇ ಇದ್ದಾರೆ. ಅಂತೂ, ಇಂತೂ ಮೀಸಲಾತಿ ಎಲ್ಲರಿಗೂ ಬೇಕು ಎಂಬ ಕಾಲಘಟ್ಟದಲ್ಲಿ ನಾವಿzವೆ. ಇದನ್ನು ಸಮರ್ಥವಾಗಿ, ಸಂವಿಧಾನದ ಆಶಂಗಳಿಗೆ ಧಕ್ಕೆ ಬಾರದ ರೀತಿಂಲ್ಲಿ ಮೀಸಲಾತಿ ಜಾರಿಗೊಳಿಸುವ ಜವಾಬ್ದಾರಿ ಸರ್ಕಾರದ ಮೇಲಿದೆ. ಈ ನಿಟ್ಟಿನಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿ ಹೆಚ್ಚಳಕ್ಕೆ ಡಿ.೫ರಂದು ಬೆಳಿಗ್ಗೆ ೧೧ಕ್ಕೆ ಜಲದರ್ಶಿನಿಯಲ್ಲಿ ದುಂಡು ಮೇಜಿನ ಸಭೆ ನಡೆಯಲಿದೆ. ಪಕ್ಷಾತೀತವಾದ ಸಭೆ ಇದಾಗಿದ್ದು, ವಿವಿಧ ಸಮುದಾಯದ ಸ್ವಾಮೀಜಿಗಳು, ಮುಖಂಡರು, ನಾಯಕರುಗಳು ಮುಂತಾದವರು ಪಾಲ್ಗೊಳ್ಳುವರು ಎಂದರು.
ಡಿ. ನಾಗಭೂಷಣ್, ಎನ್.ಆರ್. ನಾಗೇಶ್, ರವಿನಂದನ್, ಯೋಗೀಶ್ ಉಪ್ಪಾರ್, ಮೊಗಣ್ಣಾಚಾರ್, ಲೋಕೇಶ್ಕುಮಾರ್ ಮಾದಾಪುರ, ಹರೀಶ್ ಮೊಗಣ್ಣ, ಎಚ್. ಪ್ರಕಾಶ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ಮೈಸೂರಿನ ಜಿಲ್ಲಾ ಪತ್ರಕರ್ತರ ಭವನದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ವತಿಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮ್ ಮಾತನಾಡಿದರು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…